ಸುದ್ದಿ

ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

227

ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಡಾ.ಸಿ ಎನ್ ಅಶ್ವತ್ಥ್ ನಾರಾಯಣ್..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು..‌ ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಬಾಕ್ಸಿಂಗ್ ಪಂದ್ಯಾವಳಿಯ ಪರಿಚಯ :-

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..

ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಆರೋಗ್ಯ

    ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

    ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…