ವ್ಯಕ್ತಿ ವಿಶೇಷಣ

ಮೋದಿಗೆ ತನ್ನ ರಕ್ತದಲ್ಲಿ ಪತ್ರ ಬರೆದಿದ್ದ, ಈ ಹಳ್ಳಿ ಯುವಕನ ಇನ್ನೊಂದು ದೊಡ್ಡ ಸಾಧನೆ ಬಗ್ಗೆ ನಿಮ್ಗೆ ಗೊತ್ತಾ?ಈ ಲೇಖನಿ ಓದಿ, ದಯವಿಟ್ಟು ಹಳ್ಳಿ ಪ್ರತಿಭೆಯನ್ನು ಪ್ರೋತ್ಸಾಹಿಸಿ…

1054

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲುಕಿನ ಒಂದು ಕುಗ್ರಾಮ, ಮಲ್ಲದ ಗುಡ್ಡ ಗ್ರಾಮದ ಒಂದು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ ಹುಡುಗ ರವಿ ಗೌಡ. ಇವರ ತಂದೆ ವೀರ ಭದ್ರಗೌಡ ಜೀವನಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.

ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.

ಇದನ್ನು ಗಮನಿಸಿದ ರವಿಗೌಡ ತಾವು ಇದರಲ್ಲಿ ಏಕೆ ಸಾಧನೆ ಮಾಡಬಾರದೆಂದು ಯೋಚಿಸಿ, ಅಂದಿನಿಂದ ಅಂದರೆ ಅವರು 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗಲೇ ಸಂಗ್ರಾಣಿ ಕಲ್ಲು ಎತ್ತುವ  ಅಭ್ಯಾಸ ಶುರು ಮಾಡಿದ್ದಾರೆ. ಇದಕ್ಕೆ ಅವರ ಮಾವನವರು ಮತ್ತು ಸ್ನೇಹಿತರು ಹಾಗೂ ಗರಡಿ ಮನೆಯವರು ಪ್ರೋತ್ಸಾಹ ಕೊಟ್ಟಿದ್ದಾರೆ.

ಇದರಿಂದ ಹೆಚ್ಚು ಪ್ರೆರಿಪಿತಗೊಂಡ ರವಿಗೌಡ ತಾವು 9ನೇ ತರಗತಿಯಲ್ಲಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಿ ವಿಜಯಿಯಾಗಿದ್ದಾರೆ.

ಇವರು ತಮ್ಮ 19 ನೇ ವಯಸ್ಸಿಗೆ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಊರಿನ ಜಾತ್ರೆ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.

ಕಲ್ಲು ಎತ್ತುವ ಸ್ಪರ್ಧೆ ಇಟ್ಟಾಗ ಘಟಾನು ಘಟಿಘಳ ಜೊತೆ ಭಾಗವಹಿಸಿ ಅವರಿಗೆ ಪೈ ಪೋಟಿ ಕೊಟ್ಟು  ಪ್ರಥಮ ಸ್ಥಾನ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಆದ್ರೆ ಈ ಹಳ್ಳಿ ಹುಡುಗ ತಮ್ಮ ಸಾಧನೆಯ ಹಾದಿಯಲ್ಲಿದ್ದಾಗ, ದುರಾದ್ರಷ್ಟವಶಾತ್ ಅವರ ತಲೆಗೆ ಅಗಾಧವಾದ ಪೆಟ್ಟು ತಾಗಿ, ವೈದ್ಯರು ಇನ್ನೂ 4 ವರ್ಷಗಳ ಕಾಲ, ನೀನು ಈ ಕಲ್ಲನ್ನು ಎತ್ತುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ.

ಇದರಿಂದ ಬಹಳ ನಿರಾಶೆ ಅನುಭವಿಸಿದ್ದಾರೆ ಯುವಕ ರವಿಗೌಡ. ಆದ್ರೆ ತಮ್ಮ ಚಿಕ್ಕ ವಯಸ್ಸಿನಲ್ಲೇ ಬಹಳ ದೊಡ್ಡ ಸಾಧನೆ ಮಾಡಿದ ಈ ಯುವಕನ ಹೆಸರು ಜನರ ಮನಸ್ಸಿನಲ್ಲಿ ಮಾಸದೆ ಇನ್ನು ಉಳಿದಿದ್ದು, ಇವರನ್ನು ಜನ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಯುವಕ ಎಂದು ಈಗಲೂ ಹೊಗಳುತ್ತಿದ್ದಾರೆ.

ಇವರ ಸಾಧನೆಯನ್ನು ಅರಸಿ ಬೆಳ್ಳಿ ಕಡಗ ಸೇರಿದಂತೆ ಹಲವಾರು ಪ್ರಶಸ್ತಿ ಪದಕಗಳು ಇವರಿಗೆ ಬಂದಿವೆ. ಹಲವು ಕಾರ್ಯಕ್ರಮಗಳಲ್ಲಿ ಇವರ ಸಾಧನೆಯನ್ನು ಮೆಚ್ಚಿ ಸನ್ಮಾನಿಸಲಾಗಿದೆ.

ಇಂತಹ ಸಾಧನೆಯನ್ನು ಮಾಡಿರುವ ಈ ಯುವಕ ಈಗ ಮತ್ತೆ ಸಂಗ್ರಾಣಿ ಕಲ್ಲು ಎತ್ತುವುದನ್ನು ಶುರು ಮಾಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಇಂತಹ ಹಳ್ಳಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಟ್ಟು ಅವರಿಗೆ ಅವರ ಸಾಧನೆಯಲ್ಲಿ ಮುಂದುವರೆಯಲು ಸಹಾಯ ಮಾಡಿ ಎಂದು ಹಳ್ಳಿ ಹುಡುಗರ ತಂಡವು ಕೇಳಿಕೊಳ್ಳುತ್ತದೆ.

ಹಳ್ಳಿ ಹುಡುಗರ ತಂಡವು ನಿಮ್ಮಲ್ಲಿ ವಿನಂತಿಸಿಕೊಲ್ಲುವುದೆನೆಂದರೆ, ನಿಮ್ಮ ಜಿಲ್ಲೆ ಹಾಗೂ ಹಳ್ಳಿಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ, ಜಾತ್ರೆಗಳಲ್ಲಿ ಇವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಮಾಡಿಕೊಟ್ಟು ಇಂತಹ ಹಳ್ಳಿ ಯುವಕರನ್ನು ಬೆಳೆಸಿ ಪ್ರೋತ್ಸಾಹಿಸಿ.

ಇದರಿಂದ ನಮ್ಮ ಹಳ್ಳಿ ಸಾಂಪ್ರದಾಯಿಕ ಆಟಗಳು ಮುಂದಿನ ಪೀಳಿಗೆಗೆ ಉಳಿಯುವುದಲ್ಲದೆ ಬೇರೆ ಇಂತಹ ಹಳ್ಳಿ ಪ್ರತಿಭೆಗಳು ಮುಂದೆ ಬರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.

ಈ ಪ್ರತಿಭಾವಂತ ಹಳ್ಳಿ ಯುವಕ ರವಿ ಗೌಡ ಯಾರೂ ಗೊತ್ತಾ?

ಮೋದಿಯವರಿಗೆ ತನ್ನ ರಕ್ತದಲ್ಲಿ ಪತ್ರ ಬರೆದಿದ್ದ ಈ ರವಿಗೌಡ! ಆ ಪತ್ರದಲ್ಲ್ಲಿ ಏನಿತ್ತು ಗೊತ್ತಾ? ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.

  • ಸಿನಿಮಾ

    ಚಿತ್ರೀಕರಣದ ಸೆಟ್ ನಲ್ಲೇ ಕುರಿ ಬಲಿ ನೀಡಿದ್ರಾ ರಾಧಿಕಾ ಕುಮಾರಸ್ವಾಮಿ!ಕಾರಣ ಏನು ಗೊತ್ತಾ?

    ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು  ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ

  • ಉಪಯುಕ್ತ ಮಾಹಿತಿ

    ನೋಟುಗಳಲ್ಲಿರುವ ಗಾಂಧಿ ತಾತನ ಚಿತ್ರ ಬಂದಿದ್ದು ಹೇಗೆ ಮತ್ತು ಎಲ್ಲಿಂದ..?ತಿಳಿಯಲು ಈ ಲೇಖನ ಓದಿ…

    ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.