News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

6608

ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.

ರುದ್ರಾಕ್ಷಿಯನ್ನು ಧರಿಸುವುದರಿಂದ ತನು-ಮನಗಳಲ್ಲಿ ಪವಿತ್ರತೆಯ ಸಂಚಾರವಾಗುತ್ತದೆ.ಪಾಪಗಳ ಸಮೂಹವನ್ನೇ ರುದ್ರಾಕ್ಷಿ ನಾಶಪಡಿಸುತ್ತದೆ.ಬಿಳಿ,ಕೆಂಪು,ಹಳದಿ ಹಾಗೂ ಕಪ್ಪುಬಣ್ಣಗಳಲ್ಲಿ ರುದ್ರಾಕ್ಷಿ ಸಿಗುತ್ತದೆ.ಋಷಿಗಳ ನಿರ್ದೇಶನದಂತೇ ಮನುಷ್ಯರು ತಮ್ಮ ದೇಹದ ಬಣ್ಣಗಳ ಪ್ರಕಾರ ರುದ್ರಾಕ್ಷಿಯನ್ನು ಧರಿಸಬೇಕು.ಸುಖ ಹಾಗೂ ಮೋಕ್ಷವನ್ನು ಬಯಸುವ ಜನರು ರುದ್ರಾಕ್ಷದ ಮಾಲೆಯನ್ನು ಧರಿಸಬೇಕು.ವಿಶೇಷವಾಗಿ ಶೈವ ಮತಾವಲಂಬಿಗಳು ತಪ್ಪದೇ ರುದ್ರಾಕ್ಷಮಾಲೆಯನ್ನು ಧರಿಸಬೇಲೇಬೇಕೆಂಬ ನಿಯಮವಿದೆ.

ಹಲವು ಮುಖ ಹಾಗೂ ಆಕಾರಗಳಲ್ಲಿ ರುದ್ರಾಕ್ಷಿ ಲಭ್ಯವಿದೆ.ಏಕಮುಖಿ ರುದ್ರಾಕ್ಷಿಯಲ್ಲಿ ಬಹಳ ಶಕ್ತಿಯಿರುತ್ತದೆಂದು ಹೇಳಲಾಗುತ್ತದೆ.ರುದ್ರಾಕ್ಷಿ ಚಿಕ್ಕದಿದ್ದಂತೆ ಅದರ ಶಕ್ತಿ ಉತ್ತರೋತ್ತರವಾಗಿ ವೃದ್ಧಿಯಾಗುತ್ತಿರುತ್ತದೆ.ದೊಡ್ಡ ರುದ್ರಾಕ್ಷಿಗಿಂತ ಚಿಕ್ಕ ರುದ್ರಾಕ್ಷಿಗೆ ಅಧಿಕಶಕ್ತಿಯಿರುತ್ತದೆ.ಆದರೂ ಎಲ್ಲ ರುದ್ರಾಕ್ಷಿಗಳಲ್ಲೂ ಶಿವಶಕ್ತಿ ಜಾಗೃತವಾಗಿರುತ್ತದೆ,ಸರ್ವಪಾಪಗಳನ್ನು ವಿನಾಶಮಾಡುವ ವಿಶೇಷ ಶಕ್ತಿಯಿರುತ್ತದೆ.ಸುಂದರವಾಗಿರುವ,ಅಖಂಡವಾಗಿರುವ ರುದ್ರಾಕ್ಷಿಯನ್ನು ಧರಿಸಬೇಕು.ತುಂಡಾಗಿರುವ,ಕೀಟದಿಂದ ಕಡಿಯಲ್ಪಟ್ಟಿರುವ,ಗಾಯಗಳಿಂದ ಕೂಡಿರುವ ರುದ್ರಾಕ್ಷಿಯನ್ನು ಧರಿಸಬಾರದು.

ರುದ್ರಾಕ್ಷಿ ಮಾಲೆಯನ್ನು ಧರಿಸುವುದರ ಹಿಂದೆ ಇವೆ ಹಲವು ವೈಜ್ಞಾನಿಕ ಕಾರಣಗಳು :-

ರುದ್ರಾಕ್ಷಿ ಮಾಲೆಯನ್ನು ಧರಿಸುವುದರಿಂದ ಕತ್ತಿನ ಭಾಗದಲ್ಲಿರುವ ನರಗಳು ದೃಢವಾಗಿರುತ್ತವೆ,ಇದು ಗಳಗಂಡ,ಕತ್ತುನೋವು ಮುಂತಾದ ರೋಗಗಳನ್ನು ತಡೆಯುತ್ತದೆ.ರುದ್ರಾಕ್ಷಿಗೆ ವಿಶೇಷವಾದ ಔಷಧೀಯ ಗುಣಗಳಿವೆ.ಸ್ನಾನವನ್ನು ಮಾಡುವಾಗ ರುದ್ರಾಕ್ಷಿಮಾಲೆಯ ನೀರು ಶರೀರದ ಮೇಲೆ ಬೀಳುವುದರಿಂದ ಅನೇಕ ಚರ್ಮರೋಗಗಳ ನಿಯಂತ್ರಣವಾಗುತ್ತದೆ. ಪ್ರಕೃತಿಯು ಮನುಷ್ಯನಿಗೆ ಕೊಟ್ಟ ಶ್ರೇಷ್ಟ ಉಡುಗೊರೆ ರುದ್ರಾಕ್ಷ. ಇಲ್ಲಿ ಓದಿ:-ಈ 5 ವಸ್ತುಗಳಿಂದ ಶಿವ ಲಿಂಗವನ್ನು ಪೂಜಿಸುವಂತಿಲ್ಲ!!!

ನಮ್ಮ ಅನೇಕ ಧರ್ಮಗ್ರಂಥಗಳಲ್ಲಿ ರುದ್ರಾಕ್ಷದ ಶ್ರೇಷ್ಟತೆಯನ್ನು ಪ್ರಶಂಸಿಸಲಾಗಿದೆ.ರುದ್ರಾಕ್ಷಿಮಾಲೆಯನ್ನು ಹಾಕಿಕೊಂಡು ದೇವಪೂಜೆ ಮಾಡಿದರೆ ಹರಿದ್ವಾರ,ಕಾಶೀ,ಗಂಗೆ ಮುಂತಾದ ಪುಣ್ಯತೀರ್ಥಗಳಲ್ಲಿ ಪೂಜೆ ಮಾಡಿದ ಫಲ ಸಿಗುತ್ತದೆ.ರುದ್ರಾಕ್ಷಿ ಮಾಲೆಯನ್ನು ಧರಿಸಿ ಮಂತ್ರೋಚ್ಚಾರಣೆ,ಜಪ ಮಾಡಿದರೆ ಫಲಪ್ರಾಪ್ತಿ ದ್ವಿಗುಣವಾಗುತ್ತದೆ.ರುದ್ರಾಕ್ಷಿಮಾಲೆಯನ್ನು ಧರಿಸಿದವರ ಶರೀರದಲ್ಲಿ ಸಕಾರಾತ್ಮಕ ಶಕ್ತಿ ಜಾಗೃತವಾಗುತ್ತದೆ.ಮನಸ್ಸಿನ ನಿಯಂತ್ರಣ ರುದ್ರಾಕ್ಷಿಮಾಲೆಯಿಂದ ಸಾಧ್ಯ.ರುದ್ರಾಕ್ಷಿಮಾಲೆಯಲ್ಲಿ ನೂರಾಎಂಟು ಅಥವಾ ಐವತ್ತನಾಲ್ಕು ರುದ್ರಾಕ್ಷಿಗಳಿದ್ದರೆ ಪರಿಣಾಮಕಾರಿ.

ರುದ್ರಾಕ್ಷಿಮಾಲೆಯನ್ನು ಧರಿಸಿ ಭಗವಾನ್ ಶಿವನ ಪೂಜೆ,ಜಪಗಳನ್ನಾಚರಿಸಿದರೆ ಶುಭವಾಗುತ್ತದೆ.ಬೇರೆ ಬೇರೆ ಮುಖಗಳಿರುವ ರುದ್ರಾಕ್ಷಿಮಾಲೆಯನ್ನು ಧರಿಸುವುದರಿಂದ ವಿಭಿನ್ನ ಇಚ್ಚೆಗಳು ನೆರವೇರುತ್ತವೆ.ರುದ್ರಾಕ್ಷಿಯನ್ನು ಧರಿಸಿದವರಿಗೆ ಶಿವಲೋಕ ಸಿಗುತ್ತದೆಂದು ಪದ್ಮಪುರಾಣ,ಶಿವಪುರಾಣಗಳಲ್ಲಿ ತಿಳಿಸಲಾಗಿದೆ.

ರುದ್ರಾಕ್ಷವನ್ನು ಧರಿಸುವ ಬಗೆ :-

ಭದ್ರಾಕ್ಷವೆಂಬುದು ರುದ್ರಾಕ್ಷದ ಇನ್ನೊಂದು ಜಾತಿ..ರುದ್ರಾಕ್ಷದ ಮಧ್ಯದಲ್ಲಿ ಭದ್ರಾಕ್ಷವನ್ನು ಧರಿಸಿದರೆ ಒಳಿತಾಗುತ್ತದೆ. ರುದ್ರಾಕ್ಷವನ್ನು ಧರಿಸುವ ಮುನ್ನ ಅದು ಅಸಲಿಯೋ,ನಕಲಿಯೋ ಎಂದು ಪರೀಕ್ಷಿಸಬೇಕು.ನೇಪಾಳ ಭಾಗದಲ್ಲಿ ಸಿಗುವ ರುದ್ರಾಕ್ಷ ಸಾಮಾನ್ಯವಾಗಿ ಅಸಲಿಯಾಗಿರುತ್ತದೆ.ಅಲ್ಲಿನ ಪಶುಪತಿನಾಥ ದೇವಾಲಯದಲ್ಲಿ ಹಲವು ವಿಧದ ಅಸಲಿ ರುದ್ರಾಕ್ಷಿ ಮಾಲೆಗಳು ಸಿಗುತ್ತವೆ.ತುಂಡಾಗಿರುವ,ಕೀಟಗಳು ತಿಂದಿರುವ ರುದ್ರಾಕ್ಷವನ್ನು ಧರಿಸಬಾರದು.ಜಪಾದಿ ಕರ್ಮಗಳಲ್ಲಿ ಚಿಕ್ಕರುದ್ರಾಕ್ಷಿಯಿರುವ ಮಾಲೆಗಳನ್ನು ಬಳಸಬೇಕು.

ಈ ನಂಬರಿನ ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಿಗುವ ಫಲಗಳು :- 

  • 108 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸಿದರೆ ಸಮಸ್ತ ಕಾರ್ಯಗಳಲ್ಲೂ ಯಶಸ್ಸು,ವಂಶವನ್ನು ಉದ್ಧಾರಮಾಡುವ ಸಾಮರ್ಥ್ಯ ಸಿಗುತ್ತದೆ. ಈ ಮಾಲೆಯನ್ನು ಮನೋಕಾಮನೆಗಳು ಈಡೇರಲು ಹಾಗೂ ಜಪ ತಪಾದಿ ಕಾರ್ಯಗಳಲ್ಲಿ ಧರಿಸುತ್ತಾರೆ.
  • 140 ರುದ್ರಾಕ್ಷಿಗಳಿರುವ ಸರವನ್ನು ಧರಿಸುವುದರಿಂದ ಸಾಹಸ,ಪರಾಕ್ರಮ ಹಾಗೂ ಉತ್ತಮ ಆರೋಗ್ಯ ಪ್ರಾಪ್ತಿಯಾಗುತ್ತದೆ. ದೀರ್ಘಾಯುಷ್ಯವನ್ನು ಬಯಸುವವರು ಈ ಮಾಲೆಯನ್ನು ಧರಿಸುತ್ತಾರೆ.
  • ಮೋಕ್ಷವನ್ನು ಬಯಸುವವರು 100 ರುದ್ರಾಕ್ಷಿಗಳುಳ್ಳ ಮಾಲೆ ಧರಿಸುತ್ತಾರೆ.
  • 50 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಕಂಠದಲ್ಲಿ ಧರಿಸುವುದರಿಂದ ಶುಭಪ್ರಾಪ್ತಿಯಾಗುತ್ತದೆ.
  • ಧನಧಾನ್ಯಗಳನ್ನು ಬಯಸುವವರು 62 ರುದ್ರಾಕ್ಷಿಗಳಿರುವ ಮಾಲೆ ಧರಿಸುತ್ತಾರೆ.
  • 32 ರುದ್ರಾಕ್ಷಿಗಳಿರುವ ಮಾಲೆಯನ್ನು ಧರಿಸುವುದರಿಂದ ಧನಸಂಪತ್ತು ಹಾಗೂ ದೀರ್ಘಾಯುಷ್ಯ ಲಭಿಸುತ್ತದೆ.
  • 26 ರುದ್ರಾಕ್ಷಿಗಳಿರುವ ಮಾಲೆಯನ್ನು ತಲೆಯ ಮೇಲೆ ಧರಿಸುವುದರಿಂದ ಬುದ್ಧಿಶಕ್ತಿ ಹಾಗೂ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
  • 15 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಮಂತ್ರಸಿದ್ಧಿ ಹಾಗೂ ತಂತ್ರಸಿದ್ಧಿಕಾರ್ಯಗಳಿಗೆ ಬಳಸಲಾಗುತ್ತದೆ.
  • 12 ರುದ್ರಾಕ್ಷಿಗಳುಳ್ಳ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸುವುದರಿಂದ ವಿಘ್ನಗಳ ಪರಿಹಾರವಾಗುತ್ತದೆ.

26 ರುದ್ರಾಕ್ಶಿಗಳಿರುವ ಮಾಲೆ ಶಿರದಲ್ಲಿ,

50 ರುದ್ರಾಕ್ಷಿಗಳಿರುವ ಮಾಲೆ ಎದೆಯಲ್ಲಿ,

16  ರುದ್ರಾಕ್ಷಿಗಳಿರುವ ಮಾಲೆ ಭುಜದಲ್ಲಿ,

12 ರುದ್ರಾಕ್ಷಿಗಳಿರುವ ಮಾಲೆಯನ್ನು ಮಣಿಕಟ್ಟಿನಲ್ಲಿ ಧರಿಸಬೇಕೆಂದು ಪುರಾಣಗಳು ತಿಳಿಸುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಇಂದು ವೈದ್ಯರ ಮುಷ್ಕರ, ರೋಗಿಗಳ ಪರದಾಟ..!ತಿಳಿಯಲು ಇದನ್ನು ಓದಿ..

    ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
    ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.

  • ದೇಶ-ವಿದೇಶ

    ಈ ದೇಶ 2000 ವರ್ಷಗಳಿಂದ ಭಾರತದ ರಾಜನಿಗಾಗಿ ಕಾಯುತ್ತಿತ್ತು!ಯಾವ ದೇಶ ಗೊತ್ತಾ?ಈ ಲೇಖನಿ ಓದಿ…

    ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.

  • ಸುದ್ದಿ

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ 9 ನಕಲಿ ವಿದ್ಯಾರ್ಥಿಗಳು ಅರೆಸ್ಟ್……!

    ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ಸುದ್ದಿ

    ‘ಎಲ್ಲಾ ದೈವ ಇಚ್ಚೆ’ಅಂತ ಹೇಳಿ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮನೆಯೊಳಗೆ ರೀ ಎಂಟ್ರಿಕೊಟ್ಟ ಚೈತ್ರ ಕೊಟ್ಟೂರ್…!

    ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ  ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್​​ ಬಾಸ್​ ಮನೆಗೆ…

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…