ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲುಕಿನ ಒಂದು ಕುಗ್ರಾಮ, ಮಲ್ಲದ ಗುಡ್ಡ ಗ್ರಾಮದ ಒಂದು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ ಹುಡುಗ ರವಿ ಗೌಡ. ಇವರ ತಂದೆ ವೀರ ಭದ್ರಗೌಡ ಜೀವನಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಇದನ್ನು ಗಮನಿಸಿದ ರವಿಗೌಡ ತಾವು ಇದರಲ್ಲಿ ಏಕೆ ಸಾಧನೆ ಮಾಡಬಾರದೆಂದು ಯೋಚಿಸಿ, ಅಂದಿನಿಂದ ಅಂದರೆ ಅವರು 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗಲೇ ಸಂಗ್ರಾಣಿ ಕಲ್ಲು ಎತ್ತುವ ಅಭ್ಯಾಸ ಶುರು ಮಾಡಿದ್ದಾರೆ. ಇದಕ್ಕೆ ಅವರ ಮಾವನವರು ಮತ್ತು ಸ್ನೇಹಿತರು ಹಾಗೂ ಗರಡಿ ಮನೆಯವರು ಪ್ರೋತ್ಸಾಹ ಕೊಟ್ಟಿದ್ದಾರೆ.
ಇದರಿಂದ ಹೆಚ್ಚು ಪ್ರೆರಿಪಿತಗೊಂಡ ರವಿಗೌಡ ತಾವು 9ನೇ ತರಗತಿಯಲ್ಲಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಿ ವಿಜಯಿಯಾಗಿದ್ದಾರೆ.
ಇವರು ತಮ್ಮ 19 ನೇ ವಯಸ್ಸಿಗೆ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಊರಿನ ಜಾತ್ರೆ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.
ಕಲ್ಲು ಎತ್ತುವ ಸ್ಪರ್ಧೆ ಇಟ್ಟಾಗ ಘಟಾನು ಘಟಿಘಳ ಜೊತೆ ಭಾಗವಹಿಸಿ ಅವರಿಗೆ ಪೈ ಪೋಟಿ ಕೊಟ್ಟು ಪ್ರಥಮ ಸ್ಥಾನ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಆದ್ರೆ ಈ ಹಳ್ಳಿ ಹುಡುಗ ತಮ್ಮ ಸಾಧನೆಯ ಹಾದಿಯಲ್ಲಿದ್ದಾಗ, ದುರಾದ್ರಷ್ಟವಶಾತ್ ಅವರ ತಲೆಗೆ ಅಗಾಧವಾದ ಪೆಟ್ಟು ತಾಗಿ, ವೈದ್ಯರು ಇನ್ನೂ 4 ವರ್ಷಗಳ ಕಾಲ, ನೀನು ಈ ಕಲ್ಲನ್ನು ಎತ್ತುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ.
ಇದರಿಂದ ಬಹಳ ನಿರಾಶೆ ಅನುಭವಿಸಿದ್ದಾರೆ ಯುವಕ ರವಿಗೌಡ. ಆದ್ರೆ ತಮ್ಮ ಚಿಕ್ಕ ವಯಸ್ಸಿನಲ್ಲೇ ಬಹಳ ದೊಡ್ಡ ಸಾಧನೆ ಮಾಡಿದ ಈ ಯುವಕನ ಹೆಸರು ಜನರ ಮನಸ್ಸಿನಲ್ಲಿ ಮಾಸದೆ ಇನ್ನು ಉಳಿದಿದ್ದು, ಇವರನ್ನು ಜನ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಯುವಕ ಎಂದು ಈಗಲೂ ಹೊಗಳುತ್ತಿದ್ದಾರೆ.
ಇವರ ಸಾಧನೆಯನ್ನು ಅರಸಿ ಬೆಳ್ಳಿ ಕಡಗ ಸೇರಿದಂತೆ ಹಲವಾರು ಪ್ರಶಸ್ತಿ ಪದಕಗಳು ಇವರಿಗೆ ಬಂದಿವೆ. ಹಲವು ಕಾರ್ಯಕ್ರಮಗಳಲ್ಲಿ ಇವರ ಸಾಧನೆಯನ್ನು ಮೆಚ್ಚಿ ಸನ್ಮಾನಿಸಲಾಗಿದೆ.
ಇಂತಹ ಸಾಧನೆಯನ್ನು ಮಾಡಿರುವ ಈ ಯುವಕ ಈಗ ಮತ್ತೆ ಸಂಗ್ರಾಣಿ ಕಲ್ಲು ಎತ್ತುವುದನ್ನು ಶುರು ಮಾಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಇಂತಹ ಹಳ್ಳಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಟ್ಟು ಅವರಿಗೆ ಅವರ ಸಾಧನೆಯಲ್ಲಿ ಮುಂದುವರೆಯಲು ಸಹಾಯ ಮಾಡಿ ಎಂದು ಹಳ್ಳಿ ಹುಡುಗರ ತಂಡವು ಕೇಳಿಕೊಳ್ಳುತ್ತದೆ.
ಹಳ್ಳಿ ಹುಡುಗರ ತಂಡವು ನಿಮ್ಮಲ್ಲಿ ವಿನಂತಿಸಿಕೊಲ್ಲುವುದೆನೆಂದರೆ, ನಿಮ್ಮ ಜಿಲ್ಲೆ ಹಾಗೂ ಹಳ್ಳಿಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ, ಜಾತ್ರೆಗಳಲ್ಲಿ ಇವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಮಾಡಿಕೊಟ್ಟು ಇಂತಹ ಹಳ್ಳಿ ಯುವಕರನ್ನು ಬೆಳೆಸಿ ಪ್ರೋತ್ಸಾಹಿಸಿ.
ಇದರಿಂದ ನಮ್ಮ ಹಳ್ಳಿ ಸಾಂಪ್ರದಾಯಿಕ ಆಟಗಳು ಮುಂದಿನ ಪೀಳಿಗೆಗೆ ಉಳಿಯುವುದಲ್ಲದೆ ಬೇರೆ ಇಂತಹ ಹಳ್ಳಿ ಪ್ರತಿಭೆಗಳು ಮುಂದೆ ಬರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಈ ಪ್ರತಿಭಾವಂತ ಹಳ್ಳಿ ಯುವಕ ರವಿ ಗೌಡ ಯಾರೂ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…