ಇತಿಹಾಸ

ರಾಣಿ ಪದ್ಮಿನಿಗೂ ಮತ್ತು ಅಲ್ಲಾವುದ್ದೀನ್ ಖಿಲ್ಜಿಗೂ ಇದ್ದ ನಿಜವಾದ ಸಂಬಂದ ಏನು ಗೊತ್ತಾ..?ಪದ್ಮಾವತಿಯು ಬೆಂಕಿಗೆ ಹಾರಿ ಸತ್ತಿದ್ದು ಏಕೆ?ರೋಚಕವಾಗಿದೆ ರಾಣಿ ಪದ್ಮಿನಿಯ ರಿಯಲ್ ಸ್ಟೋರಿ…

1755

ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ  ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.

ಅಲ್ಲಾವುದ್ದೀನ್ ಖಿಲ್ಜಿ ಬರೆದ ಆ ಪತ್ರದಲ್ಲಿ ಏನಿತ್ತು..?

ಆತನಿಗೆ ರಾಣಿ ಪದ್ಮಿನಿಯ ಸೌಂದರ್ಯದ ಬಗ್ಗೆ ಹೇಗೋ ತಿಳಿದು ಆಕೆಯನ್ನ ತನ್ನ ಕಾಮತೃಷೆಗಾಗಿ ಬಳಸಿಕೊಳ್ಳಬೇಕೆಂದು ಆಸೆಯಾದಾಗ ಆತ ಮಾಡಿದ ಕುತಂತ್ರವೆಂದರೆ ಆತ ಮೇವಾಡಕ್ಕೆ ಪತ್ರವೊಂದನ್ನ ಬರೀತಾನೆ. “ರಕ್ಷಾ ಬಂಧನ ಸದ್ಯದಲ್ಲೇ ಇರೋದ್ರಿಂದ ನಾನು ನಿನ್ನ(ರಾವಲ್ ರತನ ಸಿಂಗ್) ಹೆಂಡತಿ(ರಾಣಿ ಪದ್ಮಿನಿ)ಯನ್ನ ತಂಗಿಯಂತೆ ಸ್ವೀಕರಿಸಿದ್ದೇನೆ, ರಕ್ಷಾಬಂಧನಕ್ಕೆ ನಿನ್ನ ರಾಜ್ಯಕ್ಕೆ ಬಂದು ನಿನ್ನ ಹೆಂಡತಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತೇನೆ”

ಇದನ್ನ ಓದಿದ ರಾವಲ್ ಸಿಂಗ್ “ಸರಿ ಆಯಿತು ಆದರೆ ಒಂದು ಷರತ್ತು, ನನ್ನ ಹೆಂಡತಿ ಮುಖತಃ ನಿನ್ನ ಕೈಗೆ ರಾಖಿ ಕಟ್ಟಲ್ಲ ಆದರೆ ಆಕೆ ಅದಕ್ಕೆ ಪೂಜೆ ಮಾಡಿ ಇಟ್ಟಿರುತ್ತಾಳೆ ಅದನ್ನ ನಿನ್ನ ಕೈಗೆ ನಮ್ಮ ರಾಣಿಯ ಸಖಿಯರು ಕಟ್ತಾರೆ” ಅಂತ ವಾಪಸ್ ಪತ್ರ ಬರೀತಾನೆ.

ಅಲ್ಲಾವುದ್ದೀನ್ ಖಿಲ್ಜಿಯ ಷಡ್ಯಂತ್ರ:-

ಇದಕ್ಕೊಪ್ಪಿದ ಖಿಲ್ಜಿ ದೆಹಲಿಯಿಂದ ಹೊರಟು ಗುಪ್ತವಾಗಿ ತನ್ನ ದೊಡ್ಡ ಸೈನ್ಯವನ್ನ ಚಿತ್ತೋಡಗಢದಲ್ಲಿ ಬಿಡಾರ ಹೂಡಿಸಿ, ರಾವಲ್ ಸಿಂಗನ ಆಸ್ಥಾನಕ್ಕೆ ಒಂದಿಬ್ಬರು ಸಂಗಡಿಗರ ಜೊತೆ ಬರ್ತಾನೆ, ಬಂದ ಅತಿಥಿಗೆ ಆದರ ಆತಿಥ್ಯಗಳೂ ಸಿಕ್ಕವು, ಆತನ ಕೈಗೆ ರಾಖಿ ಕಟ್ಟಲು ಬಂದ ರಾಣಿಯ ಸಖಿಯನ್ನ ಕಂಡ ಅಲ್ಲಾವುದ್ದೀನ್ ಹೇಳ್ತಾನೆ “ನಾನು ಒಂದೇ ಒಂದು ಬಾರಿ ನನ್ನ ತಂಗಿ ಸಮಾನಳಾದ ಪದ್ಮಿನಿಯನ್ನ ನೋಡಬೇಕಲ್ಲ?”

ಇದಕ್ಕೆ ರಾಜ ಹೇಳ್ತಾನೆ “ಸರಿ ಆಯಿತು ಆದರೆ ಒಂದು ಷರತ್ತು, ರಾಣಿ ಮುಖತಃ ನಿಮಗೆ ತನ್ನ ಮುಖ ತೋರಿಸಲ್ಲ, ಆಕೆ ಆಕೆಯ ಅರಮನೆಯ ಹೊರಾಂಗಣದಲ್ಲಿ ನಿಂತಿರುತ್ತಾಳೆ, ಆಕೆಯ ಪ್ರತಿಬಿಂಬ ಒಂದು ರೂಮಿನ ಕನ್ನಡಿಯಲ್ಲಿ ಕಾಣುತ್ತೆ, ಆ ಪ್ರತಿಬಿಂಬದಲ್ಲಿ ನೀವು ಆಕೆಯ ಮುಖವನ್ನು ನೋಡಬಹುದು”ಇದಕ್ಕೊಪ್ಪಿದ ಖಿಲ್ಜಿ “ಆಯ್ತು ಸರಿ” ಅಂತಾನೆ.

ರಾಜ ರಾವಲ್ ರತನ ಸಿಂಗ್ ನ ಬುದ್ದಿವಂತಿಕೆ…

ಸರಿ ರಾಣಿ ಪದ್ಮಿನಿ ತನ್ನ ಮಹಲಿನ ಸರೋವರದ ಹತ್ತಿರ ಬಂದು ನಿಲ್ತಾಳೆ, ಅವಳ ಪ್ರತಿಬಿಂಬ ಆ ರೂಮಿನ ಕನ್ನಡಿಯ ಮೇಲೆ ಕಂಡ ಖಿಲ್ಜಿಗೆ ಆಕೆಯ ಸೌಂದರ್ಯ ದಂಗುಬಡಿಸಿತ್ತು, ಹೇಗಾದರೂ ಮಾಡಿ ಈಕೆಯನ್ನ ತನ್ನ ಪಟ್ಟದರಸಿ ಮಾಡಿಕೊಳ್ಳೇಬೇಕು ಅಂತ ಖಿಲ್ಜಿ ತೀರ್ಮಾನಿಸಿ ಒಮ್ಮಿಂದೊಮ್ಮೆಲೇ ರಾಜನ ಮೇಲೆ ದಾಳಿ ನಡೆಸಿ ರಾವಲ್ ಸಿಂಗನನನ್ನ ಯುದ್ಧ ಕೈದಿಯಾಗಿ ದೆಹಲಿಗೆ ಕರೆದುಕೊಂಡು ಹೋಗ್ತಾನೆ ಆದರೆ ರಾಣಿ ಪದ್ಮಿನಿ ಆತನ ಕೈಗೆ ಸಿಗಲ್ಲ.

ರಜಪೂತ ಇತಿಹಾಸಕಾರರು ಹೇಳುವುದೇನು?

(ಆದರೆ ರಜಪೂತ ಇತಿಹಾಸಕಾರರ ಪ್ರಕಾರ ಅಲ್ಲಿ ಬಂದು ಖಿಲ್ಜಿಗೆ ಮುಖ ತೋರಿಸಿದ್ದು ರಾಣಿ ಪದ್ಮಿನಿಯದ್ದಲ್ಲ, ಬದಲಾಗಿ ರಾಣಿಯ ಸಖಿ ಅಲ್ಲಿ ಬಂದು ನಿಂತದ್ದು, ಆದರೆ ಖಿಲ್ಜಿ ಒಂದು ಬಾರಿಯೂ ರಾಣಿ ಪದ್ಮಿನಿಯ ಮುಖ ನೋಡಿರದ ಕಾರಣ ರಾಣಿಯ ಸಖಿಯನ್ನೇ ಪದ್ಮಿನಿ ಅಂದುಕೊಳ್ತಾನಂತೆ)ನಿಜವಾಗಿಯೂ ಆತನಿಗೆ ಪದ್ಮಿನಿಯ ಸೌಂದರ್ಯ ಕಂಡು ಆಕೆಯನ್ನ ಮದುವೆ ಆಗೋ ಚಪಲವಿತ್ತೇ ಹೊರತು ಆಕೆಯನ್ನ ಆತ ತಂಗಿ ಅಂತ ಬಾಯಿಮಾತಿಗಷ್ಟೇ ತನ್ನ ಮಾಯಾಜಾಲ ಬೀಸಲು ಸುಳ್ಳು ಹೇಳಿದ್ದು.

ಅಲ್ಲಾವುದ್ದಿನ್ ಖಿಲ್ಜಿ ರಾಣಿ ಪದ್ಮಿನಿಗೆ ಬರೆದ ಪತ್ರದಲ್ಲಿದ್ದ ಆದೇಶ ಏನು..?

ರಾಜಾ ರಾವಲ್ ರತನ್ ಸಿಂಗ್ ಬಂಧಿಯಾಗಿ ದೆಹಲಿಯಲ್ಲಿದ್ದಾಗ ಅಲ್ಲಾವುದ್ದಿನ್ ಖಿಲ್ಜಿ ಚಿತ್ತೋಡಗಢಕ್ಕೆ ಪತ್ರ ಬರೆದು ಪದ್ಮಿನಿಗೆ ಹೀಗೆ ಹೇಳ್ತಾನೆ “ನಿನ್ನ ಗಂಡನನ್ನ ನೀನು ಜೀವಸಹಿತವಾಗಿ ನೋಡಬೇಕೆಂದರೆ ನೀನು ನನ್ನವಳಾಗಬೇಕು, ನೀ ನನ್ನ ಮದುವೆಯಾಗಿ ನನ್ನ ಜನಾನಾಗೆ ಬರಬೇಕು ಆಗ ಮಾತ್ರ ನಾ ನಿನ್ನ ಗಂಡನನ್ನ ಬಿಡುಗಡೆ ಮಾಡ್ತೀನಿ”

ಇದನ್ನೋದಿದ ರಾಣಿ ಪದ್ಮಿನಿಯ ರಕ್ತ ಕೊತ ಕೊತ ಕುದಿಯುತ್ತ ಆಕೆ ಖಿಲ್ಜಿಗೆ ಉತ್ತರ ಕೊಡ್ತಾ ಹೀಗೆ ಹೇಳ್ತಾಳೆ. “ನನಗೆ ನನ್ನ ಗಂಡನ ಕ್ಷೇಮ ಮುಖ್ಯ, ನಾನು ನಿನ್ನ ಷರತ್ತಿಗೆ ಒಪ್ಪುತ್ತೇನೆ, ಆದರೆ ನೀವು ಚಿತ್ತೋಡಗಢಕ್ಕೆ ಬರೋದು ಬೇಡ, ನಾನೇ ನಮ್ಮ ರಜಪೂತ ಪರಂಪರೆಯ ಪ್ರಕಾರ 100 ಪಲ್ಲಕ್ಕಿಗಳ ಜೊತೆಗೆ ನನ್ನ ಸಖಿಯರೊಂದಿಗೆ ನಿಮ್ಮ ಆಸ್ಥಾನಕ್ಕೆ ಬಂದು ನಿಮಗೆ ಶರಣಾಗ್ತೀನಿ”. ಇದನ್ನೋದಿದ ಖಿಲ್ಜಿಗೆ ಮತ್ತೂ ಖುಷಿಯಾಗಿ ಒಬ್ಬ ಸುರಸುಂದರಾಂಗಿ ಪದ್ಮಿನಿ ಸಿಗ್ತಾಳೆ ಅನ್ಕೊಂಡಿದ್ದೆ ಆದರೆ ಆಕೆ ಜೊತೆಗೆ ಇನ್ನೂ ನೂರು ಜನ ಸುಂದರ ಸಖಿಯರಿರ್ತಾರೆ ಅಂತ ಮನದಲ್ಲೇ ತನ್ನ ಕಾಮಾಗ್ನಿಯ ಬಯಕೆಯನ್ನು ಇಮ್ಮಡಿಗೊಳಿಸಿಕೊಳ್ತಾನೆ.

ರಾಣಿ ಪದ್ಮಿನಿಯು ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡಿಸಿದ್ದೇ ಒಂದು ರೋಚಕ್…

ಆ ದಿನ ಬಂದೇ ಬಿಟ್ಟಿತು, ರಾಣಿ ಪದ್ಮಿನಿ ನೂರು ಪಲ್ಲಕ್ಕಿಗಳ ಮೂಲಕ ಖಿಲ್ಜಿಯ ಆಸ್ಥಾನಕ್ಕೆ ಬಂದೇ ಬಿಟ್ಟಳು, ಆಗಲೂ ಆತ ಆಕೆಯ ನಿಜವಾದ ಮುಖ ಇನ್ನೂ ನೋಡಿರಲಿಲ್ಲ, ಯಾವಾಗ ಆತ ಪಲ್ಲಕ್ಕಿಯ ಹತ್ತಿರ ಹೊರಟು ಪದ್ಮಿನಿಯನ್ನ ನೋಡಲು ಬರುತ್ತಾನೋ ಆಗ ಪಲ್ಲಕ್ಕಿಗಳಿಂದ ಹರಹರಮಹಾದೇವ ಘೋಷಣೆಗಳನ್ನ ಕೂಗುತ್ತ ನೂರು ಜನ ರಜಪೂತ ಸೈನಿಕರು ಒಮ್ಮೆಲೆ ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡ್ತಾರೆ. ಇದು ರಾಣಿ ಪದ್ಮಿನಿಯೇ ಖಿಲ್ಜಿಯ ಸೊಕ್ಕು ಮುರಿಯೋದಕ್ಕೆ ರಚಿಸಿದ್ದ ಪದ್ಮವ್ಯೂಹವಾಗಿತ್ತು, ನೂರು ಪಲ್ಲಕ್ಕಿಗಳಲ್ಲಿ ತನ್ನ ಸಖಿಯರಿರ್ತಾರೆ ಅಂತ ಹೇಳಿದ್ದ ಪದ್ಮಿನಿ ಅವುಗಳಲ್ಲಿ ತನ್ನ 100 ಬಲಾಢ್ಯ ರಜಪೂತ ಸೈನಿಕರನ್ನ ಕರೆತಂದಿರ್ತಾಳೆ. ಖಿಲ್ಜಿಗೆ ತನ್ನ ಆಸ್ಥಾನದಲ್ಲಿ ಏನ್ ನಡೀತಿದೆ ಅಂತ ಅರ್ಥವಾಗೋಕೂ ಮುಂಚೆಯೇ ರಾಣಿ ಪದ್ಮಿನಿ ಖಿಲ್ಜಿಯ ಹೆಡೆಮುರಿಕಟ್ಟಿ ಸೋಲಿಸಿ ತನ್ನ ಗಂಡ ರಾವಲ್ ರತನ್ ಸಿಂಗನನ್ನ ಬಿಡಿಸಿಕೊಂಡು ಚಿತ್ತೋಡಗಢಕ್ಕೆ ವಾಪಸ್ಸಾಗ್ತಾಳೆ.

ಅವಮಾನಿತನಾದ ಅಲ್ಲಾವುದ್ದೀನ್ ಖಿಲ್ಜಿಯಿಂದ ಚಿತ್ತೋಡಗಢದ ಮೇಲೆ ದಾಳಿ…

ಈ ಘಟನೆಯಿಂದ ಅದೂ ಒಂದು ಹೆಣ್ಣಿನ ಕೈಯಿಂದ ನಾನು ಸೋಲೋದಾ ಅಂತ ಪಿತ್ತ ನಿತ್ತಗೇರಿದ ಅಲ್ಲಾವುದ್ದೀನ್ ಖಿಲ್ಜಿ, ಈ ಬಾರಿ ಮತ್ತೆ ಚಿತ್ತೋಡಗಢದ ಮೇಲೆ ದಾಳಿ ಮಾಡ್ತಾನೆ, ಕೆಲ ದಿನಗಳ ಕಾಲ ರಜಪೂತರು ಖಿಲ್ಜಿಗೆ ಪ್ರತಿರೋಧ ತೋರುತ್ತಾರೆ ಆದರೆ ಖಿಲ್ಜಿಯ ಬೃಹತ್ ಸೈನ್ಯದೆದುರು ರಜಪೂತರು ಸೋಲುತ್ತಾರೆ. ಕೋಟೆಗಿದ್ದ ಒಂದೇ ಒಂದು ದ್ವಾರವನ್ನು ತನ್ನ ಸೈನಿಕರಿಂದ ಮುಚ್ಚಿಸಿ ರಜಪೂತ ಸೈನಿಕರಿಗೆ ಹೊರಗಿನಿಂದ ಯಾವ ಸಾಮಗ್ರಿಗಳು ಸಿಗದ ಹಾಗೆ ಮಾಡಿ ಚಿತ್ತೋಡವನ್ನ ಖಿಲ್ಜಿ ವಶಪಡಿಸಿಕೊಂಡು ರಾವಲ್ ರತನ್ ಸಿಂಹನ ತಲೆ ಕಡಿದು ಹಾಕ್ತಾನೆ.

ರಾಣಿ ಪದ್ಮಾವತಿ ತನ್ನ 16,000 ಸಖಿಯರೊಂದಿಗೆ ಬೆಂಕಿಗೆ ಹಾರಿದ್ದು..!

ಈಗ ಮುಂದೇನು? ಅಲ್ಲಾವುದ್ದೀನ್ ಎಂಬ ಕಾಮುಕ ಚಿತ್ತೋಡದಲ್ಲಿರೊ ಎಲ್ಲ ರಜಪೂತ ಮಹಿಳೆಯರನ್ನೂ ಸೆಕ್ಸ್ ಸ್ಲೇವ್ಸ್ಗಳಾಗಿ ಕರೆದುಕೊಂಡು ಹೋಗೋಕೆ ಕೋಟೆ ಒಳ ಬರಿಕೈಲಿ ಮುಂಚೆಯೇ ಈ ವಿಷಯ ಅರಿತ ರಾಣಿ ಪದ್ಮಿನಿ, ನಾವು ರಜಪೂತರು ಯಾವತ್ತೂ ನಮ್ಮ ಶೀಲವನ್ನ ಕಳೆದುಕೊಂಡವರಲ್ಲ, ಅಂಥದ್ರಲ್ಲಿ ಈ ಮುಸಲ್ಮಾನ ದೊರೆಗೆ ನಮ್ಮ ಶೀಲ ಅರ್ಪಿತವಾಗೋದೇ? ಛೀ ಹಾಗೇ ಮಾಡೋದಕ್ಕಿಂತ ವೀರಸ್ವರ್ಗ ಪ್ರಾಪ್ತಿ ಮಾಡಿಕೊಳ್ಳೋದೇ ಎಷ್ಟೋ ವಾಸಿ ಅಂತ ತಕ್ಷಣ ಆಕೆ ಚಿತ್ತೋಡದಲ್ಲಿದ್ದ ತನ್ನ 16,000 ರಜಪೂತನಿಯರೊಂದಿಗೆ ಬೆಂಕಿಗೆ ಹಾರಿ ಜೌಹಾರ್ ಮಾಡಿಕೊಂಡು ಬಿಡ್ತಾಳೆ.

ನಂತರ ಕೋಟೆಯ ಒಳಗೆ ಖಿಲ್ಜಿ ಬಂದು ನೋಡಿದಾಗ ಆತನಿಗೆ ಯಾವೊಬ್ಬ ಹೆಂಗಸೂ ಚಿತ್ತೋಡದಲ್ಲಿ ಸಿಗದೆ ಹೆಣಗಳನ್ನ ಹದ್ದು ಕುಕ್ಕುತ್ತ ಕೂತಿರೊ ದೃಶ್ಯಗಳೇ ಕಂಡು ಆತ ದೆಹಲಿಗೆ ವಾಪಸ್ ಆಗ್ತಾನೆ. ನೋಡಿ ತನ್ನ ಆತ್ಮ & ಶೀಲರಕ್ಷಣೆಗಾಗಿ ತನ್ನನ್ನ ತಾನು ಬೆಂಕಿಗಾಹುತಿ ಮಾಡಿಕಂಡ & ತಾನು ಸಾಯೋವರೆಗೂ ಖಿಲ್ಜಿಯ ವಿರುದ್ಧ ಹೊರಾಡಿದ್ದ ರಜಪೂತರಷ್ಟೇ ಯಾಕೆ ಇಡೀ ಭಾರತದ ಮಹಿಳೆಯರಿಗೆ ಆದರ್ಶಪ್ರಾಯವಾಗಿರೋ ವೀರವನಿತೆ ಪದ್ಮಿನಿ ರಾಣಿ ಬಗ್ಗೆ ಕೆಲವರು ಒಂದು ಚಿತ್ರದ ಮುಖಾಂತರ ಕೆಟ್ಟ ರೀತಿಯಲ್ಲಿ ತೋರಿಸಲು ಹೊರಟಿದ್ದಾರೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…