ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.
ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ ಕಾರಣಗಳಿರುತ್ತವೆ. ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು , ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ.
ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ , ಸ್ಥೂಲ ಜೀರ್ಣ ಶಕ್ತಿ ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.
ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ ಹೇಳುತ್ತಾರೆ “ನಾನಾವೃತ ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.
ವ್ಯಾಧಿಕ್ಷಮತ್ವ- ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ ಬೇಗನೆ ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,
1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.
2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.
3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ ಒಳಗೊಂಡಂತೆ ಇದೆ.
ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ ಪ್ರಕಾರ ಪೋಲಿಯೋ, ದಡಾರ ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.
ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ ಹಾಗು ಎರಡನೆಯದಾಗಿ ಎಲ್ಲ ವ್ಯಕ್ತಿಗಳು ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.
ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….