News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

219

ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬೆಂಗಳೂರಿನ ನಿವಾಸಿ ಆನಂದ್ ರಾವ್ ಆನ್‍ಲೈನ್ ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬರಿಂದ ಮೋಸ ಹೋಗಿದ್ದಾರೆ. ಫೇಸ್‍ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ಚಾಟ್ ಮಾಡುತ್ತಾ ಆನಂದ್ ರಾವ್ ಸ್ನೇಹ ಸಂಪಾದಿಸಿದ್ದಾಳೆ. ಹೀಗೆ ಸ್ನೇಹ ವಾಟ್ಸಪ್ ನಲ್ಲಿಯೂ ಮುಂದುವರೆದು, ಹಲವು ದಿನಗಳವರೆಗೂ ಇಬ್ಬರೂ ಚಾಟ್ ಮಾಡಿಕೊಂಡಿದ್ದಾರೆ.

ಯುವತಿ ಇಂಗ್ಲೆಂಡ್ ನಿಂದ ಬೆಂಗಳೂರು ಬರುತ್ತಿದ್ದೇನೆ ಅಂತಾ ಆನಂದ್ ರಾವ್ ಗೆ ಮೆಸೇಜ್ ಹಾಕಿದ್ದಾಳೆ. ಸ್ವಲ್ಪ ಸಮಯದ ಬಳಿಕ ಯುವತಿ ತಾನು ದೆಹಲಿಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನನ್ನನ್ನು ಹಿಡಿದಿದ್ದಾರೆ ಅಂತಾ ಮೆಸೇಜ್ ಕಳುಹಿಸಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಒಂದೂವರೆ ಲಕ್ಷ ರೂ. ಹಣ ನೀಡಿದ್ರೆ ನನ್ನನ್ನು ಬಿಡ್ತಾರೆ ಅಂತಾ ಸುಳ್ಳು ಹೇಳಿದ್ದಾಳೆ.

ಇತ್ತ ಗೆಳತಿ ತೊಂದರೆಯಲ್ಲಿ ಸಿಲುಕಿದ್ದಾಳೆ ಎಂದು ಆನಂದ್‍ರಾವ್ ಯುವತಿಯ ಖಾತೆಗೆ ಒಂದು ಲಕ್ಷದ ಐದು ಸಾವಿರ ರೂ. ಹಣ ಜಮಾ ಮಾಡಿದ್ದಾರೆ. ಹಣ ಖಾತೆಗೆ ಬಂದ ಕೂಡಲೇ ಯುವತಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.

ತಾನು ಮೋಸ ಹೋಗಿದ್ದೇನೆ ಎಂದು ಅರಿತ ಕೂಡಲೇ ಆನಂದ್‍ರಾವ್ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಯುವತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…

  • ಸುದ್ದಿ

    ನೀವು ʼಟೀʼ ಪ್ರಿಯರೆ …? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ…

    ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…