ಸರ್ಕಾರದ ಯೋಜನೆಗಳು

ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ :ಹೊಸ ಕಾರು ಭಾಗ್ಯ ಯೋಜನೆ ..!ತಿಳಿಯಲು ಈ ಲೇಖನ ಓದಿ ..

2180

ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ  ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಫಲಾನುಭವಿಯು 6 ರಿಂದ 8 ಲಕ್ಷ ರೂ. ವರೆಗಿನ ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್‌ ಕಾರುಗಳನ್ನು ಖರೀದಿಸಬೇಕಾಗುತ್ತದೆ.

ಏನಿದು ಯೋಜನೆ?

*ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ.

* ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ.

* ಬ್ಯಾಂಕ್​ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್​ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಮಾನದಂಡಗಳೇನು?

1.ಅಭ್ಯರ್ಥಿ ಬಳಿ ಹಳದಿ ಬ್ಯಾಡ್ಜ್ ಇರಬೇಕು.

2.ನಿರುದ್ಯೋಗಿಯಾಗಿರಬೇಕು.

3.ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿ ಹೊಂದಿರಬಾರದು.

4.ಬಿಪಿಎಲ್ ಕಾರ್ಡ್ ಹೊಂದಿರಬೇಕು.

5.ವರ್ಷಕ್ಕೆ 12 ಸಾವಿರ ರೂ. ಮೀರಿರಬಾರದು.

ಆಯ್ಕೆ ಪಕ್ರಿಯೆ ಹೇಗೆ?

ಆಯಾ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.

ವಿಶೇಷ ಯೋಜನೆ:-

ಈ ಮೊದಲೂ ನಿಗಮದ ಅಧಿಕಾರಿಗಳು ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾರು ಖರೀದಿಗೆ ಸಬ್ಸಿಡಿ ಮಂಜೂರು ಮಾಡುತ್ತಿದ್ದರು. ಆದರೆ ಸಬ್ಸಿಡಿ ಹಣವಿದ್ದರೂ ಬ್ಯಾಂಕ್​ಗಳಲ್ಲಿ ಸಾಲ ಸಿಗದೇ ಕಾರು ಖರೀದಿಸಲು ಆಗುತ್ತಿರಲಿಲ್ಲ.

ಈ ರೀತಿ ಆಗದಂತೆ ನಿಗಮವು ಈಗ ಹೊಸ ಯೋಜನೆ ಜಾರಿಗೆ ತಂದಿದೆ. ವಾಣಿಜ್ಯ, ಸಾರ್ವಜನಿಕ ಕ್ಷೇತ್ರದ ಬ್ಯಾಂಕ್​ಗಳ ಅಧಿಕಾರಿಗಳು ಹಾಗೂ ಆಯ್ಕೆಯಾದ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಾಲ ಸಿಗುವಂತೆ ಮಾಡಲಿದೆ.

ರಾಜ್ಯದಲ್ಲಿ ಪ್ರಥಮ ಬಾರಿ ಈ ವಿಶೇಷ ಯೋಜನೆ ಜಾರಿಗೆ ಬರುತ್ತಿದೆ. ಈ ವರ್ಷ 3500 ಕಾರುಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಶಾಸಕರು ಫಲಾನುಭವಿಗಳ ಪಟ್ಟಿಯನ್ನು ತ್ವರಿತವಾಗಿ ಕಳುಹಿಸಿದರೆ ಯೋಜನೆ ಶೀಘ್ರ ಅನುಷ್ಠಾನ ಮಾಡಲಾಗುವುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ವಯಸ್ಸನ್ನು ಕಡಿಮೆ ಮಾಡುವ ಹಿಪ್ಪುನೇರಳೆ ಹಣ್ಣು, ಕಂಡರೆ ಬಿಡಬೇಡಿ. ಈ ಮಾಹಿತಿ ನೋಡಿ.

    ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ಸುದ್ದಿ

    ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು…!

    ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…