ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-
ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…