ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ.
ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ ತಾಂತ್ರಿಕ ಕಾರ್ಯಕ್ರಮ ‘Inspirus 2K19‘ಉದ್ಘಾಟನಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ ಲೋಬೊ ಅವರ ಟೇಕ್ಅವೇ ಸಂದೇಶ ಹೀಗಿತ್ತು -“ನಿಮ್ಮ ಕನಸುಗಳನ್ನು ಅನುಸರಿಸಿ. ಎಷ್ಟು ಸಮಯ ತೆಗೆದುಕೊಂಡರೂ (ಅವುಗಳನ್ನು ಅರಿತುಕೊಳ್ಳಲು), ಅವುಗಳಿಂದ ವಿಮುಖರಾಗಬೇಡಿ”.
ಪುಟ್ಟ ವಯಸ್ಸಿನಲ್ಲಿ ತಾನು ಕಂಡ ದೈತ್ಯ ಕನಸುಗಳು ತನ್ನ ಜೀವನವನ್ನು ಹೇಗೆ ರೂಪಿಸಿದವು ಎಂಬುದರ ಕುರಿತು ಲೋಬೊ ಮಾತನಾಡಿದರು. ಹೊಟೇಲ್ನಲ್ಲಿ ಪಾತ್ರೆ ತಿಕ್ಕುವ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಲೋಬೊ,”ನನಗೆ ಈಗಲೂ ನೆನಪಿದೆ, ಆಗ ನನಗೆ 14 ವರ್ಷ. ಒಬ್ಬ ಉದ್ಯಮಿ ಮರ್ಸಿಡಿಸ್ನಲ್ಲಿ ರೆಸ್ಟೋರೆಂಟ್ಗೆ ಬರುತ್ತಿದ್ದರು. ಆಗ ನಾನು ನನ್ನಲ್ಲೇ ಹೇಳಿಕೊಂಡೆ, ‘ಒಂದು ದಿನ ನಾನು ಸಹ ಇಂತಹ ಕಾರಿನ ಒಡೆಯನಾಗುತ್ತೇನೆ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ಈ ಕನಸನ್ನು ಸಾಧಿಸಿದೆ.24 ನೇ ವಯಸ್ಸಿನಲ್ಲೇ ಮರ್ಸಿಡಿಸ್ ಖರೀದಿಸಿದೆ”.
ಎಸ್ಎಸ್ಸಿಯಲ್ಲಿದ್ದಾಗ ಕುಟುಂಬದ ಭಾರ ಹೊತ್ತ ನಾನು ಹೊಟೇಲ್ನಲ್ಲಿ ದುಡಿಯಲು ಆರಂಭಿಸಿದೆ. ಮೊದಲು ಪಾತ್ರೆ ತೊಳೆಯುವವನಾಗಿ, ಬಳಿಕ ವೇಟರ್, ಸ್ಟೀವಾರ್ಡ್,ನಂತರ ಸಹಾಯಕ ವ್ಯವಸ್ಥಾಪಕನಾಗಿ ಬೆಳೆಯುತ್ತ ಹೋದೆ. ಬಳಿಕ ನನ್ನದೇ ಆದ ನನ್ನ ಸ್ವಂತ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿದೆ. ಇಂದು ನಾನು4-5 ರೆಸ್ಟೋರೆಂಟ್, ಹೋಟೆಲ್, ರೆಸಾರ್ಟ್ಗಳ ಮಾಲೀಕ ಹೊಂದಿದ್ದೇನೆ. ಶಾಸಕನಾಗುವ ಮೊದಲೇ ಇದೆಲ್ಲವನ್ನು ಸಂಪಾದಿಸಿದ್ದು”, ಎಂದು ಲೋಬೊ ಹೇಳಿದರು.
ಯುವ ಟೆಕ್ಕಿಗಳಿಗೆ ಲೋಬೊ ಅವರು ನೀಡಿದ ಉಪನ್ಯಾಸವು ಹಾಸ್ಯ ಮತ್ತು ವ್ಯಂಗ್ಯದ ರಸದೂತಣವಾಗಿತ್ತು. ಯಾವುದೇ ಮೂಲಭೂತ ಶೈಕ್ಷಣಿಕ ಪದವಿಯನ್ನು ಸಹ ಪಡೆಯದೆ ತಾನು ಯಶಸ್ಸನ್ನು ಸಾಧಿಸಿದ್ದೇನೆ ಎಂದು ಒಪ್ಪಿಕೊಂಡ ಲೋಬೊ,X, XI ಮತ್ತು XI ತರಗತಿಯನ್ನು ಎರಡನೇ ದರ್ಜೆಯಲ್ಲಿ ಪಾಸು ಮಾಡಿದೆ. ಅಗತ್ಯ ಹಾಜರಾತಿ ಇಲ್ಲದಿದ್ದುದರಿಂದ ಕೊನೆಯ ವರ್ಷದ ಪರೀಕ್ಷೆ ಬರೆಯಲು ನನ್ನ ಪ್ರಾಂಶುಪಾಲರು ನನಗೆ ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ನಾನು ಉತ್ತೀರ್ಣನಾಗಿರುತ್ತಿದ್ದೆ ಮತ್ತದು ಎರಡನೇ ದರ್ಜೆಯಲ್ಲಿಯೇ ಆಗಿರುತ್ತಿತ್ತು. ನಾನು ನಿಜಕ್ಕೂ ಬುದ್ಧಿವಂತ, ಶಿಕ್ಷಕರು ಹೇಳಿಕೊಟ್ಟಿದ್ದೆಲ್ಲ ನೇರವಾಗಿ ನನ್ನ ತಲೆಯೊಳಗೆ ಇಳಿಯುತ್ತಿತ್ತು ಎಂದಾಗ ವಿದ್ಯಾರ್ಥಿ ಸಮೂಹ ನಗೆಗಡಲಲ್ಲಿ ತೇಲಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.