ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ.

ಹೌದು, ಅಶ್ರಫ್ ಅವರು ತಮ್ಮ ಮೊಬೈಲ್ ನಂಬರ್ ಅನ್ನು ಕುಶಾಲನಗದ ಬ್ಯಾಂಕ್ ಒಂದರ ಖಾತೆಗೆ ಖಾತೆ ಮತ್ತು ಪೇಟಿಎಂ ವ್ಯಾಲೆಟ್ಗೆ ಲಿಂಕ್ ಮಾಡಿದ್ದರು. ಇದಾದ ಕೆಲದಿನಗಳ ನಂತರ ಆ ಮೊಬೈಲ್ ನಂಬರ್ ಅನ್ನು ಬಳಸದೇ ಬಿಟ್ಟು, ಬೇರೊಂದು ಮೊಬೈಲ್ ನಂಬರ್ ಹೊಂದಿರುವ ಸಿಮ್ ಬಳಸಲು ಶುರು ಮಾಡಿದರು. ಹೀಗೆ ಮಾಡಿದಾಗ ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಮತ್ತೋರ್ವರಿಗೆ ನೀಡಿ ಟೆಲಿಕಾಂ ಸೇವಾ ಸಂಸ್ಥೆ ಕೈತೊಳೆದುಕೊಂಡಿದೆ. ಇದಾದ ನಂತರ ಅಶ್ರಫ್ ಅವರಿಗೆ ಸಮಸ್ಯೆಗಳು ಶುರುವಾಗಿವೆ. ಅಶ್ರಫ್ ಅವರ ಹಳೆ ಮೊಬೈಲ್ ನಂಬರ್ ಅನ್ನು ಟೆಲಿಕಾಂ ಕಂಪೆನಿಯು ದಾವಣಗೆರೆಯ ಭರತ್ ಎಂಬ ಮತ್ತೋರ್ವ ವ್ಯಕ್ತಿಗೆ ನೀಡಿದೆ.

ಈ ನಂಬರ್ ಅನ್ನು ಪಡೆದುಕೊಂಡಿರುವ ಭರತ್ ಹೊಸ ಸಿಮ್ ಹಾಕಿಕೊಂಡಾಗ ಆಶ್ರಫ್ ಬ್ಯಾಂಕಿಂಗ್ ಸಂದೇಶಗಳು ಮೊಬೈಲ್ಗೆ ಬರುತ್ತಿದ್ದವು. ಇದನ್ನು ಬಳಸಿಕೊಂಡ ಭರತ್, ನಂತರ ಮೊಬೈಲ್ಗೆ ಪೇಟಿಎಂ ವ್ಯಾಲೆಟ್ ಆಕ್ಟಿವ್ ಮಾಡಿಕೊಂಡಿದ್ದ. ಆಶ್ರಫ್ ಬ್ಯಾಂಕ್ ಖಾತೆ ದಕ್ಕೆ ಸಿಂಕ್ ಆಗಿತ್ತು. ಬಳಿಕ ಭರತ್ ಪೇಟಿಎಂ ವ್ಯಾಲೆಟ್ನಿಂದ ತನ್ನ ಬ್ಯಾಂಕ್ ಖಾತೆಗೆ 4 ದಿನಗಳಲ್ಲಿ 79,994 ರೂ.ಗಳನ್ನು ವರ್ಗಾವಣೆ ಮಾಡಿಕೊಂಡಿದ್ದ.

ಇದರಿಂದ ಗಾಬರಿಗೊಂಡ ಆಶ್ರಫ್ ಅವರು ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ನಂಬರ್ ಆಧಾರದ ಮೇಲೆ ಭರತ್ನನ್ನು ಬಂಧಿಸಿದ್ದಾರೆ. ಆದರೆ, ಎಲ್ಲ ಪ್ರಕರಣದಲ್ಲೂ ಆರೋಪಿ ಹೀಗೆ ಸಿಕ್ಕಿಕೊಳ್ಳುವುದು ಕಷ್ಟವೇ ಸರಿ. ಹಾಗಾಗಿ, ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲಾ ಖಾತೆಗಳ ಬಗ್ಗೆ ಎಚ್ಚರ ವಹಿಸಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ. ಸಿಮ್ ಜತೆಗೆ ಲಿಂಕ್ ಆಗಿರುವ ಎಲ್ಲ ಸಂಪರ್ಕವನ್ನು ಕಡಿತ ಮಾಡಿ ಬಳಿಕವೇ ಹೊಸ ಗ್ರಾಹಕನಿಗೆ ಮಾರಾಟ ಮಾಡಬೇಕು ಎಂಬ ಕಾನೂನನ್ನು ತರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.

ಸೈಬರ್ ಅಪರಾಧ ತಡೆಗಟ್ಟಲು ಮತ್ತು ಭದ್ರತೆ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಲಿಂಕ್ ಆದೇಶ ನೀಡಿ ಸುತ್ತೋಲೆ ಹೊರಡಿಸಿದೆ. ಹಾಗಾಗಿ, ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ವ್ಯಾಲೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಸೇರಿದಂತೆ ಇನ್ನಿತರ ಬ್ಯಾಂಕಿಂಗ್ ಸೇವೆಗೆ ಮೊಬೈಲ್ ನಂಬರ್ ಕಡ್ಡಾಯ.ಈ ಸೇವೆಗಳನ್ನು ಪಡೆಯುವಾಗ ಮೊಬೈಲ್ಗೆ ಬರುವ ಒನ್ ಟೈಮ್ ಪಾಸ್ವರ್ಡ್(ಒಟಿಪಿ) ಅತಿ ಮುಖ್ಯವಾಗಿರುತ್ತವೆ. ಇದರ ಮೇಲೆ ನೀವು ನಿಗಾ ವಹಿಸದೆ ಇದ್ದರೆ ಬ್ಯಾಂಕ್ ಖಾತೆ ಖಾಲಿ ಆಗಲಿದೆ. ಹಾಗಾಗಿ, ನೀವು ಎಚ್ಚರ.!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ.
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…
ನಮ್ಮಲ್ಲಿ ದೇವರಿಗೆ, ಗೋವುಗಳಿಗೆ, ದಸರಾ ಸಂಧರ್ಭದಲ್ಲಿ ವಾಹನಗಳಿಗೂ ಸಹ ನಾವು ಪೂಜೆ ಸಲ್ಲಿಸುತ್ತೇವೆ. ಆದರೆ ವಿಚಿತ್ರ ಎಂದರೆ ಇಲ್ಲಿ ಒಂದು ಬುಲೆಟ್ ಗೆ ಗುಡಿಯನ್ನು ಕಟ್ಟಿ ಪೂಜೆ ಸಲ್ಲಿಸುತ್ತಾರೆ ಎಂದರೆ ನೀವು ನಮ್ಬೋದಿಲ್ಲಾ.. ರಾಜಸ್ಥಾನದ ಜೈಪುರದಿಂದ 50 ಕಿ.ಮೀ. ದೂರದಲ್ಲಿರುವ ಪಾಲಿ ಜಿಲ್ಲೆಯಲ್ಲಿ ಒಂದು ವಿಶೇಷವಾದ ದೇವಾಲಯವಿದೆ. ಈ ದೇವಾಲಯದಲ್ಲಿರುವ 350 ಸಿಸಿ ಯ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ಗೆ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೈಕ್ ಗೆ ಪೂಜೆ ಸಲ್ಲಿಸಲೂ ಒಂದು ಕಾರಣವಿದೆ. ಅದೇನು…