ಉಪಯುಕ್ತ ಮಾಹಿತಿ

ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

2229

ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ.  ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.

ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…

ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….

ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-

ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.

ಚರ್ಮ ಹೊಳೆಯುತ್ತೆ :-

ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್‌ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.

ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-

ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್‌ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.

ಚರ್ಮದ ಬಣ್ಣ ಹೆಚ್ಚಿಸುವುದು :-

ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.

ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಮೊಡವೆಗಳಿಂದ ಬೇಜಾರಾಗಿದ್ರೆ ಇಲ್ಲಿದೆ ಸಿಂಪಲ್ ಮನೆಮದ್ದು……

    ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.