ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.
ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ ಕಾರಣಗಳಿರುತ್ತವೆ. ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು , ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ.
ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ , ಸ್ಥೂಲ ಜೀರ್ಣ ಶಕ್ತಿ ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.
ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ ಹೇಳುತ್ತಾರೆ “ನಾನಾವೃತ ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.
ವ್ಯಾಧಿಕ್ಷಮತ್ವ- ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ ಬೇಗನೆ ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,
1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.
2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.
3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ ಒಳಗೊಂಡಂತೆ ಇದೆ.
ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ ಪ್ರಕಾರ ಪೋಲಿಯೋ, ದಡಾರ ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.
ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ ಹಾಗು ಎರಡನೆಯದಾಗಿ ಎಲ್ಲ ವ್ಯಕ್ತಿಗಳು ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.
ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….
ಪ್ರಾಯದ ಸಮಯದಲ್ಲಿ ಪ್ರತಿಯೊಬ್ಬರಿಗೂ ಮುಖದಲ್ಲಿ ಮೊಡವೆ ಗುಳ್ಳೆಗಳು ಮೂಡುವುದು ಸಹಜ. ಕೇವಲ ಒಂದು ಅಥವಾ ಎರಡು ಗುಳ್ಳೆಗಳು ಬಂದರೆ ಪರವಾಗಿಲ್ಲ ಎನ್ನಬಹುದು. ಆದರೆ ಇಡೀ ಮುಖದ ತುಂಬಾ ತುಂಬಿಕೊಂಡು ಮುಖದ ಅಂದವನ್ನೇ ಹಾಳು ಮಾಡಿ ಬಿಡುತ್ತವೆ. ಮತ್ತು ವಾಸಿಯಾದ ನಂತರವೂ ಸಹ ಅವುಗಳ ಕಲೆಗಳು ಮುಖದ ಚರ್ಮದ ಮೇಲೆ ದೀರ್ಘಕಾಲ ಹಾಗೆಯೇ ಉಳಿದು ಮುಖದ ಮೇಲೆ ಕಪ್ಪು ಬಣ್ಣ ಚುಕ್ಕೆಗಳ ರೀತಿಯಲ್ಲಿ ಮೆತ್ತಿಕೊಂಡಂತೆ ಕಾಣುತ್ತದೆ. ಇಷ್ಟೇ ಅಲ್ಲದೆ ಚಿಕನ್ ಪಾಕ್ಸ್ ನಿಂದ ಬಳಲುತ್ತಿರುವವರು ಸಹ ಮುಖದ ಮೇಲೆ…
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…