ವ್ಯಕ್ತಿ ವಿಶೇಷಣ

ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

4021

ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ. ಗ್ರಾಮೀಣ ಭಾಗದಿಂದ ಬಂದ ಯುವತಿಯೊಬ್ಬಳು ‘ಅತ್ಯಾಚಾರ ನಿರೋಧಕ ಅಂಡರ್‌ವೇರ್’ ಶೋಧಿಸಿ ಸಾಧನೆ ಮಾಡಿದ್ದಾಳೆ.

ಹೇಗಿದೆ ಈ ಅತ್ಯಾಚಾರ ನಿರೋಧಕ ಅಂಡರ್‌ವೇರ್…

ಇದು ಸಾಮಾನ್ಯ ಪ್ಯಾಂಟಿಯಲ್ಲ. ಗುಲಾಬಿ ಬಣ್ಣದ ಈ ಅಂಡರ್’ವೇರ್‌ಗೆ ಎಲೆಕ್ಟ್ರಾನಿಕ್ ಟೆಕ್ನಾಲಜಿ ಅಳವಡಿಸಲಾಗಿದೆ. ಇದಕ್ಕೆ ಸ್ಮಾರ್ಟ್ ಲಾಕ್ ಇರುತ್ತದೆ.  ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಹಾಗೂ ವಿಡಿಯೋ ಕ್ಯಾಮರಾ ಅಳವಡಿಕೆಯಾಗಿದೆ. ಅದನ್ನು ಪಾಸ್ವರ್ಡ್ ಮೂಲಕ ಮಾತ್ರ ತೆಗೆಯಲು ಸಾಧ್ಯ.

ಇದು ಹೇಗೆ ಕೆಲಸ ಮಾಡುತ್ತೆ…

ಇದು ಬುಲೆಟ್ ಪ್ರೂಫ್ ಆಗಿದ್ದು, ಚಾಕುವಿನಿಂದ ಕತ್ತರಿಸಿದರೂ ತುಂಡಾಗದು. ವಿಡಿಯೋ ಕ್ಯಾಮರಾದಲ್ಲಿ ಅತ್ಯಾಚಾರಿಯ ಮುಖ ರೆಕಾರ್ಡ್ ಆಗುತ್ತದೆ. ಸಂಭಾಷಣೆಯನ್ನು ಕೂಡ ರೆಕಾರ್ಡ್ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ.ಯಾರಾದರೂ ಅತ್ಯಾಚಾರ ಎಸಗಲು ಬಂದರೆ ಜಿಪಿಎಸ್ ಎಚ್ಚರಿಕೆ ವ್ಯವಸ್ಥೆ ಪೊಲೀಸರಿಗೆ ಸಂದೇಶ ರವಾನಿಸುತ್ತದೆ.

ಹೀಗಾಗಿ ಅಂಡರ್‌ವೇರನ್ನು ಸುಲಭವಾಗಿ ಕಳಚಲು ಆಗದು. ‘ಯಾರಾದರೂ ಕಾಮುಕರು ಮಹಿಳೆಯೊಬ್ಬಳನ್ನು ಚುಡಾಯಿಸಲು ಯತ್ನಿಸಿದರೆ ಇದು ಪೊಲೀಸರಿಗೆ ಹಾಗೂ ಸಾಧನದಲ್ಲಿ ನೋಂದಾಯಿತವಾದ ಸಂಬಂಧಿಕರ ದೂರವಾಣಿಗೆ ಸಂದೇಶ  ಕಳುಹಿಸತ್ತದೆ.. ಹಾಗಾಗಿ ಘಟನಸ್ಥಳಕ್ಕೆ ಪೊಲೀಸರಾಗಲಿ,ಸಂಭಂದಿಕರಾಗಲಿ ಬೇಗೆ ತಲುಪಲು ಇದು ಸಹಾಯ ಮಾಡುತ್ತದೆ ಎಂದು ಸೀನು ಕುಮಾರಿ ಹೇಳಿದ್ದಾರೆ.

ಯಾರಿದು ಸೀನು ಕುಮಾರಿ

ಉತ್ತರಪ್ರದೇಶದ ಫರೂಖಾಬಾದ್‌’ನ 19 ವರ್ಷದ ಸೀನು ಕುಮಾರಿ ಎಂಬ ಯುವತಿಯೇ ಈ ಮಾಡೆಲ್ ತಾಯಾರಿಸಿದ್ದಾರೆ.ಸೀನು ಕುಮಾರಿ ಈ ವಿಶೇಷ ಒಳ ಉಡುಪು ತಯಾರಿಕೆಗಾಗಿ 4300 ರೂ. ಖರ್ಚು ಮಾಡಿದ್ದಾರೆ ಎಂದು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

    2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…