News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರೆಸಿಪಿ

ರುಚಿ ರುಚಿಯಾದ ಬಾದುಷ ಮಾಡುವ ವಿಧಾನ ತಿಳಿಯಿರಿ…

2441

 

ಸಿಹಿ ತಿಂಡಿಗಳು ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ. ಅದರಲ್ಲೂ ಬಾದುಶ ಅಂದ್ರೆ ಬಾಯಲ್ಲಿ ನೀರು ಬರುತ್ತೆ. ಎಲ್ಲಾ ವಯೋಮಾನದವರು ಸಹ ಇಷ್ಟ ಪಡುತ್ತಾರೆ. ನೀವೂ ಮನೆಯಲ್ಲೇ ಬಿಸಿಯಾದ ರುಚಿಯಾದ ಬಾದುಶವನ್ನು ತಯಾರಿಸಬಹುದು. ತಿಳಿಯಲು ಮುಂದೆ ಓದಿ…

ಬೇಕಾಗುವ ಪದಾರ್ಥಗಳು…

  • ಮೈದಾಹಿಟ್ಟು – 2 ಬಟ್ಟಲು
  • ಅಡುಗೆ ಸೋಡಾ – ಚಿಟಿಕೆ
  • ಮೊಸರು- ಕಾಲು ಬಟ್ಟಲು
  • ಏಲಕ್ಕಿ ಪುಡಿ- ಸ್ವಲ್ಪ
  • ಡಾಲ್ಡಾ (ತುಪ್ಪ) – ಅರ್ಧ ಬಟ್ಟಲು
  • ಎಣ್ಣೆ – ಕರಿಯಲು
  • ಸಕ್ಕರೆ – 1 1/2 ಬಟ್ಟಲು

ಮಾಡುವ ವಿಧಾನ…

  • ಮೊದಲು ಪಾತ್ರೆಯೊಂದನ್ನು ತೆಗೆದುಕೊಂಡು ಅದಕ್ಕೆ ಮೈದಾ ಹಿಟ್ಟು, ಅಡುಗೆ ಸೋಡಾ, ಮೊಸರು ಹಾಗೂ ತುಪ್ಪವನ್ನು ಹಾಕಿ ಚಪಾತಿ ಹಿಟ್ಟಿನಂತೆ ಮಾಡಿಕೊಳ್ಳಬೇಕು.
  • ಮತ್ತೊಂದು ಪಾತ್ರೆ ತೆಗೆದುಕೊಂಡು ಅದಕ್ಕೆ ಸಕ್ಕರೆಯನ್ನು ಹಾಕಿ ಎಳೆ ಪಾಕ ಮಾಡಿಕೊಳ್ಳಬೇಕು. ಪಾಕ ತಯಾರಾದ ಬಳಿಕ ಏಲಕ್ಕಿ ಪುಡಿ ಹಾಕಿ ಕೆಳಗಿಳಿಸಬೇಕು.
  • ಬಾಣಲೆಯನ್ನು ಒಲೆಯ ಮೇಲಿಟ್ಟು ಎಣ್ಣೆಯನ್ನು ಹಾಕಿ ಕಾಯಲು ಬಿಡಬೇಕು.
  • ನಂತರ ಈ ಹಿಂದೆಯೇ ಮಾಡಿಟ್ಟುಕೊಂಡ ಹಿಟ್ಟನ್ನು ತೆಗೆದುಕೊಂಡು ಸಣ್ಣ ಸಣ್ಣ ಉಂಡೆಗಳನ್ನಾಗಿ ಮಾಡಿಕೊಂಡು ಚಿಕ್ಕ ಗಾತ್ರಕ್ಕೆ ತಟ್ಟಿ, ಉಂಡೆ ಮಧ್ಯೆ ಬೆರಳಿನಿಂದ ಹಳ್ಳ ಮಾಡಬೇಕು. (ಹಳ್ಳ ಮಾಡುವುದರಿಂದ ಎಣ್ಣೆಗೆ ಹಾಕಿದಾಗ ಉಂಡೆಗಳು ಒಳಗಿನಿಂದ ಚೆನ್ನಾಗಿ ಬೇಯಲು ಸಹಾಯವಾಗುತ್ತದೆ).
  • ಎಣ್ಣೆಯನ್ನು ಬಹಳ ಕಾಯಿಸಬಾರದು. ಸ್ವಲ್ಪ ಎಣ್ಣೆ ಕಾದ ನಂತರ ಸಣ್ಣ ಉರಿಯಲ್ಲಿಯೇ ಮಾಡಿಟ್ಟುಕೊಂಡ ಉಂಡೆಗಳನ್ನು ಹಾಕಿ ಕೆಂಪಗೆ ಕರಿಯಬೇಕು. ನಂತರ ಪಾಕಕ್ಕೆ ಇದನ್ನು ಹಾಕಿ 5 ನಿಮಿಷಗಳ ನಂತರ ತೆಗೆದರೆ ರುಚಿಕರವಾದ ಬಾದುಷ ಸವಿಯಲು ಸಿದ್ಧ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ