ಸಂಬಂಧ

ರಕ್ಷಾಬಂಧನಕ್ಕೂ ಭಗವಾನ್ ಶ್ರೀ ಕೃಷ್ಣನ ಈ ಕತೆಗೂ ಇರುವ ಸಂಬಂದ ಏನ್ ಗೊತ್ತಾ…..

1589

ನಮ್ಮ ಭಾರತವು ಹಲುವು ಧರ್ಮ, ಜಾತಿಗಲಿರುವ ಒಂದು ರಾಷ್ಟ್ರ. ಇಲ್ಲಿ ಹಲವು ಹಬ್ಬಗಳನ್ನು ವಿಭಿನ್ನವಾಗಿ ಆಚರಿಸುತ್ತಾರೆ. ಅದೇ ರೀತಿ   ರಕ್ಷಾಬಂಧನ ಹಬ್ಬವನ್ನು ಭಾರತೀಯರು ಶ್ರಾವಣ ಮಾಸದಲ್ಲಿ ಆಚರಿಸುತ್ತಾರೆ. ಈ ಹಬ್ಬ ಸಂಬಂಧಗಳನ್ನು ಗಟ್ಟಿಗೊಳಿಸುವ ಮಹತ್ವವನ್ನು ಹೊಂದಿದೆ. ರಕ್ಷಾಬಂಧನ ಸಹೋದರ-ಸಹೋದರಿಯರ ವಿಶ್ವಾಸದ ಹಬ್ಬವಾಗಿದೆ. ಹಿರಿಯರು ತಮ್ಮ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟಿ ಆರತಿ ಮಾಡಿ, ಸೋದರನ ಆಶೀರ್ವಾದವನ್ನು ಬೇಡುತ್ತಾರೆ. ತಂಗಿಯ ರಕ್ಷಣೆ ಅಣ್ಣನಿಂದ, ಅಣ್ಣನ ರಕ್ಷಣೆ ತಂಗಿಯಿಂದ ಎಂಬ ಪರಸ್ಪರ ಭ್ರಾತೃತ್ವದ ಭಾವನೆಯನ್ನು ದಟ್ಟ ಗೊಳಿಸುವ ಹಬ್ಬ ಇದಾಗಿದೆ.

ಸಂಬಂಧಗಳನ್ನು ಬೆಸೆಯುವ ರಕ್ಷಾಬಂಧನ ದಿನದಂದು ಸಹೋದರರು ಕೇವಲ ರಾಖಿಯನ್ನು ಕಟ್ಟಿಸಿಕೊಂಡು ಉಡುಗೊರೆ ಕೊಟ್ಟ ಮಾತ್ರಕ್ಕೆ ಅವರ ಕರ್ತವ್ಯ ಮುಗಿಯುವುದಿಲ್ಲ. ರಕ್ಷಾಬಂಧನ ಅರ್ಥ ಬಾಂಧವ್ಯ ಹಾಗೂ ರಕ್ಷೆ ಎಂದು. ರಾಖಿ ಕಟ್ಟಿಕೊಂಡ ಸಹೋದರು ಸದಾಕಾಲ ಸಹೋದರಿಯ ಬೆನ್ನ ಹಿಂದೆ ನಿಂತು ಆಕೆಯ ರಕ್ಷಣೆ ಮಾಡುವುದು ಆತನ ಕರ್ತವ್ಯವಾಗಿರುತ್ತದೆ. ರಕ್ಷಾ ಬಂಧನದ ಅರ್ಥವನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ತಮ್ಮ ಕರ್ತವ್ಯವನ್ನು ಪಾಲಿಸಿದರೆ ರಕ್ಷಾ ಬಂಧನದ ದಿನದ ಆಚರಣೆಗೆ ನಿಜಕ್ಕೂ ಅರ್ಥ ಸಿಕ್ಕಂತಾಗುತ್ತದೆ.

ರಕ್ಷಾಬಂಧನ ಹಬ್ಬದ ಮಹತ್ವ:-

 

  • ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಯಜುರ್ ಉಪಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ. ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ಆದರೆ ಅಣ್ಣ ತಂಗಿಯರ ಬಾಂಧವ್ಯವನ್ನು ಪ್ರತಿಯೊಬ್ಬರೂ ಭಾವನಾತ್ಮಕವಾಗಿ ಸ್ಮರಿಸುವ ಈ ದಿನ ಬಾಲ್ಯದ ಅನೇಕ ಸಿಹಿ ಕಹಿ ನೆನಪುಗಳನ್ನು ನಮ್ಮ ಮನದಲ್ಲಿ ಮೂಡಿಸುತ್ತದೆ.

  • ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ

ರಕ್ಷಾ ಬಂಧನಕ್ಕೂ ಇದೆ ಪೌರಾಣಿಕ ಹಿನ್ನಲೆ…

ಎಲ್ಲ ಹಬ್ಬಗಳಂತೆ ರಕ್ಷಾಬಂಧನ ಹಬ್ಬದ ಹಿಂದೆಯೂ ಇದೆ ಒಂದು ಪೌರಾಣಿಕ ಕತೆ.  ರಕ್ಷಾಬಂಧನ ಆರಂಭವಾದ ಬಗ್ಗೆ ಹಲವು ಕಥೆಗಳೂ ಇವೆ. ಅದರಲ್ಲಿ ಪ್ರಮುಖವಾದದ್ದು ಕೃಷ್ಣ ಹಾಗೂ ದ್ರೌಪದಿಯ ಕಥೆ. ಶಿಶುಪಾಲನನ್ನು ವಧಿಸುವ ಸಂದರ್ಭದಲ್ಲಿ ಕೃಷ್ಣನು ತನ್ನ ಬೆರಳನ್ನು ಕುಯಿದುಕೊಂಡನು. ಆ ಸಂದರ್ಭದಲ್ಲಿ ದ್ರೌಪದಿ ತನ್ನ ವಸ್ತ್ರದ ತುಂಡನ್ನೇ ಹರಿದು ಅವನ ಬೆರಳಿಗೆ ಕಟ್ಟಿದಳು.

ಇದರಿಂದ ಭಾವಪರವಶನಾದ ಕೃಷ್ಣ ದ್ರೌಪದಿಯ ವಸ್ತ್ರದ ಒಂದೊಂದು ನೂಲಿನ ಋಣವನ್ನು ತೀರಿಸುತ್ತೇನೆ ಎಂದು ಮಾತುಕೊಟ್ಟ. ಅದರಂತೆಯೇ ಸದಾ ದ್ರೌಪದಿಯ ರಕ್ಷಣೆ ಮಾಡಿದ. ಕೃಷ್ಣ ಹಾಗೂ ದ್ರೌಪದಿಯ ಸಂಬಂಧವನ್ನು ಒಂದು ಆದರ್ಶ ಅಣ್ಣ ತಂಗಿಯರ ಸಂಬಂಧಕ್ಕೆ ಹೋಲಿಸುತ್ತಾರೆ. ಇನ್ನೊಂದು ಕಡೆ ಹಿಂದೆ ದೇವ ದಾನವರ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ದಾನವ ಚಕ್ರವರ್ತಿ ಬಲಿಯ ಮುಂದೆ ದೇವೇಂದ್ರನ ಶಕ್ತಿ ಸಾಲದಾಗಿತ್ತು. ಅಂತಹ ಸಂದರ್ಭದಲ್ಲಿ ದೇವೇಂದ್ರನ ಪತ್ನಿ ಸಚಿ ಸಹಾಯಕ್ಕಾಗಿ ಮಹಾವಿಷ್ಣುವಿನ ಮೊರೆ ಹೋದಳು.

ಆಗ ವಿಷ್ಣು ಆಕೆಯ ಕೈಯಲ್ಲಿ ಒಂದು ಪವಿತ್ರವಾದ ದಾರವನ್ನು ಕೊಟ್ಟು ಅದನ್ನು ಇಂದ್ರನ ಕೈಗೆ ಕಟ್ಟಲು ಹೇಳಿದನು. ಸಚಿ ಅದನ್ನು ದೇವೇಂದ್ರನ ಕೈಗೆ ಕಟ್ಟಿ ಆತನ ವಿಜಯಕ್ಕಾಗಿ ಭಕ್ತಿಯಿಂದ ಪ್ರಾರ್ಥಿಸಿದಳು. ಕೊನೆಗೆ ದೇವೇಂದ್ರ ಪ್ರಬಲ ಎದುರಾಳಿ ಬಲಿಯನ್ನೇ ಮಣಿಸಿದ. ಹೀಗಾಗಿ ರಾಖಿಯನ್ನು ಕೇವಲ ಅಣ್ಣತಂಗಿಯರ ಮಧ್ಯೆ ಮಾತ್ರವಲ್ಲ ಯಾರದೇ ವಿಜಯಕ್ಕಾಗಿ ಅಥವಾ ಅವರ ರಕ್ಷಣೆಗಾಗಿ ಪ್ರಾರ್ಥಿಸಬೇಕಾದಾಗ ಕಟ್ಟುವ ರೂಢಿಯೂ ಇದೆ.  ಹಾಗಾಗಿ ಅದನ್ನು ‘ರಕ್ಷೆ’ ಎನ್ನುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಸುದ್ದಿ

    ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

    ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…

  • ಜ್ಯೋತಿಷ್ಯ

    ಶುಭ ಶುಕ್ರವಾರದ ಈ ದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…