ರಾಜಕೀಯ

ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

1067

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.

ಯಾರೂ ಅರ್ಹರು…

ಶಾದಿ ಶಗುನ್‌ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫ‌ಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.

ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.

ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ‌.

ಈ ಯೋಜನೆಯ ಉದ್ದೇಶ…

ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್‌ ಎಜುಕೇಶನಲ್‌ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.

ಹಾಗಾದ್ರೆ  ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?

2013 ಅಕ್ಟೋಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.

ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫ‌ಲಾನುಭವಿಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಸಿನಿಮಾ, ಸುದ್ದಿ

    ದುಬಾರಿ ಕಾರು ಖರೀದಿಸಿದ ಡಿಂಪಲ್ ಕ್ವೀನ್, ಬೆಲೆ ಕೇಳಿದ್ರೆ ದಂಗಾಗ್ತೀರಾ.

    ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….