ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.
ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ ಕಾರಣಗಳಿರುತ್ತವೆ. ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು , ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ.
ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ , ಸ್ಥೂಲ ಜೀರ್ಣ ಶಕ್ತಿ ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.
ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ ಹೇಳುತ್ತಾರೆ “ನಾನಾವೃತ ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.
ವ್ಯಾಧಿಕ್ಷಮತ್ವ- ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ ಬೇಗನೆ ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,
1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.
2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.
3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ ಒಳಗೊಂಡಂತೆ ಇದೆ.
ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ ಪ್ರಕಾರ ಪೋಲಿಯೋ, ದಡಾರ ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.
ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ ಹಾಗು ಎರಡನೆಯದಾಗಿ ಎಲ್ಲ ವ್ಯಕ್ತಿಗಳು ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.
ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…