ಉಪಯುಕ್ತ ಮಾಹಿತಿ

ಮೊಟ್ಟೆ ಚಿಪ್ಪು ಬಿಸಾಡಬೇಡಿ!ಮತ್ತೆ ತಿನ್ನೋಕೆ ಆಗುತ್ತಾ ಅಂತೀರಾ!ಈ ಲೇಖನ ಓದಿ ಶೇರ್ ಮಾಡಿ…

2219

ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.

ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ.  ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.

ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…

ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….

ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-

ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.

ಚರ್ಮ ಹೊಳೆಯುತ್ತೆ :-

ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್‌ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.

ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-

ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್‌ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.

ಚರ್ಮದ ಬಣ್ಣ ಹೆಚ್ಚಿಸುವುದು :-

ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.

ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಸುದ್ದಿ

    ದಿನಾ ಒಂದು ಗ್ಲಾಸ್ ಈ ಹಾಲನ್ನು ಕುಡಿದರೆ ಸಾಕು ನಿಮ್ಮೆಲ್ಲಾ ಕಾಯಿಲೆಗಳು ಇನ್ನು ದೂರ,.!

    ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…