ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-
ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.