ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..
ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…
ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.
*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.
*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.
*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.
ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್ ಫ್ರೂಟ್ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…
ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ, ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…
ಮಳೆ ಬಂದಿಲ್ಲ ಅಂದ್ರೆ ಹಳ್ಳಿಗಳ ಕಡೆ ಮಳೆರಾಯನ ಪೂಜೆ ಮತ್ತು ಕಪ್ಪೆಗಳಗೆ ಮದುವೆ ಮಾಡಿಸುವುದು ವಾಡಿಕೆ. ಹಾಗೂ ಕಪ್ಪೆಗಳಿಗೆ ಮದುವೆ ಮಾಡಿಸಿ ಮಳೆರಾಯನ ಮೊರೆಹೊದರೆ ಖಂಡಿತ ಮಳೆ ಬರುತ್ತದೆ ಎಂಬ ನಂಬಿಕೆ ಇದೆ… ಹೌದು, ಕೋಲಾರ ತಾಲ್ಲೂಕಿನ ತೊಟ್ಲಿ ಗ್ರಾಮಸ್ಥರು ಹೀಗೆ ಕಪ್ಪೆಗಳಗೆ ಮದುವೆ ಮಾಡಿಸಿ ಮೂರೇ ದಿನದಲ್ಲಿ ಮಳೆ ಬರಿಸಿದ್ದಾರೆ. ಕಪ್ಪೆ ಮದುವೆ ಮಾಡಿಸುವುದು ಹೇಗೆ? ಊರಿನ ಜನರು ಮಳೆರಾಯನಿಗೆ ಪ್ರಾರ್ಥಿಸಿ ಹೆಣ್ಣು ಮತ್ತು ಗಂಡು ಕಪ್ಪೆಗಳಿಗೆ ಸಿಂಗಾರ ಮಾಡಿ ಗ್ರಾಮದ ಮುಖ್ಯಬೀದಿಗಳಲ್ಲಿ ತಮಟೆವಾದ್ಯಗಳೊಂದಿಗೆ ಕಪ್ಪೆ ಜೊಡಿಯ ಮೆರವಣಿಗೆ…
ಬೆಳಗಾವಿ, ಚಿಕ್ಕೋಡಿ, ರಾಯಚೂರಿನಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ಕೃಷ್ಣಾ ನದಿ ವ್ಯಾಪ್ತಿಯಲ್ಲಿರುವ ಬರುವ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ರಸ್ತೆಗಳು ಜಲಾವೃತವಾಗಿದ್ದು, ಕಾರು ಬೈಕ್ಗಳು ಆಟಿಕೆಯಂತಾಗಿವೆ, ಆದರೂ ಕೂಡ ವಾಹನ ಸವಾರರು ಮಾತ್ರ ಭೋರ್ಗರೆದು ಹರಿಯುತ್ತಿರುವ ನೀರಿನ ಮಧ್ಯೆಯೇ ದುಸ್ಸಾಹಸ ಮಾಡುತ್ತಿದ್ದಾರೆ. ಬೆಳಗಾವಿಯ ದೆಸೂರು-ಖಾನಾಪೂರ ಮಧ್ಯೆ ಇರುವ ಕೊಳ್ಳ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನೀರು ತುಂಬಿ ಹರಿಯುತ್ತಿದ್ದರೂ ಕೂಡ ವಾಹನ ಸವಾರರು ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ವೇಗದಿಂದ ಹರಿಯುತ್ತಿರುವ ನೀರನ್ನೇ ಲೆಕ್ಕಿಸದೇ ವಾಹನ ಸವಾರರು ಕೊಳ್ಳ ದಾಟುತ್ತಿದ್ದಾರೆ. ಸ್ಥಳದಲ್ಲಿ…
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.