ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.
ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.
ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-
ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!
ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.
ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.
ರುದ್ರಾಕ್ಷವನ್ನು ಧರಿಸುವ ಬಗೆ :-
ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.
ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :-
26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,
50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,
16 ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,
12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.
ಮಾನವನ ದೇಹದೊಳಗೆ ಪ್ರವೇಶಿಸಿದ ಮಾತ್ರೆಯು ಅಲ್ಲಿ ತಾನು ನಡೆಯುವ ಕ್ರಿಯೆಗಳನ್ನು ವೈದ್ಯನಿಗೆ ಕಳುಹಿಸಿಕೊಡುವ ವಿಶಿಷ್ಟ ತಂತ್ರಜ್ಞಾನದ ಡಿಜಿಟಲ್ ಮಾತ್ರೆಗೆ ಅಮೆರಿಕ ಅನುಮತಿ ನೀಡಿದೆ.! ವಿಶ್ವದಲ್ಲಿಯೇ ಇಂತಹದೊಂದು ಡಿಜಿಟಲ್ ಮಾತ್ರೆ ಇದೀಗ ಜನ ಬಳಕೆಗೆ ಬಂದಿದ್ದು, ಇದು ಎಲ್ಲರಿಗೂ ಆಶ್ಚರ್ಯವಾಗಿದೆ.!
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.