ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಫಲಾನುಭವಿಯು 6 ರಿಂದ 8 ಲಕ್ಷ ರೂ. ವರೆಗಿನ ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್ ಕಾರುಗಳನ್ನು ಖರೀದಿಸಬೇಕಾಗುತ್ತದೆ.
ಏನಿದು ಯೋಜನೆ?
*ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ.

* ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ.
* ಬ್ಯಾಂಕ್ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಮಾನದಂಡಗಳೇನು?
1.ಅಭ್ಯರ್ಥಿ ಬಳಿ ಹಳದಿ ಬ್ಯಾಡ್ಜ್ ಇರಬೇಕು.
2.ನಿರುದ್ಯೋಗಿಯಾಗಿರಬೇಕು.

3.ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿ ಹೊಂದಿರಬಾರದು.
4.ಬಿಪಿಎಲ್ ಕಾರ್ಡ್ ಹೊಂದಿರಬೇಕು.
5.ವರ್ಷಕ್ಕೆ 12 ಸಾವಿರ ರೂ. ಮೀರಿರಬಾರದು.
ಆಯ್ಕೆ ಪಕ್ರಿಯೆ ಹೇಗೆ?
ಆಯಾ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.
ವಿಶೇಷ ಯೋಜನೆ:-
ಈ ಮೊದಲೂ ನಿಗಮದ ಅಧಿಕಾರಿಗಳು ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾರು ಖರೀದಿಗೆ ಸಬ್ಸಿಡಿ ಮಂಜೂರು ಮಾಡುತ್ತಿದ್ದರು. ಆದರೆ ಸಬ್ಸಿಡಿ ಹಣವಿದ್ದರೂ ಬ್ಯಾಂಕ್ಗಳಲ್ಲಿ ಸಾಲ ಸಿಗದೇ ಕಾರು ಖರೀದಿಸಲು ಆಗುತ್ತಿರಲಿಲ್ಲ.

ಈ ರೀತಿ ಆಗದಂತೆ ನಿಗಮವು ಈಗ ಹೊಸ ಯೋಜನೆ ಜಾರಿಗೆ ತಂದಿದೆ. ವಾಣಿಜ್ಯ, ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಗಳ ಅಧಿಕಾರಿಗಳು ಹಾಗೂ ಆಯ್ಕೆಯಾದ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಾಲ ಸಿಗುವಂತೆ ಮಾಡಲಿದೆ.

ರಾಜ್ಯದಲ್ಲಿ ಪ್ರಥಮ ಬಾರಿ ಈ ವಿಶೇಷ ಯೋಜನೆ ಜಾರಿಗೆ ಬರುತ್ತಿದೆ. ಈ ವರ್ಷ 3500 ಕಾರುಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಶಾಸಕರು ಫಲಾನುಭವಿಗಳ ಪಟ್ಟಿಯನ್ನು ತ್ವರಿತವಾಗಿ ಕಳುಹಿಸಿದರೆ ಯೋಜನೆ ಶೀಘ್ರ ಅನುಷ್ಠಾನ ಮಾಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಸಸ್ಯಾಹಾರಿ ಖಾದ್ಯವನ್ನು ಆರ್ಡರ್ ಮಾಡಿದ್ದ ವಕೀಲರೊಬ್ಬರಿಗೆ ಮಾಂಸಾಹಾರಿ ಖಾದ್ಯವನ್ನು ಡೆಲಿವರಿ ಮಾಡಿದ್ದಕ್ಕಾಗಿ ಆಹಾರ ಸರಬರಾಜು ಮಾಡುವ ಝೊಮ್ಯಾಟೋ ಹಾಗೂ ಆ ಮಾಂಸಾಹಾರಿ ಖಾದ್ಯವನ್ನು ನೀಡಿದ ಹೋಟೆಲ್ ಗೆ ಪುಣೆಯ ಗ್ರಾಹಕ ನ್ಯಾಯಾಲಯವು 55 ಸಾವಿರ ರುಪಾಯಿ ದಂಡ ವಿಧಿಸಿದೆ. ಮಾಧ್ಯಮದ ವರದಿ ಪ್ರಕಾರ, ಇನ್ನು ನಲವತ್ತೈದು ದಿನದೊಳಗೆ ವಕೀಲ ಷಣ್ಮುಖ್ ದೇಶ್ ಮುಖ್ ಗೆ ದಂಡದ ಮೊತ್ತ ಪಾವತಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಶುಭಾಂಗಿ ದುನಾಖೆ ಮತ್ತು ಅನಿಲ್ ಜವಲೇಕರ್ ಅವರಿದ್ದ ಪೀಠ,…
ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…