ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.

ಅಲ್ಲಾವುದ್ದೀನ್ ಖಿಲ್ಜಿ ಬರೆದ ಆ ಪತ್ರದಲ್ಲಿ ಏನಿತ್ತು..?
ಆತನಿಗೆ ರಾಣಿ ಪದ್ಮಿನಿಯ ಸೌಂದರ್ಯದ ಬಗ್ಗೆ ಹೇಗೋ ತಿಳಿದು ಆಕೆಯನ್ನ ತನ್ನ ಕಾಮತೃಷೆಗಾಗಿ ಬಳಸಿಕೊಳ್ಳಬೇಕೆಂದು ಆಸೆಯಾದಾಗ ಆತ ಮಾಡಿದ ಕುತಂತ್ರವೆಂದರೆ ಆತ ಮೇವಾಡಕ್ಕೆ ಪತ್ರವೊಂದನ್ನ ಬರೀತಾನೆ. “ರಕ್ಷಾ ಬಂಧನ ಸದ್ಯದಲ್ಲೇ ಇರೋದ್ರಿಂದ ನಾನು ನಿನ್ನ(ರಾವಲ್ ರತನ ಸಿಂಗ್) ಹೆಂಡತಿ(ರಾಣಿ ಪದ್ಮಿನಿ)ಯನ್ನ ತಂಗಿಯಂತೆ ಸ್ವೀಕರಿಸಿದ್ದೇನೆ, ರಕ್ಷಾಬಂಧನಕ್ಕೆ ನಿನ್ನ ರಾಜ್ಯಕ್ಕೆ ಬಂದು ನಿನ್ನ ಹೆಂಡತಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತೇನೆ”

ಇದನ್ನ ಓದಿದ ರಾವಲ್ ಸಿಂಗ್ “ಸರಿ ಆಯಿತು ಆದರೆ ಒಂದು ಷರತ್ತು, ನನ್ನ ಹೆಂಡತಿ ಮುಖತಃ ನಿನ್ನ ಕೈಗೆ ರಾಖಿ ಕಟ್ಟಲ್ಲ ಆದರೆ ಆಕೆ ಅದಕ್ಕೆ ಪೂಜೆ ಮಾಡಿ ಇಟ್ಟಿರುತ್ತಾಳೆ ಅದನ್ನ ನಿನ್ನ ಕೈಗೆ ನಮ್ಮ ರಾಣಿಯ ಸಖಿಯರು ಕಟ್ತಾರೆ” ಅಂತ ವಾಪಸ್ ಪತ್ರ ಬರೀತಾನೆ.
ಅಲ್ಲಾವುದ್ದೀನ್ ಖಿಲ್ಜಿಯ ಷಡ್ಯಂತ್ರ:-

ಇದಕ್ಕೊಪ್ಪಿದ ಖಿಲ್ಜಿ ದೆಹಲಿಯಿಂದ ಹೊರಟು ಗುಪ್ತವಾಗಿ ತನ್ನ ದೊಡ್ಡ ಸೈನ್ಯವನ್ನ ಚಿತ್ತೋಡಗಢದಲ್ಲಿ ಬಿಡಾರ ಹೂಡಿಸಿ, ರಾವಲ್ ಸಿಂಗನ ಆಸ್ಥಾನಕ್ಕೆ ಒಂದಿಬ್ಬರು ಸಂಗಡಿಗರ ಜೊತೆ ಬರ್ತಾನೆ, ಬಂದ ಅತಿಥಿಗೆ ಆದರ ಆತಿಥ್ಯಗಳೂ ಸಿಕ್ಕವು, ಆತನ ಕೈಗೆ ರಾಖಿ ಕಟ್ಟಲು ಬಂದ ರಾಣಿಯ ಸಖಿಯನ್ನ ಕಂಡ ಅಲ್ಲಾವುದ್ದೀನ್ ಹೇಳ್ತಾನೆ “ನಾನು ಒಂದೇ ಒಂದು ಬಾರಿ ನನ್ನ ತಂಗಿ ಸಮಾನಳಾದ ಪದ್ಮಿನಿಯನ್ನ ನೋಡಬೇಕಲ್ಲ?”

ಇದಕ್ಕೆ ರಾಜ ಹೇಳ್ತಾನೆ “ಸರಿ ಆಯಿತು ಆದರೆ ಒಂದು ಷರತ್ತು, ರಾಣಿ ಮುಖತಃ ನಿಮಗೆ ತನ್ನ ಮುಖ ತೋರಿಸಲ್ಲ, ಆಕೆ ಆಕೆಯ ಅರಮನೆಯ ಹೊರಾಂಗಣದಲ್ಲಿ ನಿಂತಿರುತ್ತಾಳೆ, ಆಕೆಯ ಪ್ರತಿಬಿಂಬ ಒಂದು ರೂಮಿನ ಕನ್ನಡಿಯಲ್ಲಿ ಕಾಣುತ್ತೆ, ಆ ಪ್ರತಿಬಿಂಬದಲ್ಲಿ ನೀವು ಆಕೆಯ ಮುಖವನ್ನು ನೋಡಬಹುದು”ಇದಕ್ಕೊಪ್ಪಿದ ಖಿಲ್ಜಿ “ಆಯ್ತು ಸರಿ” ಅಂತಾನೆ.
ರಾಜ ರಾವಲ್ ರತನ ಸಿಂಗ್ ನ ಬುದ್ದಿವಂತಿಕೆ…
ಸರಿ ರಾಣಿ ಪದ್ಮಿನಿ ತನ್ನ ಮಹಲಿನ ಸರೋವರದ ಹತ್ತಿರ ಬಂದು ನಿಲ್ತಾಳೆ, ಅವಳ ಪ್ರತಿಬಿಂಬ ಆ ರೂಮಿನ ಕನ್ನಡಿಯ ಮೇಲೆ ಕಂಡ ಖಿಲ್ಜಿಗೆ ಆಕೆಯ ಸೌಂದರ್ಯ ದಂಗುಬಡಿಸಿತ್ತು, ಹೇಗಾದರೂ ಮಾಡಿ ಈಕೆಯನ್ನ ತನ್ನ ಪಟ್ಟದರಸಿ ಮಾಡಿಕೊಳ್ಳೇಬೇಕು ಅಂತ ಖಿಲ್ಜಿ ತೀರ್ಮಾನಿಸಿ ಒಮ್ಮಿಂದೊಮ್ಮೆಲೇ ರಾಜನ ಮೇಲೆ ದಾಳಿ ನಡೆಸಿ ರಾವಲ್ ಸಿಂಗನನನ್ನ ಯುದ್ಧ ಕೈದಿಯಾಗಿ ದೆಹಲಿಗೆ ಕರೆದುಕೊಂಡು ಹೋಗ್ತಾನೆ ಆದರೆ ರಾಣಿ ಪದ್ಮಿನಿ ಆತನ ಕೈಗೆ ಸಿಗಲ್ಲ.

ರಜಪೂತ ಇತಿಹಾಸಕಾರರು ಹೇಳುವುದೇನು?
(ಆದರೆ ರಜಪೂತ ಇತಿಹಾಸಕಾರರ ಪ್ರಕಾರ ಅಲ್ಲಿ ಬಂದು ಖಿಲ್ಜಿಗೆ ಮುಖ ತೋರಿಸಿದ್ದು ರಾಣಿ ಪದ್ಮಿನಿಯದ್ದಲ್ಲ, ಬದಲಾಗಿ ರಾಣಿಯ ಸಖಿ ಅಲ್ಲಿ ಬಂದು ನಿಂತದ್ದು, ಆದರೆ ಖಿಲ್ಜಿ ಒಂದು ಬಾರಿಯೂ ರಾಣಿ ಪದ್ಮಿನಿಯ ಮುಖ ನೋಡಿರದ ಕಾರಣ ರಾಣಿಯ ಸಖಿಯನ್ನೇ ಪದ್ಮಿನಿ ಅಂದುಕೊಳ್ತಾನಂತೆ)ನಿಜವಾಗಿಯೂ ಆತನಿಗೆ ಪದ್ಮಿನಿಯ ಸೌಂದರ್ಯ ಕಂಡು ಆಕೆಯನ್ನ ಮದುವೆ ಆಗೋ ಚಪಲವಿತ್ತೇ ಹೊರತು ಆಕೆಯನ್ನ ಆತ ತಂಗಿ ಅಂತ ಬಾಯಿಮಾತಿಗಷ್ಟೇ ತನ್ನ ಮಾಯಾಜಾಲ ಬೀಸಲು ಸುಳ್ಳು ಹೇಳಿದ್ದು.
ಅಲ್ಲಾವುದ್ದಿನ್ ಖಿಲ್ಜಿ ರಾಣಿ ಪದ್ಮಿನಿಗೆ ಬರೆದ ಪತ್ರದಲ್ಲಿದ್ದ ಆದೇಶ ಏನು..?
ರಾಜಾ ರಾವಲ್ ರತನ್ ಸಿಂಗ್ ಬಂಧಿಯಾಗಿ ದೆಹಲಿಯಲ್ಲಿದ್ದಾಗ ಅಲ್ಲಾವುದ್ದಿನ್ ಖಿಲ್ಜಿ ಚಿತ್ತೋಡಗಢಕ್ಕೆ ಪತ್ರ ಬರೆದು ಪದ್ಮಿನಿಗೆ ಹೀಗೆ ಹೇಳ್ತಾನೆ “ನಿನ್ನ ಗಂಡನನ್ನ ನೀನು ಜೀವಸಹಿತವಾಗಿ ನೋಡಬೇಕೆಂದರೆ ನೀನು ನನ್ನವಳಾಗಬೇಕು, ನೀ ನನ್ನ ಮದುವೆಯಾಗಿ ನನ್ನ ಜನಾನಾಗೆ ಬರಬೇಕು ಆಗ ಮಾತ್ರ ನಾ ನಿನ್ನ ಗಂಡನನ್ನ ಬಿಡುಗಡೆ ಮಾಡ್ತೀನಿ”

ಇದನ್ನೋದಿದ ರಾಣಿ ಪದ್ಮಿನಿಯ ರಕ್ತ ಕೊತ ಕೊತ ಕುದಿಯುತ್ತ ಆಕೆ ಖಿಲ್ಜಿಗೆ ಉತ್ತರ ಕೊಡ್ತಾ ಹೀಗೆ ಹೇಳ್ತಾಳೆ. “ನನಗೆ ನನ್ನ ಗಂಡನ ಕ್ಷೇಮ ಮುಖ್ಯ, ನಾನು ನಿನ್ನ ಷರತ್ತಿಗೆ ಒಪ್ಪುತ್ತೇನೆ, ಆದರೆ ನೀವು ಚಿತ್ತೋಡಗಢಕ್ಕೆ ಬರೋದು ಬೇಡ, ನಾನೇ ನಮ್ಮ ರಜಪೂತ ಪರಂಪರೆಯ ಪ್ರಕಾರ 100 ಪಲ್ಲಕ್ಕಿಗಳ ಜೊತೆಗೆ ನನ್ನ ಸಖಿಯರೊಂದಿಗೆ ನಿಮ್ಮ ಆಸ್ಥಾನಕ್ಕೆ ಬಂದು ನಿಮಗೆ ಶರಣಾಗ್ತೀನಿ”. ಇದನ್ನೋದಿದ ಖಿಲ್ಜಿಗೆ ಮತ್ತೂ ಖುಷಿಯಾಗಿ ಒಬ್ಬ ಸುರಸುಂದರಾಂಗಿ ಪದ್ಮಿನಿ ಸಿಗ್ತಾಳೆ ಅನ್ಕೊಂಡಿದ್ದೆ ಆದರೆ ಆಕೆ ಜೊತೆಗೆ ಇನ್ನೂ ನೂರು ಜನ ಸುಂದರ ಸಖಿಯರಿರ್ತಾರೆ ಅಂತ ಮನದಲ್ಲೇ ತನ್ನ ಕಾಮಾಗ್ನಿಯ ಬಯಕೆಯನ್ನು ಇಮ್ಮಡಿಗೊಳಿಸಿಕೊಳ್ತಾನೆ.

ರಾಣಿ ಪದ್ಮಿನಿಯು ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡಿಸಿದ್ದೇ ಒಂದು ರೋಚಕ್…
ಆ ದಿನ ಬಂದೇ ಬಿಟ್ಟಿತು, ರಾಣಿ ಪದ್ಮಿನಿ ನೂರು ಪಲ್ಲಕ್ಕಿಗಳ ಮೂಲಕ ಖಿಲ್ಜಿಯ ಆಸ್ಥಾನಕ್ಕೆ ಬಂದೇ ಬಿಟ್ಟಳು, ಆಗಲೂ ಆತ ಆಕೆಯ ನಿಜವಾದ ಮುಖ ಇನ್ನೂ ನೋಡಿರಲಿಲ್ಲ, ಯಾವಾಗ ಆತ ಪಲ್ಲಕ್ಕಿಯ ಹತ್ತಿರ ಹೊರಟು ಪದ್ಮಿನಿಯನ್ನ ನೋಡಲು ಬರುತ್ತಾನೋ ಆಗ ಪಲ್ಲಕ್ಕಿಗಳಿಂದ ಹರಹರಮಹಾದೇವ ಘೋಷಣೆಗಳನ್ನ ಕೂಗುತ್ತ ನೂರು ಜನ ರಜಪೂತ ಸೈನಿಕರು ಒಮ್ಮೆಲೆ ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡ್ತಾರೆ. ಇದು ರಾಣಿ ಪದ್ಮಿನಿಯೇ ಖಿಲ್ಜಿಯ ಸೊಕ್ಕು ಮುರಿಯೋದಕ್ಕೆ ರಚಿಸಿದ್ದ ಪದ್ಮವ್ಯೂಹವಾಗಿತ್ತು, ನೂರು ಪಲ್ಲಕ್ಕಿಗಳಲ್ಲಿ ತನ್ನ ಸಖಿಯರಿರ್ತಾರೆ ಅಂತ ಹೇಳಿದ್ದ ಪದ್ಮಿನಿ ಅವುಗಳಲ್ಲಿ ತನ್ನ 100 ಬಲಾಢ್ಯ ರಜಪೂತ ಸೈನಿಕರನ್ನ ಕರೆತಂದಿರ್ತಾಳೆ. ಖಿಲ್ಜಿಗೆ ತನ್ನ ಆಸ್ಥಾನದಲ್ಲಿ ಏನ್ ನಡೀತಿದೆ ಅಂತ ಅರ್ಥವಾಗೋಕೂ ಮುಂಚೆಯೇ ರಾಣಿ ಪದ್ಮಿನಿ ಖಿಲ್ಜಿಯ ಹೆಡೆಮುರಿಕಟ್ಟಿ ಸೋಲಿಸಿ ತನ್ನ ಗಂಡ ರಾವಲ್ ರತನ್ ಸಿಂಗನನ್ನ ಬಿಡಿಸಿಕೊಂಡು ಚಿತ್ತೋಡಗಢಕ್ಕೆ ವಾಪಸ್ಸಾಗ್ತಾಳೆ.
ಅವಮಾನಿತನಾದ ಅಲ್ಲಾವುದ್ದೀನ್ ಖಿಲ್ಜಿಯಿಂದ ಚಿತ್ತೋಡಗಢದ ಮೇಲೆ ದಾಳಿ…

ಈ ಘಟನೆಯಿಂದ ಅದೂ ಒಂದು ಹೆಣ್ಣಿನ ಕೈಯಿಂದ ನಾನು ಸೋಲೋದಾ ಅಂತ ಪಿತ್ತ ನಿತ್ತಗೇರಿದ ಅಲ್ಲಾವುದ್ದೀನ್ ಖಿಲ್ಜಿ, ಈ ಬಾರಿ ಮತ್ತೆ ಚಿತ್ತೋಡಗಢದ ಮೇಲೆ ದಾಳಿ ಮಾಡ್ತಾನೆ, ಕೆಲ ದಿನಗಳ ಕಾಲ ರಜಪೂತರು ಖಿಲ್ಜಿಗೆ ಪ್ರತಿರೋಧ ತೋರುತ್ತಾರೆ ಆದರೆ ಖಿಲ್ಜಿಯ ಬೃಹತ್ ಸೈನ್ಯದೆದುರು ರಜಪೂತರು ಸೋಲುತ್ತಾರೆ. ಕೋಟೆಗಿದ್ದ ಒಂದೇ ಒಂದು ದ್ವಾರವನ್ನು ತನ್ನ ಸೈನಿಕರಿಂದ ಮುಚ್ಚಿಸಿ ರಜಪೂತ ಸೈನಿಕರಿಗೆ ಹೊರಗಿನಿಂದ ಯಾವ ಸಾಮಗ್ರಿಗಳು ಸಿಗದ ಹಾಗೆ ಮಾಡಿ ಚಿತ್ತೋಡವನ್ನ ಖಿಲ್ಜಿ ವಶಪಡಿಸಿಕೊಂಡು ರಾವಲ್ ರತನ್ ಸಿಂಹನ ತಲೆ ಕಡಿದು ಹಾಕ್ತಾನೆ.
ರಾಣಿ ಪದ್ಮಾವತಿ ತನ್ನ 16,000 ಸಖಿಯರೊಂದಿಗೆ ಬೆಂಕಿಗೆ ಹಾರಿದ್ದು..!

ಈಗ ಮುಂದೇನು? ಅಲ್ಲಾವುದ್ದೀನ್ ಎಂಬ ಕಾಮುಕ ಚಿತ್ತೋಡದಲ್ಲಿರೊ ಎಲ್ಲ ರಜಪೂತ ಮಹಿಳೆಯರನ್ನೂ ಸೆಕ್ಸ್ ಸ್ಲೇವ್ಸ್ಗಳಾಗಿ ಕರೆದುಕೊಂಡು ಹೋಗೋಕೆ ಕೋಟೆ ಒಳ ಬರಿಕೈಲಿ ಮುಂಚೆಯೇ ಈ ವಿಷಯ ಅರಿತ ರಾಣಿ ಪದ್ಮಿನಿ, ನಾವು ರಜಪೂತರು ಯಾವತ್ತೂ ನಮ್ಮ ಶೀಲವನ್ನ ಕಳೆದುಕೊಂಡವರಲ್ಲ, ಅಂಥದ್ರಲ್ಲಿ ಈ ಮುಸಲ್ಮಾನ ದೊರೆಗೆ ನಮ್ಮ ಶೀಲ ಅರ್ಪಿತವಾಗೋದೇ? ಛೀ ಹಾಗೇ ಮಾಡೋದಕ್ಕಿಂತ ವೀರಸ್ವರ್ಗ ಪ್ರಾಪ್ತಿ ಮಾಡಿಕೊಳ್ಳೋದೇ ಎಷ್ಟೋ ವಾಸಿ ಅಂತ ತಕ್ಷಣ ಆಕೆ ಚಿತ್ತೋಡದಲ್ಲಿದ್ದ ತನ್ನ 16,000 ರಜಪೂತನಿಯರೊಂದಿಗೆ ಬೆಂಕಿಗೆ ಹಾರಿ ಜೌಹಾರ್ ಮಾಡಿಕೊಂಡು ಬಿಡ್ತಾಳೆ.

ನಂತರ ಕೋಟೆಯ ಒಳಗೆ ಖಿಲ್ಜಿ ಬಂದು ನೋಡಿದಾಗ ಆತನಿಗೆ ಯಾವೊಬ್ಬ ಹೆಂಗಸೂ ಚಿತ್ತೋಡದಲ್ಲಿ ಸಿಗದೆ ಹೆಣಗಳನ್ನ ಹದ್ದು ಕುಕ್ಕುತ್ತ ಕೂತಿರೊ ದೃಶ್ಯಗಳೇ ಕಂಡು ಆತ ದೆಹಲಿಗೆ ವಾಪಸ್ ಆಗ್ತಾನೆ. ನೋಡಿ ತನ್ನ ಆತ್ಮ & ಶೀಲರಕ್ಷಣೆಗಾಗಿ ತನ್ನನ್ನ ತಾನು ಬೆಂಕಿಗಾಹುತಿ ಮಾಡಿಕಂಡ & ತಾನು ಸಾಯೋವರೆಗೂ ಖಿಲ್ಜಿಯ ವಿರುದ್ಧ ಹೊರಾಡಿದ್ದ ರಜಪೂತರಷ್ಟೇ ಯಾಕೆ ಇಡೀ ಭಾರತದ ಮಹಿಳೆಯರಿಗೆ ಆದರ್ಶಪ್ರಾಯವಾಗಿರೋ ವೀರವನಿತೆ ಪದ್ಮಿನಿ ರಾಣಿ ಬಗ್ಗೆ ಕೆಲವರು ಒಂದು ಚಿತ್ರದ ಮುಖಾಂತರ ಕೆಟ್ಟ ರೀತಿಯಲ್ಲಿ ತೋರಿಸಲು ಹೊರಟಿದ್ದಾರೆ.

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್ಗಳಿಂದ –…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಏರೋ ಇಂಡಿಯಾ 2019ರ ಏರ್ ಶೋ ನೋಡಲು ರಾಜಧಾನಿ ಬೆಂಗಳೂರಿನ ಯಲಹಂಕಕ್ಕೆ ಆಗಮಿಸಿದ್ದರು, ಎಲ್ಲರೂ ತಮ್ಮ ಕಾರುಗಳನ್ನು ಪಾರ್ಕ್ ಮಾಡಿ ವೈಮಾನಿಕ ಪ್ರದರ್ಶನವನ್ನು ನೋಡುವಲ್ಲಿ ಮುಳುಗಿ ಹೋಗಿದ್ದರು, ಆದರೆ ನೋಡು ನೋಡುತ್ತಿದ್ದಂತೆಯೇ ಕಣ್ಣ ಮುಂದೆಯೇ ಕಷ್ಟ ಪಟ್ಟು ತೆಗೆದುಕೊಂಡಿದ್ದ ಕಾರುಗಳು ಭಸ್ಮವಾದವು. ಏರ್ ಶೋ ನಡೆಯುತ್ತಿದ್ದ ಸಂದರ್ಭದಲ್ಲೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಗೇಟ್ ನಂಬರ್ 5 ರ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 150ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ 10…