ಆಧ್ಯಾತ್ಮ

ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

2375

ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.

ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.

ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…

ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ  ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.

ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.

ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.

ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.

ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.

ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ