ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ.

ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ ತಾಂತ್ರಿಕ ಕಾರ್ಯಕ್ರಮ ‘Inspirus 2K19‘ಉದ್ಘಾಟನಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ ಲೋಬೊ ಅವರ ಟೇಕ್ಅವೇ ಸಂದೇಶ ಹೀಗಿತ್ತು -“ನಿಮ್ಮ ಕನಸುಗಳನ್ನು ಅನುಸರಿಸಿ. ಎಷ್ಟು ಸಮಯ ತೆಗೆದುಕೊಂಡರೂ (ಅವುಗಳನ್ನು ಅರಿತುಕೊಳ್ಳಲು), ಅವುಗಳಿಂದ ವಿಮುಖರಾಗಬೇಡಿ”.

ಪುಟ್ಟ ವಯಸ್ಸಿನಲ್ಲಿ ತಾನು ಕಂಡ ದೈತ್ಯ ಕನಸುಗಳು ತನ್ನ ಜೀವನವನ್ನು ಹೇಗೆ ರೂಪಿಸಿದವು ಎಂಬುದರ ಕುರಿತು ಲೋಬೊ ಮಾತನಾಡಿದರು. ಹೊಟೇಲ್ನಲ್ಲಿ ಪಾತ್ರೆ ತಿಕ್ಕುವ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಲೋಬೊ,”ನನಗೆ ಈಗಲೂ ನೆನಪಿದೆ, ಆಗ ನನಗೆ 14 ವರ್ಷ. ಒಬ್ಬ ಉದ್ಯಮಿ ಮರ್ಸಿಡಿಸ್ನಲ್ಲಿ ರೆಸ್ಟೋರೆಂಟ್ಗೆ ಬರುತ್ತಿದ್ದರು. ಆಗ ನಾನು ನನ್ನಲ್ಲೇ ಹೇಳಿಕೊಂಡೆ, ‘ಒಂದು ದಿನ ನಾನು ಸಹ ಇಂತಹ ಕಾರಿನ ಒಡೆಯನಾಗುತ್ತೇನೆ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ಈ ಕನಸನ್ನು ಸಾಧಿಸಿದೆ.24 ನೇ ವಯಸ್ಸಿನಲ್ಲೇ ಮರ್ಸಿಡಿಸ್ ಖರೀದಿಸಿದೆ”.

ಎಸ್ಎಸ್ಸಿಯಲ್ಲಿದ್ದಾಗ ಕುಟುಂಬದ ಭಾರ ಹೊತ್ತ ನಾನು ಹೊಟೇಲ್ನಲ್ಲಿ ದುಡಿಯಲು ಆರಂಭಿಸಿದೆ. ಮೊದಲು ಪಾತ್ರೆ ತೊಳೆಯುವವನಾಗಿ, ಬಳಿಕ ವೇಟರ್, ಸ್ಟೀವಾರ್ಡ್,ನಂತರ ಸಹಾಯಕ ವ್ಯವಸ್ಥಾಪಕನಾಗಿ ಬೆಳೆಯುತ್ತ ಹೋದೆ. ಬಳಿಕ ನನ್ನದೇ ಆದ ನನ್ನ ಸ್ವಂತ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿದೆ. ಇಂದು ನಾನು4-5 ರೆಸ್ಟೋರೆಂಟ್, ಹೋಟೆಲ್, ರೆಸಾರ್ಟ್ಗಳ ಮಾಲೀಕ ಹೊಂದಿದ್ದೇನೆ. ಶಾಸಕನಾಗುವ ಮೊದಲೇ ಇದೆಲ್ಲವನ್ನು ಸಂಪಾದಿಸಿದ್ದು”, ಎಂದು ಲೋಬೊ ಹೇಳಿದರು.
ಯುವ ಟೆಕ್ಕಿಗಳಿಗೆ ಲೋಬೊ ಅವರು ನೀಡಿದ ಉಪನ್ಯಾಸವು ಹಾಸ್ಯ ಮತ್ತು ವ್ಯಂಗ್ಯದ ರಸದೂತಣವಾಗಿತ್ತು. ಯಾವುದೇ ಮೂಲಭೂತ ಶೈಕ್ಷಣಿಕ ಪದವಿಯನ್ನು ಸಹ ಪಡೆಯದೆ ತಾನು ಯಶಸ್ಸನ್ನು ಸಾಧಿಸಿದ್ದೇನೆ ಎಂದು ಒಪ್ಪಿಕೊಂಡ ಲೋಬೊ,X, XI ಮತ್ತು XI ತರಗತಿಯನ್ನು ಎರಡನೇ ದರ್ಜೆಯಲ್ಲಿ ಪಾಸು ಮಾಡಿದೆ. ಅಗತ್ಯ ಹಾಜರಾತಿ ಇಲ್ಲದಿದ್ದುದರಿಂದ ಕೊನೆಯ ವರ್ಷದ ಪರೀಕ್ಷೆ ಬರೆಯಲು ನನ್ನ ಪ್ರಾಂಶುಪಾಲರು ನನಗೆ ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ನಾನು ಉತ್ತೀರ್ಣನಾಗಿರುತ್ತಿದ್ದೆ ಮತ್ತದು ಎರಡನೇ ದರ್ಜೆಯಲ್ಲಿಯೇ ಆಗಿರುತ್ತಿತ್ತು. ನಾನು ನಿಜಕ್ಕೂ ಬುದ್ಧಿವಂತ, ಶಿಕ್ಷಕರು ಹೇಳಿಕೊಟ್ಟಿದ್ದೆಲ್ಲ ನೇರವಾಗಿ ನನ್ನ ತಲೆಯೊಳಗೆ ಇಳಿಯುತ್ತಿತ್ತು ಎಂದಾಗ ವಿದ್ಯಾರ್ಥಿ ಸಮೂಹ ನಗೆಗಡಲಲ್ಲಿ ತೇಲಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.