ಸಿನಿಮಾ

ಮೊದಲ ದಿನವೇ ಕಾಲೇಜ್ ಕುಮಾರನಿಗೆ ಒಲಿದ ಪ್ರೇಕ್ಷಕ ಮಹಾಶಯರು..!ತಿಳಿಯಲು ಈ ಲೇಖನ ಓದಿ…

256

ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

 

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು,  ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.

ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..‌ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..

ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..

ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..

ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..

 ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ  ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಮ್ಮ ನಾಯಕ ಚುನಾವಣೆಯಲ್ಲಿ ಗೆಲ್ಲಲೆಂದು ತನ್ನ ನಾಲಿಗೆ ಸೀಳಿ ದೇವಸ್ಥಾನದ ಹುಂಡಿಗೆ ಹಾಕಿದ ಹುಚ್ಚು ಅಭಿಮಾನಿ..!

    ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…

  • ದೇವರು-ಧರ್ಮ

    ಈ ದೇವಸ್ಥಾನದಲ್ಲಿ ದೇವರಿಗೆ ಕೊಡೋ ಕಾಣಿಕೆ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..?ಏನದು..?ಮುಂದೆ ಓದಿ…

    ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…