inspirational

ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

115
Charaka

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.

ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ  ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ  ಕಾರಣಗಳಿರುತ್ತವೆ.  ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ  ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು  ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು ,  ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ. 

ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು  ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ  , ಸ್ಥೂಲ ಜೀರ್ಣ ಶಕ್ತಿ  ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.

ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ  ಹೇಳುತ್ತಾರೆ “ನಾನಾವೃತ  ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.

ವ್ಯಾಧಿಕ್ಷಮತ್ವ-  ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ  ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ  ಬೇಗನೆ  ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

Charaka

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,

1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ   ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ  ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.

2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ  ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ  ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.

3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ  ಒಳಗೊಂಡಂತೆ ಇದೆ.  

ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ  ಪ್ರಕಾರ  ಪೋಲಿಯೋ, ದಡಾರ  ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ  ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ  ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.

ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ  ಹಾಗು ಎರಡನೆಯದಾಗಿ  ಎಲ್ಲ ವ್ಯಕ್ತಿಗಳು  ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ  ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ  ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.

ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ  ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ  ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .

  • Mayoon N / Biotechnologist / Director of DRM Career Build Center , kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕ್ಷೇತ್ರ ಹೊರನಾಡು ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದಾ ಕುತೂಹಲಕಾರಿ ಸಂಗತಿಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what   …

  • ಉಪಯುಕ್ತ ಮಾಹಿತಿ

    ಆಧಾರ್ ಕಾರ್ಡ್ ನಲ್ಲಿರುವ ಈ ಮಾಹಿತಿಯನ್ನು ತಿದ್ದುಪಡಿ ಮಾಡಲು ಇರುವುದೇ ಒಂದೇ ಅವಕಾಶ ನಿಮಗೆ?

    ಆಧಾರ್ ನಲ್ಲಾದ ಈ ತಪ್ಪನ್ನು ತಿದ್ದಲು ನಿಮಗೆ ಇನ್ನೊಂದೇ ಅವಕಾಶ ಸಿಗಲಿದೆ. ಆಧಾರ್ ಕಾರ್ಡ್ ಸಿದ್ಧವಾಗಿದ್ದು, ಜನ್ಮ ದಿನಾಂಕ ತಪ್ಪಾಗಿದ್ದರೆ ಪದೇ ಪದೇ ಇದನ್ನು ಬದಲಿಸಲು ಸಾಧ್ಯವಿಲ್ಲ. ಒಮ್ಮೆ ಮಾತ್ರ ನೀವು ಜನ್ಮ ದಿನಾಂಕದಲ್ಲಿ ತಿದ್ದುಪಡಿ ಮಾಡಬಹುದು. ಇದನ್ನು ಯುಐಡಿಎಐ ಅಧಿಕೃತ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದೆ. ವಿಳಾಸ ಬಿಟ್ಟು ಆಧಾರ್ ನಲ್ಲಾಗಿರುವ ಯಾವುದೇ ತಪ್ಪನ್ನು ತಿದ್ದಲು ಆಧಾರ್ ಕೇಂದ್ರಕ್ಕೆ ಹೋಗಬೇಕಾಗುತ್ತದೆ. ಜನ್ಮ ದಿನಾಂಕವನ್ನು ಕೂಡ ಆಧಾರ್ ಕೇಂದ್ರಕ್ಕೆ ಹೋಗಿಯೇ ತಿದ್ದಬೇಕು. ಜನ್ಮ ದಿನಾಂಕ ತಿದ್ದುಪಡಿ ಮಾಡುವಾಗ ಸೂಕ್ತ…

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.