ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-
ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!