ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ.

ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ ತಾಂತ್ರಿಕ ಕಾರ್ಯಕ್ರಮ ‘Inspirus 2K19‘ಉದ್ಘಾಟನಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ ಲೋಬೊ ಅವರ ಟೇಕ್ಅವೇ ಸಂದೇಶ ಹೀಗಿತ್ತು -“ನಿಮ್ಮ ಕನಸುಗಳನ್ನು ಅನುಸರಿಸಿ. ಎಷ್ಟು ಸಮಯ ತೆಗೆದುಕೊಂಡರೂ (ಅವುಗಳನ್ನು ಅರಿತುಕೊಳ್ಳಲು), ಅವುಗಳಿಂದ ವಿಮುಖರಾಗಬೇಡಿ”.

ಪುಟ್ಟ ವಯಸ್ಸಿನಲ್ಲಿ ತಾನು ಕಂಡ ದೈತ್ಯ ಕನಸುಗಳು ತನ್ನ ಜೀವನವನ್ನು ಹೇಗೆ ರೂಪಿಸಿದವು ಎಂಬುದರ ಕುರಿತು ಲೋಬೊ ಮಾತನಾಡಿದರು. ಹೊಟೇಲ್ನಲ್ಲಿ ಪಾತ್ರೆ ತಿಕ್ಕುವ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಲೋಬೊ,”ನನಗೆ ಈಗಲೂ ನೆನಪಿದೆ, ಆಗ ನನಗೆ 14 ವರ್ಷ. ಒಬ್ಬ ಉದ್ಯಮಿ ಮರ್ಸಿಡಿಸ್ನಲ್ಲಿ ರೆಸ್ಟೋರೆಂಟ್ಗೆ ಬರುತ್ತಿದ್ದರು. ಆಗ ನಾನು ನನ್ನಲ್ಲೇ ಹೇಳಿಕೊಂಡೆ, ‘ಒಂದು ದಿನ ನಾನು ಸಹ ಇಂತಹ ಕಾರಿನ ಒಡೆಯನಾಗುತ್ತೇನೆ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ಈ ಕನಸನ್ನು ಸಾಧಿಸಿದೆ.24 ನೇ ವಯಸ್ಸಿನಲ್ಲೇ ಮರ್ಸಿಡಿಸ್ ಖರೀದಿಸಿದೆ”.

ಎಸ್ಎಸ್ಸಿಯಲ್ಲಿದ್ದಾಗ ಕುಟುಂಬದ ಭಾರ ಹೊತ್ತ ನಾನು ಹೊಟೇಲ್ನಲ್ಲಿ ದುಡಿಯಲು ಆರಂಭಿಸಿದೆ. ಮೊದಲು ಪಾತ್ರೆ ತೊಳೆಯುವವನಾಗಿ, ಬಳಿಕ ವೇಟರ್, ಸ್ಟೀವಾರ್ಡ್,ನಂತರ ಸಹಾಯಕ ವ್ಯವಸ್ಥಾಪಕನಾಗಿ ಬೆಳೆಯುತ್ತ ಹೋದೆ. ಬಳಿಕ ನನ್ನದೇ ಆದ ನನ್ನ ಸ್ವಂತ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿದೆ. ಇಂದು ನಾನು4-5 ರೆಸ್ಟೋರೆಂಟ್, ಹೋಟೆಲ್, ರೆಸಾರ್ಟ್ಗಳ ಮಾಲೀಕ ಹೊಂದಿದ್ದೇನೆ. ಶಾಸಕನಾಗುವ ಮೊದಲೇ ಇದೆಲ್ಲವನ್ನು ಸಂಪಾದಿಸಿದ್ದು”, ಎಂದು ಲೋಬೊ ಹೇಳಿದರು.
ಯುವ ಟೆಕ್ಕಿಗಳಿಗೆ ಲೋಬೊ ಅವರು ನೀಡಿದ ಉಪನ್ಯಾಸವು ಹಾಸ್ಯ ಮತ್ತು ವ್ಯಂಗ್ಯದ ರಸದೂತಣವಾಗಿತ್ತು. ಯಾವುದೇ ಮೂಲಭೂತ ಶೈಕ್ಷಣಿಕ ಪದವಿಯನ್ನು ಸಹ ಪಡೆಯದೆ ತಾನು ಯಶಸ್ಸನ್ನು ಸಾಧಿಸಿದ್ದೇನೆ ಎಂದು ಒಪ್ಪಿಕೊಂಡ ಲೋಬೊ,X, XI ಮತ್ತು XI ತರಗತಿಯನ್ನು ಎರಡನೇ ದರ್ಜೆಯಲ್ಲಿ ಪಾಸು ಮಾಡಿದೆ. ಅಗತ್ಯ ಹಾಜರಾತಿ ಇಲ್ಲದಿದ್ದುದರಿಂದ ಕೊನೆಯ ವರ್ಷದ ಪರೀಕ್ಷೆ ಬರೆಯಲು ನನ್ನ ಪ್ರಾಂಶುಪಾಲರು ನನಗೆ ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ನಾನು ಉತ್ತೀರ್ಣನಾಗಿರುತ್ತಿದ್ದೆ ಮತ್ತದು ಎರಡನೇ ದರ್ಜೆಯಲ್ಲಿಯೇ ಆಗಿರುತ್ತಿತ್ತು. ನಾನು ನಿಜಕ್ಕೂ ಬುದ್ಧಿವಂತ, ಶಿಕ್ಷಕರು ಹೇಳಿಕೊಟ್ಟಿದ್ದೆಲ್ಲ ನೇರವಾಗಿ ನನ್ನ ತಲೆಯೊಳಗೆ ಇಳಿಯುತ್ತಿತ್ತು ಎಂದಾಗ ವಿದ್ಯಾರ್ಥಿ ಸಮೂಹ ನಗೆಗಡಲಲ್ಲಿ ತೇಲಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…
ದರ್ಶನ್ ಅಭಿಮಾನಿಗಳ ಬಳಗ ಇದನ್ನು ಅಧಿಕೃವಾಗಿ ಘೋಷಿಸಿಕೊಂಡಿದೆ. ‘ಕುರುಕ್ಷೇತ್ರ’ ಚಿತ್ರ ಬರೊಬ್ಬರಿ . 100 ಕೋಟಿ ಕಲೆಕ್ಷನ್ ಮಾಡಿದೆ ಎಂದು ಕೇಕ್ ಕತ್ತರಿಸಿ ಸಂಭ್ರಮ ಆಚರಿಸಿದೆ. ಆ ಸಂಭ್ರಮಾಚರಣೆಯಲ್ಲಿ ಚಿತ್ರದ ಪ್ರಮುಖ ಪಾತ್ರಧಾರಿ ದರ್ಶನ್ ಕೂಡ ಭಾಗಿಯಾಗಿದ್ದಾರೆ. ಇದೊಂದು ಖುಷಿ ವಿಚಾರ. ಅಧಿಕೃತವಾಗಿ ಇದರ ಗಳಿಕೆ ಎಷ್ಟು, ಏನು ಎನ್ನುವುದು ಗೊತ್ತಿಲ್ಲ. ಆದರೆ ಆರಂಭದಿಂದಲೇ ದಾಖಲೆ ಕಲೆಕ್ಷನ್ ಆಗುತ್ತಿರುವ ಬಗ್ಗೆ ಮಾಹಿತಿ ಇತ್ತು. ಆಗಾಗ ನಿರ್ಮಾಪಕರು ಸಿಕ್ಕಾಗಲೂ ಹೇಳುತ್ತಿದ್ದರು. ಈಗ ನಮ್ಮ ಚಿತ್ರ 100 ಕೋಟಿ ರೂ….
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…