News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಉಪಯುಕ್ತ ಮಾಹಿತಿ

ರಾಜ್ಯಸರ್ಕಾರದಿಂದ ಗರ್ಭಿಣಿ ಮತ್ತು ಬಾಣಂತಿಯರಿಗೆ “ಮಾತೃಪೂರ್ಣ”ಯೋಜನೆ ಬಾಗ್ಯ!ಇದರ ಬಗ್ಗೆ ನೀವೂ ತಿಳಿಯಿರಿ ಮತ್ತು ನಿಮ್ಮವರಿಗೆ ಶೇರ್ ಮಾಡಿ ತಿಳಿಸಿ…

1687

ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ.

ಏನಿದು ಮಾತೃಪೂರ್ಣ ಯೋಜನೆ ?

ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ ಈ ಯೋಜನೆಯಡಿ,  ನೊಂದಾಯಿತ ಎಲ್ಲಾ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ದಿನದಂತೆ ವರ್ಷದಲ್ಲಿ 3೦೦ ದಿನ ನಿತ್ಯ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಉಚಿತ ಪೌಷ್ಟಿಕಾಂಶಯುಕ್ತ ಬಿಸಿಯೂಟ ವಿತರಿಸಲಾಗುತ್ತದೆ.

ಮಾತೃಪೂರ್ಣ ಯೋಜನೆಯಲ್ಲಿ ಏನೆಲ್ಲಾ ವಿತರಿಸಲಾಗುತ್ತದೆ…

ಈ ಯೋಜನೆಯಡಿ ನೀಡಲಾಗುವ ಬಿಸಿಯೂಟದಲ್ಲಿ ಅನ್ನ, ಸಾಂಬಾರ್, ಬೇಯಿಸಿದ ಮೊಟ್ಟೆ, ಪಲ್ಯ, 200 ಮಿಲಿ ಹಾಲು, ಶೇಂಗಾ ಚಿಕ್ಕಿ (ಮಿಠಾಯಿ) ಸೇರಿರುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆ ಕಾಳು ನೀಡಲಾಗುತ್ತದೆ. ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ  ದಿನಕ್ಕೆ ಅಗತ್ಯವಿರುವ ಶೇ 4೦ ರಿಂದ 45 ರಷ್ಟು ಪ್ರೋಟೀನ್, ಕ್ಯಾಲರಿ ಮತ್ತು ಕ್ಯಾಲ್ಸಿಯಂ ಈ ಒಂದು ಹೊತ್ತಿನ ಊಟದಿಂದ ದೊರಕುತ್ತದೆ. ಜೊತೆಗೆ ಕಬ್ಬಿಣಾಂಶಯುಕ್ತ ಮಾತ್ರೆಯನ್ನು ನೀಡಲಾಗುತ್ತಿದ್ದು, ಊಟವಾದ ಬಳಿಕ ಕಡ್ಡಾಯವಾಗಿ ಸೇವಿಸುವಂತೆ ಸೂಚಿಸಲಾಗುತ್ತದೆ.

ಮೂರು ತಿಂಗಳು ತುಂಬಿದ ಗರ್ಭಿಣಿಯರಿಂದ ಮಗು ಜನಿಸಿದ ನಂತರ ಬಾಣಂತಿ ಅವಧಿಯ 6 ತಿಂಗಳವರೆಗೆ ಉಚಿತ ಪೌಷ್ಟಿಕ ಆಹಾರ ಒದಗಿಸಲಾಗುತ್ತದೆ. ಅಂದರೆ ಒಟ್ಟು 12 ತಿಂಗಳು ಉಚಿತ ಊಟ ನೀಡಲಾಗುತ್ತದೆ. ಹೆಸರು ನೊಂದಾಯಿಸಿ ಗರ್ಭಿಣಿಯರು 3ನೇ ತಿಂಗಳಿನಿಂದ 8ನೇ ತಿಂಗಳ ಅಂತ್ಯದವರೆಗೂ ಅಂಗನವಾಡಿ ಕೇಂದ್ರಕ್ಕೆ ಬಂದು ಆಹಾರ ಸೇವಿಸಬೇಕು. 9ನೇ ತಿಂಗಳಿನಿಂದ ಬಾಣಂತಿ ಅವಧಿಯ 45 ದಿನದವರೆಗೂ ಸಹಾಯಕಿಯರು ಮನೆ ಬಾಗಿಲಿಗೆ ಊಟದ ಡಬ್ಬಿ ತಲುಪಿಸುತ್ತಾರೆ. ಉಳಿದ 41/2 ತಿಂಗಳು ಬಾಣಂತಿಯರು ಕೇಂದ್ರಕ್ಕೆ ಬರಬೇಕಾಗುತ್ತದೆ.

ಗರ್ಭಿಣಿಯರ ನೊಂದಣಿಯಿಂದ ಅವರಿಗೆ ಪ್ರಸವಪೂರ್ವ ಆರೈಕೆ ಸೇವೆಗಳು ದೊರಕುತ್ತದೆ. ಇಲ್ಲಿ ಹೆರಿಗೆಯ ಅನುಭವ ಹೊಂದಿರುವವರು ಮತ್ತು ಅನುಭವಿಗಳು ಒಂದೆಡೆ ಸೇರುವುದರಿಂದ ಅನುಭವ ಹಂಚಿಕೆ ಸಾಧ್ಯವಾಗುತ್ತದೆ. ಈ ವೇಳೆ ಅವರಿಗೆ ಆಪ್ತ ಸಮಾಲೋಚನೆ ಮಾಡಲಾಗುತ್ತದೆ. ಸ್ತನ್ಯ ಪಾನದ ಮಹತ್ವ, ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಿಕೊಳ್ಳುವುದು, ನಿಯಮಿತ ವೈದ್ಯಕೀಯ ತಪಾಸಣೆ, ವಿಶ್ರಾಂತಿ ಮುಂತಾದ ಅಗತ್ಯ ಮಾಹಿತಿ ನೀಡಲಾಗುತ್ತದೆ. ಪ್ರಸ್ತುತ ಗರ್ಭಿಣಿಯರು ಇರುವ ಮನೆಗೆ ಅಕ್ಕಿ, ಗೋಧಿ ಮುಂತಾದ ಧಾನ್ಯ ಪದಾರ್ಥಗಳನ್ನು ನೀಡುವ ಯೋಜನೆ ಜಾರಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಉಪಯುಕ್ತ ಮಾಹಿತಿ, ದೇಶ-ವಿದೇಶ

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಕನ ಓದಿ…

    ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್‍ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

  • ಸುದ್ದಿ

    ಮೂತ್ರ ವಿಸರ್ಜನೆ ಮಾಡುವುದಕ್ಕಾಗಿ ಚಲಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ- ಕ್ರಮಕ್ಕೆ ಆಗ್ರಹ….!

    ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್‌ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…

  • ಸುದ್ದಿ

    ಪ್ರೇಯಸಿಗಾಗಿ ಸಿಡ್ನಿಯಿಂದ ಬಂದ ಪಾಗಲ್ ಪ್ರೇಮಿ..ಪ್ರಿಯಕರನಿಗೆ ಕಾದಿತ್ತು ಶಾಕ್ ..!ಏನು ಗೊತ್ತಾ?

    ಇದೊಂದು ಪಾಗಲ್‌ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್‌ವೇರ್‌ ಎಂಜಿನಿಯರ್‌ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ…

  • ಆರೋಗ್ಯ

    ಆರೋಗ್ಯದ ಮೇಲೆ ಹುರುಳಿ ಟೀ, ಹುರುಳಿ ಟೀ ಇಂದ ಏನೆಲ್ಲಾ ಲಾಭವಿದೆ ಗೊತ್ತಾ.

    ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…