News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಇತಿಹಾಸ

ರಾಣಿ ಪದ್ಮಿನಿಗೂ ಮತ್ತು ಅಲ್ಲಾವುದ್ದೀನ್ ಖಿಲ್ಜಿಗೂ ಇದ್ದ ನಿಜವಾದ ಸಂಬಂದ ಏನು ಗೊತ್ತಾ..?ಪದ್ಮಾವತಿಯು ಬೆಂಕಿಗೆ ಹಾರಿ ಸತ್ತಿದ್ದು ಏಕೆ?ರೋಚಕವಾಗಿದೆ ರಾಣಿ ಪದ್ಮಿನಿಯ ರಿಯಲ್ ಸ್ಟೋರಿ…

1849

ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ  ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.

ಅಲ್ಲಾವುದ್ದೀನ್ ಖಿಲ್ಜಿ ಬರೆದ ಆ ಪತ್ರದಲ್ಲಿ ಏನಿತ್ತು..?

ಆತನಿಗೆ ರಾಣಿ ಪದ್ಮಿನಿಯ ಸೌಂದರ್ಯದ ಬಗ್ಗೆ ಹೇಗೋ ತಿಳಿದು ಆಕೆಯನ್ನ ತನ್ನ ಕಾಮತೃಷೆಗಾಗಿ ಬಳಸಿಕೊಳ್ಳಬೇಕೆಂದು ಆಸೆಯಾದಾಗ ಆತ ಮಾಡಿದ ಕುತಂತ್ರವೆಂದರೆ ಆತ ಮೇವಾಡಕ್ಕೆ ಪತ್ರವೊಂದನ್ನ ಬರೀತಾನೆ. “ರಕ್ಷಾ ಬಂಧನ ಸದ್ಯದಲ್ಲೇ ಇರೋದ್ರಿಂದ ನಾನು ನಿನ್ನ(ರಾವಲ್ ರತನ ಸಿಂಗ್) ಹೆಂಡತಿ(ರಾಣಿ ಪದ್ಮಿನಿ)ಯನ್ನ ತಂಗಿಯಂತೆ ಸ್ವೀಕರಿಸಿದ್ದೇನೆ, ರಕ್ಷಾಬಂಧನಕ್ಕೆ ನಿನ್ನ ರಾಜ್ಯಕ್ಕೆ ಬಂದು ನಿನ್ನ ಹೆಂಡತಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತೇನೆ”

ಇದನ್ನ ಓದಿದ ರಾವಲ್ ಸಿಂಗ್ “ಸರಿ ಆಯಿತು ಆದರೆ ಒಂದು ಷರತ್ತು, ನನ್ನ ಹೆಂಡತಿ ಮುಖತಃ ನಿನ್ನ ಕೈಗೆ ರಾಖಿ ಕಟ್ಟಲ್ಲ ಆದರೆ ಆಕೆ ಅದಕ್ಕೆ ಪೂಜೆ ಮಾಡಿ ಇಟ್ಟಿರುತ್ತಾಳೆ ಅದನ್ನ ನಿನ್ನ ಕೈಗೆ ನಮ್ಮ ರಾಣಿಯ ಸಖಿಯರು ಕಟ್ತಾರೆ” ಅಂತ ವಾಪಸ್ ಪತ್ರ ಬರೀತಾನೆ.

ಅಲ್ಲಾವುದ್ದೀನ್ ಖಿಲ್ಜಿಯ ಷಡ್ಯಂತ್ರ:-

ಇದಕ್ಕೊಪ್ಪಿದ ಖಿಲ್ಜಿ ದೆಹಲಿಯಿಂದ ಹೊರಟು ಗುಪ್ತವಾಗಿ ತನ್ನ ದೊಡ್ಡ ಸೈನ್ಯವನ್ನ ಚಿತ್ತೋಡಗಢದಲ್ಲಿ ಬಿಡಾರ ಹೂಡಿಸಿ, ರಾವಲ್ ಸಿಂಗನ ಆಸ್ಥಾನಕ್ಕೆ ಒಂದಿಬ್ಬರು ಸಂಗಡಿಗರ ಜೊತೆ ಬರ್ತಾನೆ, ಬಂದ ಅತಿಥಿಗೆ ಆದರ ಆತಿಥ್ಯಗಳೂ ಸಿಕ್ಕವು, ಆತನ ಕೈಗೆ ರಾಖಿ ಕಟ್ಟಲು ಬಂದ ರಾಣಿಯ ಸಖಿಯನ್ನ ಕಂಡ ಅಲ್ಲಾವುದ್ದೀನ್ ಹೇಳ್ತಾನೆ “ನಾನು ಒಂದೇ ಒಂದು ಬಾರಿ ನನ್ನ ತಂಗಿ ಸಮಾನಳಾದ ಪದ್ಮಿನಿಯನ್ನ ನೋಡಬೇಕಲ್ಲ?”

ಇದಕ್ಕೆ ರಾಜ ಹೇಳ್ತಾನೆ “ಸರಿ ಆಯಿತು ಆದರೆ ಒಂದು ಷರತ್ತು, ರಾಣಿ ಮುಖತಃ ನಿಮಗೆ ತನ್ನ ಮುಖ ತೋರಿಸಲ್ಲ, ಆಕೆ ಆಕೆಯ ಅರಮನೆಯ ಹೊರಾಂಗಣದಲ್ಲಿ ನಿಂತಿರುತ್ತಾಳೆ, ಆಕೆಯ ಪ್ರತಿಬಿಂಬ ಒಂದು ರೂಮಿನ ಕನ್ನಡಿಯಲ್ಲಿ ಕಾಣುತ್ತೆ, ಆ ಪ್ರತಿಬಿಂಬದಲ್ಲಿ ನೀವು ಆಕೆಯ ಮುಖವನ್ನು ನೋಡಬಹುದು”ಇದಕ್ಕೊಪ್ಪಿದ ಖಿಲ್ಜಿ “ಆಯ್ತು ಸರಿ” ಅಂತಾನೆ.

ರಾಜ ರಾವಲ್ ರತನ ಸಿಂಗ್ ನ ಬುದ್ದಿವಂತಿಕೆ…

ಸರಿ ರಾಣಿ ಪದ್ಮಿನಿ ತನ್ನ ಮಹಲಿನ ಸರೋವರದ ಹತ್ತಿರ ಬಂದು ನಿಲ್ತಾಳೆ, ಅವಳ ಪ್ರತಿಬಿಂಬ ಆ ರೂಮಿನ ಕನ್ನಡಿಯ ಮೇಲೆ ಕಂಡ ಖಿಲ್ಜಿಗೆ ಆಕೆಯ ಸೌಂದರ್ಯ ದಂಗುಬಡಿಸಿತ್ತು, ಹೇಗಾದರೂ ಮಾಡಿ ಈಕೆಯನ್ನ ತನ್ನ ಪಟ್ಟದರಸಿ ಮಾಡಿಕೊಳ್ಳೇಬೇಕು ಅಂತ ಖಿಲ್ಜಿ ತೀರ್ಮಾನಿಸಿ ಒಮ್ಮಿಂದೊಮ್ಮೆಲೇ ರಾಜನ ಮೇಲೆ ದಾಳಿ ನಡೆಸಿ ರಾವಲ್ ಸಿಂಗನನನ್ನ ಯುದ್ಧ ಕೈದಿಯಾಗಿ ದೆಹಲಿಗೆ ಕರೆದುಕೊಂಡು ಹೋಗ್ತಾನೆ ಆದರೆ ರಾಣಿ ಪದ್ಮಿನಿ ಆತನ ಕೈಗೆ ಸಿಗಲ್ಲ.

ರಜಪೂತ ಇತಿಹಾಸಕಾರರು ಹೇಳುವುದೇನು?

(ಆದರೆ ರಜಪೂತ ಇತಿಹಾಸಕಾರರ ಪ್ರಕಾರ ಅಲ್ಲಿ ಬಂದು ಖಿಲ್ಜಿಗೆ ಮುಖ ತೋರಿಸಿದ್ದು ರಾಣಿ ಪದ್ಮಿನಿಯದ್ದಲ್ಲ, ಬದಲಾಗಿ ರಾಣಿಯ ಸಖಿ ಅಲ್ಲಿ ಬಂದು ನಿಂತದ್ದು, ಆದರೆ ಖಿಲ್ಜಿ ಒಂದು ಬಾರಿಯೂ ರಾಣಿ ಪದ್ಮಿನಿಯ ಮುಖ ನೋಡಿರದ ಕಾರಣ ರಾಣಿಯ ಸಖಿಯನ್ನೇ ಪದ್ಮಿನಿ ಅಂದುಕೊಳ್ತಾನಂತೆ)ನಿಜವಾಗಿಯೂ ಆತನಿಗೆ ಪದ್ಮಿನಿಯ ಸೌಂದರ್ಯ ಕಂಡು ಆಕೆಯನ್ನ ಮದುವೆ ಆಗೋ ಚಪಲವಿತ್ತೇ ಹೊರತು ಆಕೆಯನ್ನ ಆತ ತಂಗಿ ಅಂತ ಬಾಯಿಮಾತಿಗಷ್ಟೇ ತನ್ನ ಮಾಯಾಜಾಲ ಬೀಸಲು ಸುಳ್ಳು ಹೇಳಿದ್ದು.

ಅಲ್ಲಾವುದ್ದಿನ್ ಖಿಲ್ಜಿ ರಾಣಿ ಪದ್ಮಿನಿಗೆ ಬರೆದ ಪತ್ರದಲ್ಲಿದ್ದ ಆದೇಶ ಏನು..?

ರಾಜಾ ರಾವಲ್ ರತನ್ ಸಿಂಗ್ ಬಂಧಿಯಾಗಿ ದೆಹಲಿಯಲ್ಲಿದ್ದಾಗ ಅಲ್ಲಾವುದ್ದಿನ್ ಖಿಲ್ಜಿ ಚಿತ್ತೋಡಗಢಕ್ಕೆ ಪತ್ರ ಬರೆದು ಪದ್ಮಿನಿಗೆ ಹೀಗೆ ಹೇಳ್ತಾನೆ “ನಿನ್ನ ಗಂಡನನ್ನ ನೀನು ಜೀವಸಹಿತವಾಗಿ ನೋಡಬೇಕೆಂದರೆ ನೀನು ನನ್ನವಳಾಗಬೇಕು, ನೀ ನನ್ನ ಮದುವೆಯಾಗಿ ನನ್ನ ಜನಾನಾಗೆ ಬರಬೇಕು ಆಗ ಮಾತ್ರ ನಾ ನಿನ್ನ ಗಂಡನನ್ನ ಬಿಡುಗಡೆ ಮಾಡ್ತೀನಿ”

ಇದನ್ನೋದಿದ ರಾಣಿ ಪದ್ಮಿನಿಯ ರಕ್ತ ಕೊತ ಕೊತ ಕುದಿಯುತ್ತ ಆಕೆ ಖಿಲ್ಜಿಗೆ ಉತ್ತರ ಕೊಡ್ತಾ ಹೀಗೆ ಹೇಳ್ತಾಳೆ. “ನನಗೆ ನನ್ನ ಗಂಡನ ಕ್ಷೇಮ ಮುಖ್ಯ, ನಾನು ನಿನ್ನ ಷರತ್ತಿಗೆ ಒಪ್ಪುತ್ತೇನೆ, ಆದರೆ ನೀವು ಚಿತ್ತೋಡಗಢಕ್ಕೆ ಬರೋದು ಬೇಡ, ನಾನೇ ನಮ್ಮ ರಜಪೂತ ಪರಂಪರೆಯ ಪ್ರಕಾರ 100 ಪಲ್ಲಕ್ಕಿಗಳ ಜೊತೆಗೆ ನನ್ನ ಸಖಿಯರೊಂದಿಗೆ ನಿಮ್ಮ ಆಸ್ಥಾನಕ್ಕೆ ಬಂದು ನಿಮಗೆ ಶರಣಾಗ್ತೀನಿ”. ಇದನ್ನೋದಿದ ಖಿಲ್ಜಿಗೆ ಮತ್ತೂ ಖುಷಿಯಾಗಿ ಒಬ್ಬ ಸುರಸುಂದರಾಂಗಿ ಪದ್ಮಿನಿ ಸಿಗ್ತಾಳೆ ಅನ್ಕೊಂಡಿದ್ದೆ ಆದರೆ ಆಕೆ ಜೊತೆಗೆ ಇನ್ನೂ ನೂರು ಜನ ಸುಂದರ ಸಖಿಯರಿರ್ತಾರೆ ಅಂತ ಮನದಲ್ಲೇ ತನ್ನ ಕಾಮಾಗ್ನಿಯ ಬಯಕೆಯನ್ನು ಇಮ್ಮಡಿಗೊಳಿಸಿಕೊಳ್ತಾನೆ.

ರಾಣಿ ಪದ್ಮಿನಿಯು ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡಿಸಿದ್ದೇ ಒಂದು ರೋಚಕ್…

ಆ ದಿನ ಬಂದೇ ಬಿಟ್ಟಿತು, ರಾಣಿ ಪದ್ಮಿನಿ ನೂರು ಪಲ್ಲಕ್ಕಿಗಳ ಮೂಲಕ ಖಿಲ್ಜಿಯ ಆಸ್ಥಾನಕ್ಕೆ ಬಂದೇ ಬಿಟ್ಟಳು, ಆಗಲೂ ಆತ ಆಕೆಯ ನಿಜವಾದ ಮುಖ ಇನ್ನೂ ನೋಡಿರಲಿಲ್ಲ, ಯಾವಾಗ ಆತ ಪಲ್ಲಕ್ಕಿಯ ಹತ್ತಿರ ಹೊರಟು ಪದ್ಮಿನಿಯನ್ನ ನೋಡಲು ಬರುತ್ತಾನೋ ಆಗ ಪಲ್ಲಕ್ಕಿಗಳಿಂದ ಹರಹರಮಹಾದೇವ ಘೋಷಣೆಗಳನ್ನ ಕೂಗುತ್ತ ನೂರು ಜನ ರಜಪೂತ ಸೈನಿಕರು ಒಮ್ಮೆಲೆ ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡ್ತಾರೆ. ಇದು ರಾಣಿ ಪದ್ಮಿನಿಯೇ ಖಿಲ್ಜಿಯ ಸೊಕ್ಕು ಮುರಿಯೋದಕ್ಕೆ ರಚಿಸಿದ್ದ ಪದ್ಮವ್ಯೂಹವಾಗಿತ್ತು, ನೂರು ಪಲ್ಲಕ್ಕಿಗಳಲ್ಲಿ ತನ್ನ ಸಖಿಯರಿರ್ತಾರೆ ಅಂತ ಹೇಳಿದ್ದ ಪದ್ಮಿನಿ ಅವುಗಳಲ್ಲಿ ತನ್ನ 100 ಬಲಾಢ್ಯ ರಜಪೂತ ಸೈನಿಕರನ್ನ ಕರೆತಂದಿರ್ತಾಳೆ. ಖಿಲ್ಜಿಗೆ ತನ್ನ ಆಸ್ಥಾನದಲ್ಲಿ ಏನ್ ನಡೀತಿದೆ ಅಂತ ಅರ್ಥವಾಗೋಕೂ ಮುಂಚೆಯೇ ರಾಣಿ ಪದ್ಮಿನಿ ಖಿಲ್ಜಿಯ ಹೆಡೆಮುರಿಕಟ್ಟಿ ಸೋಲಿಸಿ ತನ್ನ ಗಂಡ ರಾವಲ್ ರತನ್ ಸಿಂಗನನ್ನ ಬಿಡಿಸಿಕೊಂಡು ಚಿತ್ತೋಡಗಢಕ್ಕೆ ವಾಪಸ್ಸಾಗ್ತಾಳೆ.

ಅವಮಾನಿತನಾದ ಅಲ್ಲಾವುದ್ದೀನ್ ಖಿಲ್ಜಿಯಿಂದ ಚಿತ್ತೋಡಗಢದ ಮೇಲೆ ದಾಳಿ…

ಈ ಘಟನೆಯಿಂದ ಅದೂ ಒಂದು ಹೆಣ್ಣಿನ ಕೈಯಿಂದ ನಾನು ಸೋಲೋದಾ ಅಂತ ಪಿತ್ತ ನಿತ್ತಗೇರಿದ ಅಲ್ಲಾವುದ್ದೀನ್ ಖಿಲ್ಜಿ, ಈ ಬಾರಿ ಮತ್ತೆ ಚಿತ್ತೋಡಗಢದ ಮೇಲೆ ದಾಳಿ ಮಾಡ್ತಾನೆ, ಕೆಲ ದಿನಗಳ ಕಾಲ ರಜಪೂತರು ಖಿಲ್ಜಿಗೆ ಪ್ರತಿರೋಧ ತೋರುತ್ತಾರೆ ಆದರೆ ಖಿಲ್ಜಿಯ ಬೃಹತ್ ಸೈನ್ಯದೆದುರು ರಜಪೂತರು ಸೋಲುತ್ತಾರೆ. ಕೋಟೆಗಿದ್ದ ಒಂದೇ ಒಂದು ದ್ವಾರವನ್ನು ತನ್ನ ಸೈನಿಕರಿಂದ ಮುಚ್ಚಿಸಿ ರಜಪೂತ ಸೈನಿಕರಿಗೆ ಹೊರಗಿನಿಂದ ಯಾವ ಸಾಮಗ್ರಿಗಳು ಸಿಗದ ಹಾಗೆ ಮಾಡಿ ಚಿತ್ತೋಡವನ್ನ ಖಿಲ್ಜಿ ವಶಪಡಿಸಿಕೊಂಡು ರಾವಲ್ ರತನ್ ಸಿಂಹನ ತಲೆ ಕಡಿದು ಹಾಕ್ತಾನೆ.

ರಾಣಿ ಪದ್ಮಾವತಿ ತನ್ನ 16,000 ಸಖಿಯರೊಂದಿಗೆ ಬೆಂಕಿಗೆ ಹಾರಿದ್ದು..!

ಈಗ ಮುಂದೇನು? ಅಲ್ಲಾವುದ್ದೀನ್ ಎಂಬ ಕಾಮುಕ ಚಿತ್ತೋಡದಲ್ಲಿರೊ ಎಲ್ಲ ರಜಪೂತ ಮಹಿಳೆಯರನ್ನೂ ಸೆಕ್ಸ್ ಸ್ಲೇವ್ಸ್ಗಳಾಗಿ ಕರೆದುಕೊಂಡು ಹೋಗೋಕೆ ಕೋಟೆ ಒಳ ಬರಿಕೈಲಿ ಮುಂಚೆಯೇ ಈ ವಿಷಯ ಅರಿತ ರಾಣಿ ಪದ್ಮಿನಿ, ನಾವು ರಜಪೂತರು ಯಾವತ್ತೂ ನಮ್ಮ ಶೀಲವನ್ನ ಕಳೆದುಕೊಂಡವರಲ್ಲ, ಅಂಥದ್ರಲ್ಲಿ ಈ ಮುಸಲ್ಮಾನ ದೊರೆಗೆ ನಮ್ಮ ಶೀಲ ಅರ್ಪಿತವಾಗೋದೇ? ಛೀ ಹಾಗೇ ಮಾಡೋದಕ್ಕಿಂತ ವೀರಸ್ವರ್ಗ ಪ್ರಾಪ್ತಿ ಮಾಡಿಕೊಳ್ಳೋದೇ ಎಷ್ಟೋ ವಾಸಿ ಅಂತ ತಕ್ಷಣ ಆಕೆ ಚಿತ್ತೋಡದಲ್ಲಿದ್ದ ತನ್ನ 16,000 ರಜಪೂತನಿಯರೊಂದಿಗೆ ಬೆಂಕಿಗೆ ಹಾರಿ ಜೌಹಾರ್ ಮಾಡಿಕೊಂಡು ಬಿಡ್ತಾಳೆ.

ನಂತರ ಕೋಟೆಯ ಒಳಗೆ ಖಿಲ್ಜಿ ಬಂದು ನೋಡಿದಾಗ ಆತನಿಗೆ ಯಾವೊಬ್ಬ ಹೆಂಗಸೂ ಚಿತ್ತೋಡದಲ್ಲಿ ಸಿಗದೆ ಹೆಣಗಳನ್ನ ಹದ್ದು ಕುಕ್ಕುತ್ತ ಕೂತಿರೊ ದೃಶ್ಯಗಳೇ ಕಂಡು ಆತ ದೆಹಲಿಗೆ ವಾಪಸ್ ಆಗ್ತಾನೆ. ನೋಡಿ ತನ್ನ ಆತ್ಮ & ಶೀಲರಕ್ಷಣೆಗಾಗಿ ತನ್ನನ್ನ ತಾನು ಬೆಂಕಿಗಾಹುತಿ ಮಾಡಿಕಂಡ & ತಾನು ಸಾಯೋವರೆಗೂ ಖಿಲ್ಜಿಯ ವಿರುದ್ಧ ಹೊರಾಡಿದ್ದ ರಜಪೂತರಷ್ಟೇ ಯಾಕೆ ಇಡೀ ಭಾರತದ ಮಹಿಳೆಯರಿಗೆ ಆದರ್ಶಪ್ರಾಯವಾಗಿರೋ ವೀರವನಿತೆ ಪದ್ಮಿನಿ ರಾಣಿ ಬಗ್ಗೆ ಕೆಲವರು ಒಂದು ಚಿತ್ರದ ಮುಖಾಂತರ ಕೆಟ್ಟ ರೀತಿಯಲ್ಲಿ ತೋರಿಸಲು ಹೊರಟಿದ್ದಾರೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಆನೆಯ ಬಗ್ಗೆ ಆಸಕ್ತಿದಾಯಕ ಸಂಗತಿಗಳು

    ಪ್ರಾಣಿಶಾಸ್ತ್ರದ ಪ್ರಕಾರ ಆನೆ ಸಸ್ತನಿಗಳ ವರ್ಗದಲ್ಲಿ ಪ್ರೊಬೊಸಿಡಿಯ  ಉಪವರ್ಗದ ಒಂದು ಕುಟುಂಬ. ಹಿಂದೆ ಇವುಗಳನ್ನು ಪಾಚಿಡರ್ಮಾಟಾ ಎಂಬ ದಪ್ಪಚರ್ಮದ ಪ್ರಾಣಿಗಳ ಉಪವರ್ಗದಲ್ಲಿರಿಸಲಾಗಿತ್ತು. ಇಂದು 2 ತಳಿಗಳ ಆನೆಗಳು ಭೂಮಿಯ ಮೇಲೆ ಇವೆ. ಅವೆಂದರೆ: , ಆಫ್ರಿಕದ ಅರಣ್ಯದ ಆನೆ ಮತ್ತು ಏಷ್ಯಾದ  ಆನೆ. ಇವುಗಳಲ್ಲಿ ಮೊದಲೆರಡನ್ನು ಒಟ್ಟಾಗಿ ಆಫ್ರಿಕನ್ ಆನೆ ಎಂದು ಸಹ ಕರೆಯುವುದು ವಾಡಿಕೆ. ಏಷ್ಯಾದ ಆನೆಯನ್ನು ಭಾರತದ ಆನೆ ಎಂದು ಸಹ ಕರೆಯಲಾಗುತ್ತದೆ. ಸುಮಾರು ೧೦,೦೦೦ ವರ್ಷಗಳ ಹಿಂದೆ ಕೊನೆಗೊಂಡ ಹಿಮಯುಗದೊಂದಿಗೆ ಉಳಿದ ತಳಿಗಳ ಆನೆಗಳು ಭೂಮಿಯಿಂದ ಶಾಶ್ವತವಾಗಿ ಮರೆಯಾದುವು. ಇವುಗಳಲ್ಲಿ ಮ್ಯಾಮತ್ (ದೈತ್ಯ ಆನೆ) ಬಲು…

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…