ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ.

ಹೌದು, ಅಶ್ರಫ್ ಅವರು ತಮ್ಮ ಮೊಬೈಲ್ ನಂಬರ್ ಅನ್ನು ಕುಶಾಲನಗದ ಬ್ಯಾಂಕ್ ಒಂದರ ಖಾತೆಗೆ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದರು. ಇದಾದ ಕೆಲದಿನಗಳ ನಂತರ ಆ ಮೊಬೈಲ್ ನಂಬರ್ ಅನ್ನು ಬಳಸದೇ ಬಿಟ್ಟು, ಬೇರೊಂದು ಮೊಬೈಲ್ ನಂಬರ್ ಹೊಂದಿರುವ ಸಿಮ್ ಬಳಸಲು ಶುರು ಮಾಡಿದರು. ಹೀಗೆ ಮಾಡಿದಾಗ ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಮತ್ತೋರ್ವರಿಗೆ ನೀಡಿ ಟೆಲಿಕಾಂ ಸೇವಾ ಸಂಸ್ಥೆ ಕೈತೊಳೆದುಕೊಂಡಿದೆ. ಇದಾದ ನಂತರ ಅಶ್ರಫ್ ಅವರಿಗೆ ಸಮಸ್ಯೆಗಳು ಶುರುವಾಗಿವೆ. ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಟೆಲಿಕಾಂ ಕಂಪೆನಿಯು ದಾವಣಗೆರೆಯ ಭರತ್ ಎಂಬ ಮತ್ತೋರ್ವ ವ್ಯಕ್ತಿಗೆ ನೀಡಿದೆ.

ಈ ನಂಬರ್ ಅನ್ನು ಪಡೆದುಕೊಂಡಿರುವ ಭರತ್ ಹೊಸ ಸಿಮ್ ಹಾಕಿಕೊಂಡಾಗ ಆಶ್ರಫ್ ಬ್ಯಾಂಕಿಂಗ್ ಸಂದೇಶಗಳು ಮೊಬೈಲ್ಗೆ ಬರುತ್ತಿದ್ದವು. ಇದನ್ನು ಬಳಸಿಕೊಂಡ ಭರತ್, ನಂತರ ಮೊಬೈಲ್ಗೆ ಪೇಟಿಎಂ ವ್ಯಾಲೆಟ್ ಆಕ್ಟಿವ್ ಮಾಡಿಕೊಂಡಿದ್ದ. ಆಶ್ರಫ್ ಬ್ಯಾಂಕ್ ಖಾತೆ ದಕ್ಕೆ ಸಿಂಕ್ ಆಗಿತ್ತು. ಬಳಿಕ ಭರತ್ ಪೇಟಿಎಂ ವ್ಯಾಲೆಟ್ನಿಂದ ತನ್ನ ಬ್ಯಾಂಕ್ ಖಾತೆಗೆ 4 ದಿನಗಳಲ್ಲಿ 79,994 ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿದ್ದ.

ಇದರಿಂದ ಗಾಬರಿಗೊಂಡ ಆಶ್ರಫ್ ಅವರು ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ನಂಬರ್ ಆಧಾರದ ಮೇಲೆ ಭರತ್ನನ್ನು ಬಂಧಿಸಿದ್ದಾರೆ. ಆದರೆ, ಎಲ್ಲ ಪ್ರಕರಣದಲ್ಲೂ ಆರೋಪಿ ಹೀಗೆ ಸಿಕ್ಕಿಕೊಳ್ಳುವುದು ಕಷ್ಟವೇ ಸರಿ. ಹಾಗಾಗಿ, ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲಾ ಖಾತೆಗಳ ಬಗ್ಗೆ ಎಚ್ಚರ ವಹಿಸಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲ ಸಂಪರ್ಕವನ್ನು ಕಡಿತ ಮಾಡಿ ಬಳಿಕವೇ ಹೊಸ ಗ್ರಾಹಕನಿಗೆ ಮಾರಾಟ ಮಾಡಬೇಕು ಎಂಬ ಕಾನೂನನ್ನು ತರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಸೈಬರ್ ಅಪರಾಧ ತಡೆಗಟ್ಟಲು ಮತ್ತು ಭದ್ರತೆ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಲಿಂಕ್ ಆದೇಶ ನೀಡಿ ಸುತ್ತೋಲೆ ಹೊರಡಿಸಿದೆ. ಹಾಗಾಗಿ, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಬ್ಯಾಂಕಿಂಗ್ ಸೇವೆಗೆ ಮೊಬೈಲ್ ನಂಬರ್ ಕಡ್ಡಾಯ.ಈ ಸೇವೆಗಳನ್ನು ಪಡೆಯುವಾಗ ಮೊಬೈಲ್ಗೆ ಬರುವ ಒನ್ ಟೈಮ್ ಪಾಸ್ವರ್ಡ್(ಒಟಿಪಿ) ಅತಿ ಮುಖ್ಯವಾಗಿರುತ್ತವೆ. ಇದರ ಮೇಲೆ ನೀವು ನಿಗಾ ವಹಿಸದೆ ಇದ್ದರೆ ಬ್ಯಾಂಕ್ ಖಾತೆ ಖಾಲಿ ಆಗಲಿದೆ. ಹಾಗಾಗಿ, ನೀವು ಎಚ್ಚರ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ನೂತನ ಸಿಎಂ ಯಡಿಯೂರಪ್ಪ ಮೊದಲ ಪತ್ರಿಕಾಗೋಷ್ಠಿ| ಕಿಸಾನ್ ಸಮ್ಮಾನ್ ಯೋಜನೆಯ ಸಹಾಯಧನ ಹೆಚ್ಚಳ| ಕೇಂದ್ರದ 6 ಸಾವಿರ ರೂ. ಜೊತೆಗೆ ರಾಜ್ಯ ಸರ್ಕಾರದ 4 ಸಾವಿರ ರೂ. ಸೇರ್ಪಡೆ| ರೈತ ಸಮುದಾಯಕ್ಕೆ ವಾರ್ಷಿಕ 10 ಸಾವಿರ ರೂ. ಸಹಾಯಧನ| ನೇಕಾರರ 100 ಕೋಟಿ ರೂ. ಸಾಲಮನ್ನಾ ಘೋಷಿಸಿದ ಸಿಎಂ ಯಡಿಯೂರಪ್ಪ| 2019ರ ಮಾರ್ಚ್ 30ಕ್ಕೆ ಅನ್ವಯವಾಗುವಂತೆ ನೇಕಾರರ 100 ಕೋಟಿ ರೂ. ಸಾಲಮನ್ನಾ| ಬೆಂಗಳೂರು(ಜು.26): ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಬಿಎಸ್ ಯಡಿಯೂರಪ್ಪ ರಾಜ್ಯದ ರೈತ…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.