ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.
ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ ಕಾರಣಗಳಿರುತ್ತವೆ. ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು , ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ.
ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ , ಸ್ಥೂಲ ಜೀರ್ಣ ಶಕ್ತಿ ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.
ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ ಹೇಳುತ್ತಾರೆ “ನಾನಾವೃತ ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.
ವ್ಯಾಧಿಕ್ಷಮತ್ವ- ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ ಬೇಗನೆ ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,
1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.
2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.
3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ ಒಳಗೊಂಡಂತೆ ಇದೆ.
ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ ಪ್ರಕಾರ ಪೋಲಿಯೋ, ದಡಾರ ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.
ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ ಹಾಗು ಎರಡನೆಯದಾಗಿ ಎಲ್ಲ ವ್ಯಕ್ತಿಗಳು ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.
ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….