ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ.

ಹೌದು, ಅಶ್ರಫ್ ಅವರು ತಮ್ಮ ಮೊಬೈಲ್ ನಂಬರ್ ಅನ್ನು ಕುಶಾಲನಗದ ಬ್ಯಾಂಕ್ ಒಂದರ ಖಾತೆಗೆ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದರು. ಇದಾದ ಕೆಲದಿನಗಳ ನಂತರ ಆ ಮೊಬೈಲ್ ನಂಬರ್ ಅನ್ನು ಬಳಸದೇ ಬಿಟ್ಟು, ಬೇರೊಂದು ಮೊಬೈಲ್ ನಂಬರ್ ಹೊಂದಿರುವ ಸಿಮ್ ಬಳಸಲು ಶುರು ಮಾಡಿದರು. ಹೀಗೆ ಮಾಡಿದಾಗ ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಮತ್ತೋರ್ವರಿಗೆ ನೀಡಿ ಟೆಲಿಕಾಂ ಸೇವಾ ಸಂಸ್ಥೆ ಕೈತೊಳೆದುಕೊಂಡಿದೆ. ಇದಾದ ನಂತರ ಅಶ್ರಫ್ ಅವರಿಗೆ ಸಮಸ್ಯೆಗಳು ಶುರುವಾಗಿವೆ. ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಟೆಲಿಕಾಂ ಕಂಪೆನಿಯು ದಾವಣಗೆರೆಯ ಭರತ್ ಎಂಬ ಮತ್ತೋರ್ವ ವ್ಯಕ್ತಿಗೆ ನೀಡಿದೆ.

ಈ ನಂಬರ್ ಅನ್ನು ಪಡೆದುಕೊಂಡಿರುವ ಭರತ್ ಹೊಸ ಸಿಮ್ ಹಾಕಿಕೊಂಡಾಗ ಆಶ್ರಫ್ ಬ್ಯಾಂಕಿಂಗ್ ಸಂದೇಶಗಳು ಮೊಬೈಲ್ಗೆ ಬರುತ್ತಿದ್ದವು. ಇದನ್ನು ಬಳಸಿಕೊಂಡ ಭರತ್, ನಂತರ ಮೊಬೈಲ್ಗೆ ಪೇಟಿಎಂ ವ್ಯಾಲೆಟ್ ಆಕ್ಟಿವ್ ಮಾಡಿಕೊಂಡಿದ್ದ. ಆಶ್ರಫ್ ಬ್ಯಾಂಕ್ ಖಾತೆ ದಕ್ಕೆ ಸಿಂಕ್ ಆಗಿತ್ತು. ಬಳಿಕ ಭರತ್ ಪೇಟಿಎಂ ವ್ಯಾಲೆಟ್ನಿಂದ ತನ್ನ ಬ್ಯಾಂಕ್ ಖಾತೆಗೆ 4 ದಿನಗಳಲ್ಲಿ 79,994 ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿದ್ದ.

ಇದರಿಂದ ಗಾಬರಿಗೊಂಡ ಆಶ್ರಫ್ ಅವರು ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ನಂಬರ್ ಆಧಾರದ ಮೇಲೆ ಭರತ್ನನ್ನು ಬಂಧಿಸಿದ್ದಾರೆ. ಆದರೆ, ಎಲ್ಲ ಪ್ರಕರಣದಲ್ಲೂ ಆರೋಪಿ ಹೀಗೆ ಸಿಕ್ಕಿಕೊಳ್ಳುವುದು ಕಷ್ಟವೇ ಸರಿ. ಹಾಗಾಗಿ, ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲಾ ಖಾತೆಗಳ ಬಗ್ಗೆ ಎಚ್ಚರ ವಹಿಸಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲ ಸಂಪರ್ಕವನ್ನು ಕಡಿತ ಮಾಡಿ ಬಳಿಕವೇ ಹೊಸ ಗ್ರಾಹಕನಿಗೆ ಮಾರಾಟ ಮಾಡಬೇಕು ಎಂಬ ಕಾನೂನನ್ನು ತರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಸೈಬರ್ ಅಪರಾಧ ತಡೆಗಟ್ಟಲು ಮತ್ತು ಭದ್ರತೆ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಲಿಂಕ್ ಆದೇಶ ನೀಡಿ ಸುತ್ತೋಲೆ ಹೊರಡಿಸಿದೆ. ಹಾಗಾಗಿ, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಬ್ಯಾಂಕಿಂಗ್ ಸೇವೆಗೆ ಮೊಬೈಲ್ ನಂಬರ್ ಕಡ್ಡಾಯ.ಈ ಸೇವೆಗಳನ್ನು ಪಡೆಯುವಾಗ ಮೊಬೈಲ್ಗೆ ಬರುವ ಒನ್ ಟೈಮ್ ಪಾಸ್ವರ್ಡ್(ಒಟಿಪಿ) ಅತಿ ಮುಖ್ಯವಾಗಿರುತ್ತವೆ. ಇದರ ಮೇಲೆ ನೀವು ನಿಗಾ ವಹಿಸದೆ ಇದ್ದರೆ ಬ್ಯಾಂಕ್ ಖಾತೆ ಖಾಲಿ ಆಗಲಿದೆ. ಹಾಗಾಗಿ, ನೀವು ಎಚ್ಚರ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಐಸ್ ಕ್ರೀಮ್ ತಿನ್ನೋ ಈ ವಿಡಿಯೋ ನೋಡಿ ನಿಮ್ಗೆ ನಗು ಬರ್ದೇ ಇರಲ್ಲ…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…