ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.

ಅಲ್ಲಾವುದ್ದೀನ್ ಖಿಲ್ಜಿ ಬರೆದ ಆ ಪತ್ರದಲ್ಲಿ ಏನಿತ್ತು..?
ಆತನಿಗೆ ರಾಣಿ ಪದ್ಮಿನಿಯ ಸೌಂದರ್ಯದ ಬಗ್ಗೆ ಹೇಗೋ ತಿಳಿದು ಆಕೆಯನ್ನ ತನ್ನ ಕಾಮತೃಷೆಗಾಗಿ ಬಳಸಿಕೊಳ್ಳಬೇಕೆಂದು ಆಸೆಯಾದಾಗ ಆತ ಮಾಡಿದ ಕುತಂತ್ರವೆಂದರೆ ಆತ ಮೇವಾಡಕ್ಕೆ ಪತ್ರವೊಂದನ್ನ ಬರೀತಾನೆ. “ರಕ್ಷಾ ಬಂಧನ ಸದ್ಯದಲ್ಲೇ ಇರೋದ್ರಿಂದ ನಾನು ನಿನ್ನ(ರಾವಲ್ ರತನ ಸಿಂಗ್) ಹೆಂಡತಿ(ರಾಣಿ ಪದ್ಮಿನಿ)ಯನ್ನ ತಂಗಿಯಂತೆ ಸ್ವೀಕರಿಸಿದ್ದೇನೆ, ರಕ್ಷಾಬಂಧನಕ್ಕೆ ನಿನ್ನ ರಾಜ್ಯಕ್ಕೆ ಬಂದು ನಿನ್ನ ಹೆಂಡತಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತೇನೆ”

ಇದನ್ನ ಓದಿದ ರಾವಲ್ ಸಿಂಗ್ “ಸರಿ ಆಯಿತು ಆದರೆ ಒಂದು ಷರತ್ತು, ನನ್ನ ಹೆಂಡತಿ ಮುಖತಃ ನಿನ್ನ ಕೈಗೆ ರಾಖಿ ಕಟ್ಟಲ್ಲ ಆದರೆ ಆಕೆ ಅದಕ್ಕೆ ಪೂಜೆ ಮಾಡಿ ಇಟ್ಟಿರುತ್ತಾಳೆ ಅದನ್ನ ನಿನ್ನ ಕೈಗೆ ನಮ್ಮ ರಾಣಿಯ ಸಖಿಯರು ಕಟ್ತಾರೆ” ಅಂತ ವಾಪಸ್ ಪತ್ರ ಬರೀತಾನೆ.
ಅಲ್ಲಾವುದ್ದೀನ್ ಖಿಲ್ಜಿಯ ಷಡ್ಯಂತ್ರ:-

ಇದಕ್ಕೊಪ್ಪಿದ ಖಿಲ್ಜಿ ದೆಹಲಿಯಿಂದ ಹೊರಟು ಗುಪ್ತವಾಗಿ ತನ್ನ ದೊಡ್ಡ ಸೈನ್ಯವನ್ನ ಚಿತ್ತೋಡಗಢದಲ್ಲಿ ಬಿಡಾರ ಹೂಡಿಸಿ, ರಾವಲ್ ಸಿಂಗನ ಆಸ್ಥಾನಕ್ಕೆ ಒಂದಿಬ್ಬರು ಸಂಗಡಿಗರ ಜೊತೆ ಬರ್ತಾನೆ, ಬಂದ ಅತಿಥಿಗೆ ಆದರ ಆತಿಥ್ಯಗಳೂ ಸಿಕ್ಕವು, ಆತನ ಕೈಗೆ ರಾಖಿ ಕಟ್ಟಲು ಬಂದ ರಾಣಿಯ ಸಖಿಯನ್ನ ಕಂಡ ಅಲ್ಲಾವುದ್ದೀನ್ ಹೇಳ್ತಾನೆ “ನಾನು ಒಂದೇ ಒಂದು ಬಾರಿ ನನ್ನ ತಂಗಿ ಸಮಾನಳಾದ ಪದ್ಮಿನಿಯನ್ನ ನೋಡಬೇಕಲ್ಲ?”

ಇದಕ್ಕೆ ರಾಜ ಹೇಳ್ತಾನೆ “ಸರಿ ಆಯಿತು ಆದರೆ ಒಂದು ಷರತ್ತು, ರಾಣಿ ಮುಖತಃ ನಿಮಗೆ ತನ್ನ ಮುಖ ತೋರಿಸಲ್ಲ, ಆಕೆ ಆಕೆಯ ಅರಮನೆಯ ಹೊರಾಂಗಣದಲ್ಲಿ ನಿಂತಿರುತ್ತಾಳೆ, ಆಕೆಯ ಪ್ರತಿಬಿಂಬ ಒಂದು ರೂಮಿನ ಕನ್ನಡಿಯಲ್ಲಿ ಕಾಣುತ್ತೆ, ಆ ಪ್ರತಿಬಿಂಬದಲ್ಲಿ ನೀವು ಆಕೆಯ ಮುಖವನ್ನು ನೋಡಬಹುದು”ಇದಕ್ಕೊಪ್ಪಿದ ಖಿಲ್ಜಿ “ಆಯ್ತು ಸರಿ” ಅಂತಾನೆ.
ರಾಜ ರಾವಲ್ ರತನ ಸಿಂಗ್ ನ ಬುದ್ದಿವಂತಿಕೆ…
ಸರಿ ರಾಣಿ ಪದ್ಮಿನಿ ತನ್ನ ಮಹಲಿನ ಸರೋವರದ ಹತ್ತಿರ ಬಂದು ನಿಲ್ತಾಳೆ, ಅವಳ ಪ್ರತಿಬಿಂಬ ಆ ರೂಮಿನ ಕನ್ನಡಿಯ ಮೇಲೆ ಕಂಡ ಖಿಲ್ಜಿಗೆ ಆಕೆಯ ಸೌಂದರ್ಯ ದಂಗುಬಡಿಸಿತ್ತು, ಹೇಗಾದರೂ ಮಾಡಿ ಈಕೆಯನ್ನ ತನ್ನ ಪಟ್ಟದರಸಿ ಮಾಡಿಕೊಳ್ಳೇಬೇಕು ಅಂತ ಖಿಲ್ಜಿ ತೀರ್ಮಾನಿಸಿ ಒಮ್ಮಿಂದೊಮ್ಮೆಲೇ ರಾಜನ ಮೇಲೆ ದಾಳಿ ನಡೆಸಿ ರಾವಲ್ ಸಿಂಗನನನ್ನ ಯುದ್ಧ ಕೈದಿಯಾಗಿ ದೆಹಲಿಗೆ ಕರೆದುಕೊಂಡು ಹೋಗ್ತಾನೆ ಆದರೆ ರಾಣಿ ಪದ್ಮಿನಿ ಆತನ ಕೈಗೆ ಸಿಗಲ್ಲ.

ರಜಪೂತ ಇತಿಹಾಸಕಾರರು ಹೇಳುವುದೇನು?
(ಆದರೆ ರಜಪೂತ ಇತಿಹಾಸಕಾರರ ಪ್ರಕಾರ ಅಲ್ಲಿ ಬಂದು ಖಿಲ್ಜಿಗೆ ಮುಖ ತೋರಿಸಿದ್ದು ರಾಣಿ ಪದ್ಮಿನಿಯದ್ದಲ್ಲ, ಬದಲಾಗಿ ರಾಣಿಯ ಸಖಿ ಅಲ್ಲಿ ಬಂದು ನಿಂತದ್ದು, ಆದರೆ ಖಿಲ್ಜಿ ಒಂದು ಬಾರಿಯೂ ರಾಣಿ ಪದ್ಮಿನಿಯ ಮುಖ ನೋಡಿರದ ಕಾರಣ ರಾಣಿಯ ಸಖಿಯನ್ನೇ ಪದ್ಮಿನಿ ಅಂದುಕೊಳ್ತಾನಂತೆ)ನಿಜವಾಗಿಯೂ ಆತನಿಗೆ ಪದ್ಮಿನಿಯ ಸೌಂದರ್ಯ ಕಂಡು ಆಕೆಯನ್ನ ಮದುವೆ ಆಗೋ ಚಪಲವಿತ್ತೇ ಹೊರತು ಆಕೆಯನ್ನ ಆತ ತಂಗಿ ಅಂತ ಬಾಯಿಮಾತಿಗಷ್ಟೇ ತನ್ನ ಮಾಯಾಜಾಲ ಬೀಸಲು ಸುಳ್ಳು ಹೇಳಿದ್ದು.
ಅಲ್ಲಾವುದ್ದಿನ್ ಖಿಲ್ಜಿ ರಾಣಿ ಪದ್ಮಿನಿಗೆ ಬರೆದ ಪತ್ರದಲ್ಲಿದ್ದ ಆದೇಶ ಏನು..?
ರಾಜಾ ರಾವಲ್ ರತನ್ ಸಿಂಗ್ ಬಂಧಿಯಾಗಿ ದೆಹಲಿಯಲ್ಲಿದ್ದಾಗ ಅಲ್ಲಾವುದ್ದಿನ್ ಖಿಲ್ಜಿ ಚಿತ್ತೋಡಗಢಕ್ಕೆ ಪತ್ರ ಬರೆದು ಪದ್ಮಿನಿಗೆ ಹೀಗೆ ಹೇಳ್ತಾನೆ “ನಿನ್ನ ಗಂಡನನ್ನ ನೀನು ಜೀವಸಹಿತವಾಗಿ ನೋಡಬೇಕೆಂದರೆ ನೀನು ನನ್ನವಳಾಗಬೇಕು, ನೀ ನನ್ನ ಮದುವೆಯಾಗಿ ನನ್ನ ಜನಾನಾಗೆ ಬರಬೇಕು ಆಗ ಮಾತ್ರ ನಾ ನಿನ್ನ ಗಂಡನನ್ನ ಬಿಡುಗಡೆ ಮಾಡ್ತೀನಿ”

ಇದನ್ನೋದಿದ ರಾಣಿ ಪದ್ಮಿನಿಯ ರಕ್ತ ಕೊತ ಕೊತ ಕುದಿಯುತ್ತ ಆಕೆ ಖಿಲ್ಜಿಗೆ ಉತ್ತರ ಕೊಡ್ತಾ ಹೀಗೆ ಹೇಳ್ತಾಳೆ. “ನನಗೆ ನನ್ನ ಗಂಡನ ಕ್ಷೇಮ ಮುಖ್ಯ, ನಾನು ನಿನ್ನ ಷರತ್ತಿಗೆ ಒಪ್ಪುತ್ತೇನೆ, ಆದರೆ ನೀವು ಚಿತ್ತೋಡಗಢಕ್ಕೆ ಬರೋದು ಬೇಡ, ನಾನೇ ನಮ್ಮ ರಜಪೂತ ಪರಂಪರೆಯ ಪ್ರಕಾರ 100 ಪಲ್ಲಕ್ಕಿಗಳ ಜೊತೆಗೆ ನನ್ನ ಸಖಿಯರೊಂದಿಗೆ ನಿಮ್ಮ ಆಸ್ಥಾನಕ್ಕೆ ಬಂದು ನಿಮಗೆ ಶರಣಾಗ್ತೀನಿ”. ಇದನ್ನೋದಿದ ಖಿಲ್ಜಿಗೆ ಮತ್ತೂ ಖುಷಿಯಾಗಿ ಒಬ್ಬ ಸುರಸುಂದರಾಂಗಿ ಪದ್ಮಿನಿ ಸಿಗ್ತಾಳೆ ಅನ್ಕೊಂಡಿದ್ದೆ ಆದರೆ ಆಕೆ ಜೊತೆಗೆ ಇನ್ನೂ ನೂರು ಜನ ಸುಂದರ ಸಖಿಯರಿರ್ತಾರೆ ಅಂತ ಮನದಲ್ಲೇ ತನ್ನ ಕಾಮಾಗ್ನಿಯ ಬಯಕೆಯನ್ನು ಇಮ್ಮಡಿಗೊಳಿಸಿಕೊಳ್ತಾನೆ.

ರಾಣಿ ಪದ್ಮಿನಿಯು ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡಿಸಿದ್ದೇ ಒಂದು ರೋಚಕ್…
ಆ ದಿನ ಬಂದೇ ಬಿಟ್ಟಿತು, ರಾಣಿ ಪದ್ಮಿನಿ ನೂರು ಪಲ್ಲಕ್ಕಿಗಳ ಮೂಲಕ ಖಿಲ್ಜಿಯ ಆಸ್ಥಾನಕ್ಕೆ ಬಂದೇ ಬಿಟ್ಟಳು, ಆಗಲೂ ಆತ ಆಕೆಯ ನಿಜವಾದ ಮುಖ ಇನ್ನೂ ನೋಡಿರಲಿಲ್ಲ, ಯಾವಾಗ ಆತ ಪಲ್ಲಕ್ಕಿಯ ಹತ್ತಿರ ಹೊರಟು ಪದ್ಮಿನಿಯನ್ನ ನೋಡಲು ಬರುತ್ತಾನೋ ಆಗ ಪಲ್ಲಕ್ಕಿಗಳಿಂದ ಹರಹರಮಹಾದೇವ ಘೋಷಣೆಗಳನ್ನ ಕೂಗುತ್ತ ನೂರು ಜನ ರಜಪೂತ ಸೈನಿಕರು ಒಮ್ಮೆಲೆ ಅಲ್ಲಾವುದ್ದೀನ್ ಖಿಲ್ಜಿಯ ಮೇಲೆ ದಾಳಿ ಮಾಡ್ತಾರೆ. ಇದು ರಾಣಿ ಪದ್ಮಿನಿಯೇ ಖಿಲ್ಜಿಯ ಸೊಕ್ಕು ಮುರಿಯೋದಕ್ಕೆ ರಚಿಸಿದ್ದ ಪದ್ಮವ್ಯೂಹವಾಗಿತ್ತು, ನೂರು ಪಲ್ಲಕ್ಕಿಗಳಲ್ಲಿ ತನ್ನ ಸಖಿಯರಿರ್ತಾರೆ ಅಂತ ಹೇಳಿದ್ದ ಪದ್ಮಿನಿ ಅವುಗಳಲ್ಲಿ ತನ್ನ 100 ಬಲಾಢ್ಯ ರಜಪೂತ ಸೈನಿಕರನ್ನ ಕರೆತಂದಿರ್ತಾಳೆ. ಖಿಲ್ಜಿಗೆ ತನ್ನ ಆಸ್ಥಾನದಲ್ಲಿ ಏನ್ ನಡೀತಿದೆ ಅಂತ ಅರ್ಥವಾಗೋಕೂ ಮುಂಚೆಯೇ ರಾಣಿ ಪದ್ಮಿನಿ ಖಿಲ್ಜಿಯ ಹೆಡೆಮುರಿಕಟ್ಟಿ ಸೋಲಿಸಿ ತನ್ನ ಗಂಡ ರಾವಲ್ ರತನ್ ಸಿಂಗನನ್ನ ಬಿಡಿಸಿಕೊಂಡು ಚಿತ್ತೋಡಗಢಕ್ಕೆ ವಾಪಸ್ಸಾಗ್ತಾಳೆ.
ಅವಮಾನಿತನಾದ ಅಲ್ಲಾವುದ್ದೀನ್ ಖಿಲ್ಜಿಯಿಂದ ಚಿತ್ತೋಡಗಢದ ಮೇಲೆ ದಾಳಿ…

ಈ ಘಟನೆಯಿಂದ ಅದೂ ಒಂದು ಹೆಣ್ಣಿನ ಕೈಯಿಂದ ನಾನು ಸೋಲೋದಾ ಅಂತ ಪಿತ್ತ ನಿತ್ತಗೇರಿದ ಅಲ್ಲಾವುದ್ದೀನ್ ಖಿಲ್ಜಿ, ಈ ಬಾರಿ ಮತ್ತೆ ಚಿತ್ತೋಡಗಢದ ಮೇಲೆ ದಾಳಿ ಮಾಡ್ತಾನೆ, ಕೆಲ ದಿನಗಳ ಕಾಲ ರಜಪೂತರು ಖಿಲ್ಜಿಗೆ ಪ್ರತಿರೋಧ ತೋರುತ್ತಾರೆ ಆದರೆ ಖಿಲ್ಜಿಯ ಬೃಹತ್ ಸೈನ್ಯದೆದುರು ರಜಪೂತರು ಸೋಲುತ್ತಾರೆ. ಕೋಟೆಗಿದ್ದ ಒಂದೇ ಒಂದು ದ್ವಾರವನ್ನು ತನ್ನ ಸೈನಿಕರಿಂದ ಮುಚ್ಚಿಸಿ ರಜಪೂತ ಸೈನಿಕರಿಗೆ ಹೊರಗಿನಿಂದ ಯಾವ ಸಾಮಗ್ರಿಗಳು ಸಿಗದ ಹಾಗೆ ಮಾಡಿ ಚಿತ್ತೋಡವನ್ನ ಖಿಲ್ಜಿ ವಶಪಡಿಸಿಕೊಂಡು ರಾವಲ್ ರತನ್ ಸಿಂಹನ ತಲೆ ಕಡಿದು ಹಾಕ್ತಾನೆ.
ರಾಣಿ ಪದ್ಮಾವತಿ ತನ್ನ 16,000 ಸಖಿಯರೊಂದಿಗೆ ಬೆಂಕಿಗೆ ಹಾರಿದ್ದು..!

ಈಗ ಮುಂದೇನು? ಅಲ್ಲಾವುದ್ದೀನ್ ಎಂಬ ಕಾಮುಕ ಚಿತ್ತೋಡದಲ್ಲಿರೊ ಎಲ್ಲ ರಜಪೂತ ಮಹಿಳೆಯರನ್ನೂ ಸೆಕ್ಸ್ ಸ್ಲೇವ್ಸ್ಗಳಾಗಿ ಕರೆದುಕೊಂಡು ಹೋಗೋಕೆ ಕೋಟೆ ಒಳ ಬರಿಕೈಲಿ ಮುಂಚೆಯೇ ಈ ವಿಷಯ ಅರಿತ ರಾಣಿ ಪದ್ಮಿನಿ, ನಾವು ರಜಪೂತರು ಯಾವತ್ತೂ ನಮ್ಮ ಶೀಲವನ್ನ ಕಳೆದುಕೊಂಡವರಲ್ಲ, ಅಂಥದ್ರಲ್ಲಿ ಈ ಮುಸಲ್ಮಾನ ದೊರೆಗೆ ನಮ್ಮ ಶೀಲ ಅರ್ಪಿತವಾಗೋದೇ? ಛೀ ಹಾಗೇ ಮಾಡೋದಕ್ಕಿಂತ ವೀರಸ್ವರ್ಗ ಪ್ರಾಪ್ತಿ ಮಾಡಿಕೊಳ್ಳೋದೇ ಎಷ್ಟೋ ವಾಸಿ ಅಂತ ತಕ್ಷಣ ಆಕೆ ಚಿತ್ತೋಡದಲ್ಲಿದ್ದ ತನ್ನ 16,000 ರಜಪೂತನಿಯರೊಂದಿಗೆ ಬೆಂಕಿಗೆ ಹಾರಿ ಜೌಹಾರ್ ಮಾಡಿಕೊಂಡು ಬಿಡ್ತಾಳೆ.

ನಂತರ ಕೋಟೆಯ ಒಳಗೆ ಖಿಲ್ಜಿ ಬಂದು ನೋಡಿದಾಗ ಆತನಿಗೆ ಯಾವೊಬ್ಬ ಹೆಂಗಸೂ ಚಿತ್ತೋಡದಲ್ಲಿ ಸಿಗದೆ ಹೆಣಗಳನ್ನ ಹದ್ದು ಕುಕ್ಕುತ್ತ ಕೂತಿರೊ ದೃಶ್ಯಗಳೇ ಕಂಡು ಆತ ದೆಹಲಿಗೆ ವಾಪಸ್ ಆಗ್ತಾನೆ. ನೋಡಿ ತನ್ನ ಆತ್ಮ & ಶೀಲರಕ್ಷಣೆಗಾಗಿ ತನ್ನನ್ನ ತಾನು ಬೆಂಕಿಗಾಹುತಿ ಮಾಡಿಕಂಡ & ತಾನು ಸಾಯೋವರೆಗೂ ಖಿಲ್ಜಿಯ ವಿರುದ್ಧ ಹೊರಾಡಿದ್ದ ರಜಪೂತರಷ್ಟೇ ಯಾಕೆ ಇಡೀ ಭಾರತದ ಮಹಿಳೆಯರಿಗೆ ಆದರ್ಶಪ್ರಾಯವಾಗಿರೋ ವೀರವನಿತೆ ಪದ್ಮಿನಿ ರಾಣಿ ಬಗ್ಗೆ ಕೆಲವರು ಒಂದು ಚಿತ್ರದ ಮುಖಾಂತರ ಕೆಟ್ಟ ರೀತಿಯಲ್ಲಿ ತೋರಿಸಲು ಹೊರಟಿದ್ದಾರೆ.

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…
ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್ಗಳು, ಐರನ್, ಆಂಟಿಆಕ್ಸಿಡೆಂಟ್ಸ್ ಹಾಗೂ ಫೋಲಿಕ್ ಆಸಿಡ್ ಸಮೃದ್ಧವಾಗಿರುವ ಬೀಟ್ರೂಟ್ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಬೈಕಿನಲ್ಲಿ ಹೆಲ್ಮೆಟ್ ಹಾಕದೆ ಹೋಗುತ್ತಿದ್ದರೆ ಟ್ರಾಫಿಕ್ ಪೊಲೀಸರು ದಂಡ ಹಾಕಿದರೆ ಸರಿ, ಕಾರಿನಲ್ಲಿ ಸೀಟ್ ಬೆಲ್ಟ್ ಹಾಕದಿದ್ದರೆ ದಂಡ ಬೀಳುತ್ತೆ…..ಅದು ಸಹ ಸರಿ. ಆದರೆ ತನ್ನದೇ ಹೊಲದಲ್ಲಿ ನಿಲ್ಲಿಸಿದ್ದ ಎತ್ತಿನ ಬಂಡಿಗೆ ದಂಡ ಹಾಕುವುದೆಂದರೆ…? ಅದೂ ಒಂದು ಸಾವಿರ ರೂಪಾಯಿ…! ಇಂಥದ್ದೊಂದು ಘಟನೆ ಉತ್ತರ ಪ್ರದೇಶದ ಡೆಡ್ರಾಡೂನ್ ವ್ಯಾಪ್ತಿಯ ಶಹಾಪುರ ಹೊರವಲಯದಲ್ಲಿರುವ ಚಾರ್ಬಾ ಗ್ರಾಮದ ಹಸನ್ ಎಂಬಾತನಿಗೆ ಒಂದು ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಸಬ್ ಇನ್ಸ್ ಪೆಕ್ಟರ್ ಪಂಕಜ್ ಕುಮಾರ್ ಮತ್ತವರ ತಂಡ ನೂತನ ಸಾರಿಗೆ…