ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-
ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಜೂರ ಮನುಷ್ಯನ ದೇಹಕ್ಕೆ ತುಂಬಾನೇ ಸಹಕಾರಿಯಾಗಿದೆ. ಇದರ ಸೇವನೆಯನ್ನು ಮಾಡೋದ್ರಿಂದ ಸಿಗುವ ಆರೋಗ್ಯಕಾರಿ ಲಾಭಗಳು ಯಾವುವು ಅನ್ನೋದು ಮುಂದೆ ನೋಡಿ.
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.