ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2694

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • inspirational, ರಾಜಕೀಯ

    ನಿಕಿಲ್ ಹಾಗು ಸುಮಲತಾ ಹಾವು ಹೆಣಿ ಆಟ:ಊಹೆಗೂ ಮೀರಿದ ಮಂಡ್ಯ ಪಲಿತಾಂಶ….!

    ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….

  • ಸುದ್ದಿ

    ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ಬಿಹಾರ: 31 ಮಂದಿ ಸಾವು, 40 ಲಕ್ಷ ಜನರ ಸ್ಥಳಾಂತರ….

    ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್‌ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್‌ಪುರ್‌ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್‌ಗಂಜ್‌ನಲ್ಲಿ ನಾಲ್ಕು…