ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ.

ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ ತಾಂತ್ರಿಕ ಕಾರ್ಯಕ್ರಮ ‘Inspirus 2K19‘ಉದ್ಘಾಟನಾ ಸಮಾರಂಭದಲ್ಲಿ ಮಾಡಿದ ಭಾಷಣದಲ್ಲಿ ಲೋಬೊ ಅವರ ಟೇಕ್ಅವೇ ಸಂದೇಶ ಹೀಗಿತ್ತು -“ನಿಮ್ಮ ಕನಸುಗಳನ್ನು ಅನುಸರಿಸಿ. ಎಷ್ಟು ಸಮಯ ತೆಗೆದುಕೊಂಡರೂ (ಅವುಗಳನ್ನು ಅರಿತುಕೊಳ್ಳಲು), ಅವುಗಳಿಂದ ವಿಮುಖರಾಗಬೇಡಿ”.

ಪುಟ್ಟ ವಯಸ್ಸಿನಲ್ಲಿ ತಾನು ಕಂಡ ದೈತ್ಯ ಕನಸುಗಳು ತನ್ನ ಜೀವನವನ್ನು ಹೇಗೆ ರೂಪಿಸಿದವು ಎಂಬುದರ ಕುರಿತು ಲೋಬೊ ಮಾತನಾಡಿದರು. ಹೊಟೇಲ್ನಲ್ಲಿ ಪಾತ್ರೆ ತಿಕ್ಕುವ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಲೋಬೊ,”ನನಗೆ ಈಗಲೂ ನೆನಪಿದೆ, ಆಗ ನನಗೆ 14 ವರ್ಷ. ಒಬ್ಬ ಉದ್ಯಮಿ ಮರ್ಸಿಡಿಸ್ನಲ್ಲಿ ರೆಸ್ಟೋರೆಂಟ್ಗೆ ಬರುತ್ತಿದ್ದರು. ಆಗ ನಾನು ನನ್ನಲ್ಲೇ ಹೇಳಿಕೊಂಡೆ, ‘ಒಂದು ದಿನ ನಾನು ಸಹ ಇಂತಹ ಕಾರಿನ ಒಡೆಯನಾಗುತ್ತೇನೆ. ನಾನು ಬಹಳ ಚಿಕ್ಕ ವಯಸ್ಸಿನಲ್ಲೇ ಈ ಕನಸನ್ನು ಸಾಧಿಸಿದೆ.24 ನೇ ವಯಸ್ಸಿನಲ್ಲೇ ಮರ್ಸಿಡಿಸ್ ಖರೀದಿಸಿದೆ”.

ಎಸ್ಎಸ್ಸಿಯಲ್ಲಿದ್ದಾಗ ಕುಟುಂಬದ ಭಾರ ಹೊತ್ತ ನಾನು ಹೊಟೇಲ್ನಲ್ಲಿ ದುಡಿಯಲು ಆರಂಭಿಸಿದೆ. ಮೊದಲು ಪಾತ್ರೆ ತೊಳೆಯುವವನಾಗಿ, ಬಳಿಕ ವೇಟರ್, ಸ್ಟೀವಾರ್ಡ್,ನಂತರ ಸಹಾಯಕ ವ್ಯವಸ್ಥಾಪಕನಾಗಿ ಬೆಳೆಯುತ್ತ ಹೋದೆ. ಬಳಿಕ ನನ್ನದೇ ಆದ ನನ್ನ ಸ್ವಂತ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಿದೆ. ಇಂದು ನಾನು4-5 ರೆಸ್ಟೋರೆಂಟ್, ಹೋಟೆಲ್, ರೆಸಾರ್ಟ್ಗಳ ಮಾಲೀಕ ಹೊಂದಿದ್ದೇನೆ. ಶಾಸಕನಾಗುವ ಮೊದಲೇ ಇದೆಲ್ಲವನ್ನು ಸಂಪಾದಿಸಿದ್ದು”, ಎಂದು ಲೋಬೊ ಹೇಳಿದರು.
ಯುವ ಟೆಕ್ಕಿಗಳಿಗೆ ಲೋಬೊ ಅವರು ನೀಡಿದ ಉಪನ್ಯಾಸವು ಹಾಸ್ಯ ಮತ್ತು ವ್ಯಂಗ್ಯದ ರಸದೂತಣವಾಗಿತ್ತು. ಯಾವುದೇ ಮೂಲಭೂತ ಶೈಕ್ಷಣಿಕ ಪದವಿಯನ್ನು ಸಹ ಪಡೆಯದೆ ತಾನು ಯಶಸ್ಸನ್ನು ಸಾಧಿಸಿದ್ದೇನೆ ಎಂದು ಒಪ್ಪಿಕೊಂಡ ಲೋಬೊ,X, XI ಮತ್ತು XI ತರಗತಿಯನ್ನು ಎರಡನೇ ದರ್ಜೆಯಲ್ಲಿ ಪಾಸು ಮಾಡಿದೆ. ಅಗತ್ಯ ಹಾಜರಾತಿ ಇಲ್ಲದಿದ್ದುದರಿಂದ ಕೊನೆಯ ವರ್ಷದ ಪರೀಕ್ಷೆ ಬರೆಯಲು ನನ್ನ ಪ್ರಾಂಶುಪಾಲರು ನನಗೆ ಅವಕಾಶ ನೀಡಲಿಲ್ಲ. ಇಲ್ಲದಿದ್ದರೆ ನಾನು ಉತ್ತೀರ್ಣನಾಗಿರುತ್ತಿದ್ದೆ ಮತ್ತದು ಎರಡನೇ ದರ್ಜೆಯಲ್ಲಿಯೇ ಆಗಿರುತ್ತಿತ್ತು. ನಾನು ನಿಜಕ್ಕೂ ಬುದ್ಧಿವಂತ, ಶಿಕ್ಷಕರು ಹೇಳಿಕೊಟ್ಟಿದ್ದೆಲ್ಲ ನೇರವಾಗಿ ನನ್ನ ತಲೆಯೊಳಗೆ ಇಳಿಯುತ್ತಿತ್ತು ಎಂದಾಗ ವಿದ್ಯಾರ್ಥಿ ಸಮೂಹ ನಗೆಗಡಲಲ್ಲಿ ತೇಲಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…