ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..
MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..
ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..
ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..
ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..
ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…