ರಾಜಕೀಯ

ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

1077

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.

ಯಾರೂ ಅರ್ಹರು…

ಶಾದಿ ಶಗುನ್‌ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫ‌ಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.

ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.

ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ‌.

ಈ ಯೋಜನೆಯ ಉದ್ದೇಶ…

ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್‌ ಎಜುಕೇಶನಲ್‌ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.

ಹಾಗಾದ್ರೆ  ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?

2013 ಅಕ್ಟೋಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.

ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫ‌ಲಾನುಭವಿಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • Cinema

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳಿಂದ ಮತ್ತೊಂದು ಬಿರುದು….! ಏನೆಂದು ತಿಳಿಯಲು ಇದನ್ನೊಮ್ಮೆ ಓದಿ.

    ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…