ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ 3500 ಮಂದಿ ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕಾರು ಖರೀದಿಸಲು 3 ಲಕ್ಷ ರೂ. ವರೆಗೆ ಸಬ್ಸಿಡಿ ನೀಡಲು ನಿರ್ಧರಿಸಿದೆ. ಸಾಲ ಸೌಲಭ್ಯ ಒದಗಿಸುವ ಮೂಲಕ ಕಾರು ವಿತರಣೆ ಪ್ರಕ್ರಿಯೆ ಶುರುವಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ವಾಲ್ಮೀಕಿ, ಬೋವಿ, ದೇವರಾಜ ಅರಸು ಅಭಿವೃದ್ಧಿ ನಿಗಮಗಳ ಮೂಲಕವೂ ಯೋಜನೆ ಜಾರಿಗೆ ತರಲಾಗುತ್ತಿದೆ. ಯೋಜನೆಗೆ ಬೆಂಗಳೂರಿನಲ್ಲಿ ಈಗಾಗಲೇ ಚಾಲನೆ ದೊರೆತಿದ್ದು ಆರಂಭಿಕವಾಗಿ 1000 ಅಭ್ಯರ್ಥಿಗಳನ್ನು ಮೊದಲ ಹಂತದಲ್ಲಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

ಫಲಾನುಭವಿಯು 6 ರಿಂದ 8 ಲಕ್ಷ ರೂ. ವರೆಗಿನ ಹುಂಡೈ ಕಂಪನಿಯ ಎಸ್ಸೆಂಟ್ ಕಾರು, ಟೊಯೋಟಾ ಇಟಿಯೋಸ್, ಮಾರುತಿ ಸ್ವಿಫ್ಟ್ ಡಿಸೈರ್ ಅಥವಾ ಹೊಂಡಾ ಅಮೇಝಾನ್ ಕಾರುಗಳನ್ನು ಖರೀದಿಸಬೇಕಾಗುತ್ತದೆ.
ಏನಿದು ಯೋಜನೆ?
*ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸುಮಾರು 3500 ಟ್ಯಾಕ್ಸಿ ಕಾರುಗಳ ವಿತರಣೆ.

* ಆಯ್ಕೆಯಾದ ಫಲಾನುಭವಿಗಳಿಗೆ ಒಂದು ಟ್ಯಾಕ್ಸಿಗೆ 3 ಲಕ್ಷ ರೂ.ವರೆಗೆ ಸಬ್ಸಿಡಿ.
* ಬ್ಯಾಂಕ್ಗಳಿಂದ ಸಾಲ ದೊರೆಯುವಂತೆ ಮಾಡುವುದು, ಓಲಾ ಹಾಗೂ ಊಬರ್ ಕಂಪನಿಗಳ ಜತೆ ಟೈಅಪ್ ಮಾಡಿಕೊಂಡು ಬಿಜಿನೆಸ್ ಕೊಡಿಸುವುದು, ಗಳಿಸಿದ ಆದಾಯದಲ್ಲಿ ಬ್ಯಾಂಕ್ಗಳಿಗೆ ಸಾಲ ಮರುಪಾವತಿಯಾಗುವಂತೆ ನೋಡಿಕೊಳ್ಳುವುದು.

ಮಾನದಂಡಗಳೇನು?
1.ಅಭ್ಯರ್ಥಿ ಬಳಿ ಹಳದಿ ಬ್ಯಾಡ್ಜ್ ಇರಬೇಕು.
2.ನಿರುದ್ಯೋಗಿಯಾಗಿರಬೇಕು.

3.ಕುಟುಂಬದಲ್ಲಿ ಯಾರೂ ಸರ್ಕಾರಿ ನೌಕರಿ ಹೊಂದಿರಬಾರದು.
4.ಬಿಪಿಎಲ್ ಕಾರ್ಡ್ ಹೊಂದಿರಬೇಕು.
5.ವರ್ಷಕ್ಕೆ 12 ಸಾವಿರ ರೂ. ಮೀರಿರಬಾರದು.
ಆಯ್ಕೆ ಪಕ್ರಿಯೆ ಹೇಗೆ?
ಆಯಾ ಜಿಲ್ಲೆಯಲ್ಲಿರುವ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿಗಳನ್ನು ಪಡೆದು ಸ್ವ ವಿವರಗಳನ್ನು ಭರ್ತಿ ಮಾಡಿ ಕೊಡಬೇಕು.

ಬಳಿಕ ಜಿಲ್ಲಾ ಉಸ್ತುವಾರಿ ಸಚಿವ, ಸಂಸದರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೇಂದ್ರ ಕಚೇರಿಗೆ ಕಳುಹಿಸಲಾಗುತ್ತದೆ.
ವಿಶೇಷ ಯೋಜನೆ:-
ಈ ಮೊದಲೂ ನಿಗಮದ ಅಧಿಕಾರಿಗಳು ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾರು ಖರೀದಿಗೆ ಸಬ್ಸಿಡಿ ಮಂಜೂರು ಮಾಡುತ್ತಿದ್ದರು. ಆದರೆ ಸಬ್ಸಿಡಿ ಹಣವಿದ್ದರೂ ಬ್ಯಾಂಕ್ಗಳಲ್ಲಿ ಸಾಲ ಸಿಗದೇ ಕಾರು ಖರೀದಿಸಲು ಆಗುತ್ತಿರಲಿಲ್ಲ.

ಈ ರೀತಿ ಆಗದಂತೆ ನಿಗಮವು ಈಗ ಹೊಸ ಯೋಜನೆ ಜಾರಿಗೆ ತಂದಿದೆ. ವಾಣಿಜ್ಯ, ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ಗಳ ಅಧಿಕಾರಿಗಳು ಹಾಗೂ ಆಯ್ಕೆಯಾದ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಾಲ ಸಿಗುವಂತೆ ಮಾಡಲಿದೆ.

ರಾಜ್ಯದಲ್ಲಿ ಪ್ರಥಮ ಬಾರಿ ಈ ವಿಶೇಷ ಯೋಜನೆ ಜಾರಿಗೆ ಬರುತ್ತಿದೆ. ಈ ವರ್ಷ 3500 ಕಾರುಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಶಾಸಕರು ಫಲಾನುಭವಿಗಳ ಪಟ್ಟಿಯನ್ನು ತ್ವರಿತವಾಗಿ ಕಳುಹಿಸಿದರೆ ಯೋಜನೆ ಶೀಘ್ರ ಅನುಷ್ಠಾನ ಮಾಡಲಾಗುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…