ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.