News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

1083

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.

ಯಾರೂ ಅರ್ಹರು…

ಶಾದಿ ಶಗುನ್‌ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫ‌ಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.

ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.

ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ‌.

ಈ ಯೋಜನೆಯ ಉದ್ದೇಶ…

ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್‌ ಎಜುಕೇಶನಲ್‌ ಫೌಂಡೇಶನ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.

ಹಾಗಾದ್ರೆ  ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?

2013 ಅಕ್ಟೋಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.

ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫ‌ಲಾನುಭವಿಯಾಗಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಸುದ್ದಿ

    ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಜ್ಯೋತಿಷ್ಯ

    ತುಂಬಾ ಅದೃಷ್ಟವಂತರಾಗಿರುತ್ತಾರೆ ಇಂಥ ಹುಡುಗಿಯರು!ಇವರು ಮನೆಗೆ ಬಂದ್ರೆ ಬದಲಾಗುತ್ತೆ ಅದೃಷ್ಟ…

    ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಉಪಯುಕ್ತ ಮಾಹಿತಿ

    SBI ನಲ್ಲಿ ನಿಮ್ಮ ಖಾತೆ ಇದ್ದಲ್ಲಿ ತಿಂಗಳಿಗೆ 15 ಸಾವಿರ ರೂಪಾಯಿಗಳ ಆದಾಯ ಪಡೆಯಬಹುದು ..! ಹೇಗೆ ಗೊತ್ತಾ..? ತಿಳಿಯಲು ಇದನ್ನು ಓದಿ..

    ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.