ಸುದ್ದಿ

ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

58

ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ.


ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್‌ ನೀಡಬಾರದು ಎಂದು ಮೇ 3ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್‌ (ಎನ್‌ಸಿಇಆರ್‌ಟಿ) ರಾಜ್ಯ ಸರ್ಕಾರಕ್ಕೆ ಹೊಸ ನಿರ್ದೇಶನ ನೀಡಿದೆ. ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ ವರ್ಕ್‌ ನೀಡುವ ಹಾಗೂ 1ರಿಂದ 5ನೇ ತರಗತಿ ಮಕ್ಕಳಿಗೆ ಎನ್‌ಸಿಇಆರ್‌ಟಿ ನಿಗದಿಪಡಿಸಿದ ಪಠ್ಯ ಹೊರತುಪಡಿಸಿ ಇನ್ಯಾವುದೋ ಪಠ್ಯ ಬೋಧನೆ ಮಾಡುವ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸಬಹುದು ಎಂದು ತಿಳಿಸಿದೆ.


ಈ ಹಿನ್ನೆಲೆಯಲ್ಲಿ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಎನ್‌ಸಿಇಆರ್‌ಟಿ ನಿಗದಿಪಡಿಸಿರುವ ಭಾಷೆ ಮತ್ತು ಗಣಿತ ವಿಷಯ ಹಾಗೂ 3ರಿಂದ 5ನೇ ತರಗತಿ ಮಕ್ಕಳಿಗೆ ಭಾಷೆ, ಪರಿಸರ ವಿಜ್ಞಾನ ಹಾಗೂ ಗಣಿತ ಹೊರತುಪಡಿಸಿ ಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸಬಾರದು ಎಂದು ಖಡಕ್‌ ಎಚ್ಚರಿಕೆ ನೀಡಿದೆ.


ಎನ್‌ಸಿಇಆರ್‌ಟಿ ನಿಗದಿಪಡಿಸಿರುವ ಪಠ್ಯ ವಿಷಯಗಳನ್ನು ಹೊರತುಪಡಿಸಿ, ಇನ್ಯಾವುದೇ ಪಠ್ಯಕ್ರಮ ನಿಗದಿಪಡಿಸಿಕೊಂಡು ಬೋಧಿಸುವ ಶಾಲೆಗಳ ಬಗ್ಗೆ ನಿಗಾ ವಹಿಸಲು ಹಾಗೂ ಶಾಲೆಗೆ ಭೇಟಿ ನೀಡಿ ಈ ಬಗ್ಗೆ ತಪಾಸಣೆ ನಡೆಸಲು ವಿಶೇಷ ತಂಡ ರಚನೆ ಮಾಡಿಕೊಳ್ಳಬೇಕು ಎಂದು ಇಲಾಖೆಯ ಆಯುಕ್ತರಿಗೆ, ಯೋಜನಾ ನಿರ್ದೇಶಕರಿಗೆ, ಉಪ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸ್ಪೂರ್ತಿ

    ಮದ್ವೆಯಾಗಿ ಮೂರೇ ಮೂರು ವಾರದಲ್ಲಿ ಬಿಟ್ಟು ಹೋದ ಪತಿ ಈಗ ಆಕೆ ಐಎಎಸ್ ಅಧಿಕಾರಿ!

    ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…

  • ತಂತ್ರಜ್ಞಾನ

    ನಿಮ್ಮ ಫೇಸ್ ಬುಕ್ ಪ್ರೊಫೈಲ್ ಫೋಟೋ ಬಗ್ಗೆ, ಇನ್ಮೇಲೆ ನೀವು ತಲೆ ಕೆಡಿಸ್ಕೋಬೇಡಿ!ಏಕೆ ಗೊತ್ತಾ….

    ಫೇಸ್‌ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…

  • ಉಪಯುಕ್ತ ಮಾಹಿತಿ

    ದಯವಿಟ್ಟು ಊಟ ತಿಂದ ತಕ್ಷಣ ಈ 5 ತಪ್ಪುಗಳನ್ನು ಮಾಡಲೇಬೇಡಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .