ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮಲ್ಲಿ ಮದುವೆಯಾಗುವಾಗ ಸಂಭಂದಗಳಲ್ಲಿ ಮದುವೆಯಾಗುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಅಂದರೆ ಮಾವನ ಮಕ್ಕಳು ಅಥವಾ ಅಕ್ಕನ ಮಕ್ಕಳನ್ನು ಮದುವೆಯಾಗುವುದು.
ರಕ್ತಸಂಬಂಧಿಗಳೊಳಗಿನ ವಿವಾಹವಾದರೆ ಆಗುವ ತೊಂದರೆಗಳು :-
ರಕ್ತಸಂಬಂಧಿಗಳೊಳಗಿನ ವಿವಾಹದ ಕುರಿತು ಅಧ್ಯಯನ ನಡೆಸಿರುವ ಅಂತಾರಾಷ್ಟ್ರೀಯ ತಂಡ ಒಂದು, ಇಂತಹ ದಂಪತಿಗಳಿಗೆ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಅಪಾಯವು ನಲ್ವತ್ತರ ಹರೆಯದಲ್ಲಿ ಗರ್ಭವತಿಯಾಗುವ ಮಹಿಳೆಯರಿಗೆ ಜನಿಸುವ ಮಕ್ಕಳಿಗಿಂತ ಕಡಿಮೆ ಪ್ರಮಾಣದ್ದಾಗಿದೆ ಎಂದು ‘ಪಬ್ಲಿಕ್ ಲೈಬ್ರರಿ ಆಫ್ ಸೈನ್ಸ್’ ಎಂಬ ಜರ್ನಲ್ ವರದಿ ಮಾಡಿದೆ.
ನಲ್ವತ್ತರ ಹರೆಯದ ಮಹಿಳೆಯರು ಮಗು ಹಡೆಯುವುದಕ್ಕೆ ಪಶ್ಚಾತ್ತಾಪ ಪಡುವುದಿಲ್ಲವೆಂದಾದರೆ, ರಕ್ತಸಂಬಂಧಿಗಳು ವಿವಾಹವಾಗುವುದಕ್ಕೂ ಇದೇ ಅನ್ವಯವಾಗುತ್ತದೆ ಎಂದು ಮೆಸಾಚುಸೆಟ್ಸ್ ವಿಶ್ವವಿದ್ಯಾನಿಲಯದ ಪ್ರೊ. ಡೀನ್ ಪೌಲ್ ಹೇಳಿದ್ದಾರೆ. ಅವರು ಈ ಅಧ್ಯಯನ ತಂಡದ ನೇತೃತ್ವ ವಹಿಸಿದ್ದರು.
ರಕ್ತಸಂಬಂಧಿಗಳಲ್ಲಿ ಜನಿಸುವ ಮಕ್ಕಳಲ್ಲಿ ನ್ಯೂನ್ಯತೆಯ ಸಂಭಾವ್ಯತೆಯು ಶೇ.2ರಷ್ಟು ಹೆಚ್ಚಿದೆ. ಆದರೆ 40ರ ಹರೆಯದ ಮೇಲಿನ ಮಹಿಳೆಯರಲ್ಲಿ ಜನಿಸುವ ಮಕ್ಕಳಲ್ಲಿ ಈ ಅಪಾಯದ ಸಂಭಾವ್ಯತೆಯು ಶೇ 4.4ರಷ್ಟಿದೆ.
ನಲ್ವತ್ತು ವಯಸ್ಸಿನ ಮಹಿಳೆಯರು ಮಕ್ಕಳು ಹಡೆಯುವಲ್ಲಿ ಇಂತಹುದೇ ಅಪಾಯವನ್ನು ಎದುರಿಸುತ್ತಿರುವಾಗ, ಅಂತಹವರು ಮಕ್ಕಳನ್ನು ಹಡೆಯಬಾರದು ಎಂದು ಯಾರೂ ಸಲಹೆ ನೀಡುವುದಿಲ್ಲ ಎಂದು ತಂಡದ ಸದಸ್ಯ ನ್ಯೂಜಿಲ್ಯಾಂಡಿನ ಒಟಾಗೊ ವಿಶ್ವವಿದ್ಯಾನಿಲಯದ ಪ್ರೋ. ಹಮೀಶ್ ಸ್ಪೆನ್ಸರ್ ಅವರು ಹೇಳಿದ್ದಾರೆ.
ರಕ್ತಸಂಬಂಧಿಗಳಲ್ಲಿ ಹುಟ್ಟುವ ಮಕ್ಕಳು ಹೆಚ್ಚಾಗಿ ದೈಹಿಕ ನ್ಯೂನತೆಗಳನ್ನು (ಅಂಗವಿಕಲತೆ)ಯನ್ನು ಹೊಂದಿರುತ್ತಾರೆ, ಎಂಬ ಹಿನ್ನೆಲೆಯಲ್ಲಿ ರಕ್ತಸಂಬಂಧಿಗಳಲ್ಲಿ ಮದುವೆ ಸೂಕ್ತವಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ಕೇಂದ್ರ ಸರ್ಕಾರ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್’ ನಿಧಿ ಯೋಜನೆಯಡಿ ಸಣ್ಣ ರೈತರಿಗೆ ಇದೇ ತಿಂಗಳಿಂದ ಹಣ ನೀಡಲು ಶುರು ಮಾಡಲಿದೆ. ಈ ಯೋಜನೆಯಡಿ 2 ಹೆಕ್ಟೆರ್ ನಷ್ಟು ಕೃಷಿ ಭೂಮಿ ಹೊಂದಿರುವ ರೈತರ ಖಾತೆಗೆ ಹಣ ಜಮಾ ಆಗಲಿದೆ. ವರ್ಷಕ್ಕೆ 6 ಸಾವಿರ ರೂಪಾಯಿ ಖಾತೆಗೆ ಬರಲಿದೆ. ಮೂರು ಕಂತಿನಲ್ಲಿ ಹಣ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮಾರ್ಚ್ ತಿಂಗಳಿನಲ್ಲಿ ಮೊದಲ ಕಂತಿನ ಹಣ 2000 ರೂಪಾಯಿ ಸಿಗಲಿದೆ. ಆದ್ರೆ ಇದಕ್ಕೆ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ….
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.