ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.
ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.
ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-
ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!
ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.
ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.
ರುದ್ರಾಕ್ಷವನ್ನು ಧರಿಸುವ ಬಗೆ :-
ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.
ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :-
26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,
50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,
16 ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,
12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ರೇಶನ್ ಕಾರ್ಡ್ ಗಾಗಿ ಹೊಸದಾಗಿ ಅರ್ಜಿ ಸಲ್ಲಿಸಿದವರು ಹಾಗೂ ಈಗಾಗಲೇ ರೇಶನ್ ಕಾರ್ಡ್ ಹೊಂದಿದವರು ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಹಾಗೂ ಪಡಿತರ ಚೀಟಿ ಹೊಂದಿದವರ ಹೆಸರು ತೆಗೆಯಲಾಗಿದೆಯೇ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರೇಶನ್ ಕಾರ್ಡ್ ಹೊಂದಿದವರು ಈಗ ಬೇರೆ ಬೇರೆ ನಗರಗಳಿಗೆ ವಲಸೆ ಹೊಗಿರುತ್ತಾರೆ. ಹಾಗೂ ಕೆಲಸ ಅರಸಿ ಬೇರೆ ನಗರ,…