ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.

ಮಲೆನಾಡಿನ ಹಚ್ಚಹಸಿರು ಪರಿಸರ, ಕಾಜಾಣ, ಕವಿಶೈಲ, ಬಂಡೆ ಕಲ್ಲಿನ ಮೇಲೆ ಕುಳಿತಿರುವ ಕುವೆಂಪು ಅವರು ಬರೆಯುವುದರಲ್ಲಿ ಮಗ್ನರಾಗಿದ್ದಾರೆ. ಚಿತ್ರದ ಹಿಂಬದಿ ಕನ್ನಡದಲ್ಲಿ ಗೂಗಲ್ ಎಂದು ಬರೆಯಲಾಗಿದೆ.

ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ 29, 1904 – ನವೆಂಬರ್ 11, 1994), ಕನ್ನಡದ ಅಗ್ರಮಾನ್ಯ ಕವಿ,ಕಾದಂಬರಿಕಾರ,ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ‘ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನೂ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಮೊದಲ ಬಾರಿಗೆ ಕನ್ನಡಕ್ಕೆ ತಂದುಕೊಟ್ಟವರು. ಕರ್ನಾಟಕ ಸರ್ಕಾರ ಕೊಡಮಾಡುವ ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಪಂಪ ಪ್ರಶಸ್ತಿಗಳನ್ನು ಮೊದಲ ಬಾರಿಗೆ ಪಡೆದವರು.

ಕುವೆಂಪು ಅವರು ತಮ್ಮ ತಾಯಿಯ ತವರೂರಾದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ; ತಾಯಿ ಸೀತಮ್ಮ. ಅವರ ಬಾಲ್ಯ ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆಯಿತು.
ಕುವೆಂಪು ಅವರ ಆರಂಭಿಕ ವಿದ್ಯಾಭ್ಯಾಸ ಕೂಲಿಮಠದಲ್ಲಿ ಆಯಿತು. ಮಾಧ್ಯಮಿಕ ಶಿಕ್ಷಣ ತೀರ್ಥಹಳ್ಳಿಯಲ್ಲಿ ನಡೆಯಿತು. ನಂತರ ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲಿನಲ್ಲಿ ತಮ್ಮ ಶಿಕ್ಷಣ ಮುಂದುವರಿಸಿದರು. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ. ಪದವಿಯನ್ನೂ, ಕನ್ನಡದಲ್ಲಿ ಎಂ.ಎ. ಪದವಿಯನ್ನೂ ಪಡೆದರು. ಟಿ.ಎಸ್.ವೆಂಕಣ್ಣಯ್ಯನವರು ಇವರಿಗೆ ಗುರುಗಳಾಗಿದ್ದರು.

ಕುವೆಂಪು ಅವರು ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರೂ, ನಂತರ ಪ್ರಾಂಶುಪಾಲರೂ ಆಗಿದ್ದರು. ನಂತರ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾದ ಮಾನಸ ಗಂಗೋತ್ರಿಯನ್ನು ಕಟ್ಟಿ ಬೆಳೆಸಿದರು. ವಿಶ್ವವಿದ್ಯಾನಿಲಯವನ್ನು ಅಧ್ಯಯನಾಂಗ, ಸಂಶೋಧನಾಂಗ ಹಾಗೂ ಪ್ರಸಾರಾಂಗ ಎಂಬುದಾಗಿ ವಿಭಾಗಿಸಿದರು. ಕಡಿಮೆ ಅವಧಿಯಲ್ಲಿ ಕನ್ನಡದಲ್ಲಿ ಪಠ್ಯಪುಸ್ತಕಗಳನ್ನು ಬರೆಸಿ ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಿದರು.
ಕುವೆಂಪು ಅವರು ಹೇಮಾವತಿ ಅವರನ್ನು ವಿವಾಹವಾದರು. ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ ಹಾಗೂ ತಾರಿಣಿ ಅವರ ಮಕ್ಕಳು. ಪೂರ್ಣಚಂದ್ರ ತೇಜಸ್ವಿ ಅವರು ಕನ್ನಡದ ಅಗ್ರಮಾನ್ಯ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಕೋಕಿಲೋದಯ ಚೈತ್ರ ಅವರು ಇಂಜಿನಿಯರ್ ಆಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದಾರೆ. ಚಿದಾನಂದಗೌಡ ಅವರು ಕುವೆಂಪು ಅವರ ಅಳಿಯ.
ಕುವೆಂಪು ಅವರು ನವೆಂಬರ್ 11, 1994ರಂದು ಮೈಸೂರಿನಲ್ಲಿ ನಿಧನರಾದರು. ತಮ್ಮ ಹುಟ್ಟೂರಾದ ಕುಪ್ಪಳಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಕುಪ್ಪಳಿಯಲ್ಲಿರುವ ಅವರ ಸಮಾಧಿ ಒಂದು ಸ್ಮಾರಕವಾಗಿದೆ.

ಸಾಹಿತ್ಯ:-
ಬೊಮ್ಮನಹಳ್ಳಿ ಕಿಂದರಿ ಜೋಗಿ, ಕೊಳಲು, ಕಥನ ಕವನಗಳು, ಕಲಾ ಸುಂದರಿ, ನವಿಲು, ಪಕ್ಷಿಕಾಶಿ, ಶ್ರೀರಾಮಾಯಣ ದರ್ಶನಂ ಮಹಾಕಾವ್ಯವೂ ಸೇರಿ 30ಕ್ಕೂ ಹೆಚ್ಚು ಕಾವ್ಯ ಕೃತಿಗಳು. ಜಲಗಾರ, ಯಮನಸೋಲು, ವಾಲ್ಮೀಕಿ ಭಾಗ್ಯ ಸ್ಮಶಾನ ಕುರುಕ್ಷೇತ್ರ, ಮಹಾರಾತ್ರಿ, ರಕ್ತಾಕ್ಷಿ, ಬಿರುಗಾಳಿ, ಬೆರಳ್ಗೆ ಕೊರಳ್, ಶೂದ್ರ ತಪಸ್ವಿ, ಇತರೆ ನಾಟಕಗಳು, ಕಾನೂರು ಹೆಗ್ಗಡತಿ, ಮಲೆಗಳಲ್ಲಿ ಮದುಮಗಳು ಕಾದಂಬರಿಗಳು, ವಿಮರ್ಶೆ/ಕಾವ್ಯ ಮೀಮಾಂಸೆ-ಕಾವ್ಯ ,ಶಿಶುಸಾಹಿತ್ಯ ಹೀಗೆ ಸಾಹಿತ್ಯ ಲೋಕಕ್ಕೆ ನೀಡಿರುವ ಕೊಡುಗೆ ಅಪಾರ. ಜ್ಞಾನಪೀಠ, ರಾಜ್ಯ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಪದ್ಮಭೂಷಣ, ಪಂಪ ಪ್ರಶಸ್ತಿ ಸೇರಿ ಅನೇಕ ಗೌರವಗಳು ಸಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…