ಸಿನಿಮಾ

ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

251

ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

 

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು,  ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.

ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..‌ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..

ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..

ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..

ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..

 ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ  ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

    ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಸುದ್ದಿ

    ಬೆಂಗಳೂರಿನ ಪುಂಡ ಪೋಕರಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್..!ಏಕೆ ಗೊತ್ತಾ..?ಈ ಲೇಖನ ಓದಿ…

    ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಸುದ್ದಿ

    ‘ಇಂಟರ್ ನ್ಯಾಷನಲ್ ರೆಲಿಜಿಯಸ್ ಫ್ರೀಡಂಅವಾರ್ಡ್’ ತನ್ನದಾಗಿಸಿಕೊಂಡ 83 ವರ್ಷದ ಅಬೂಬಕರ್ ಅಬ್ದುಲ್ಲಹಿ….!

    ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19:  ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು  ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ  2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…