ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು ರೋಗಿಗಳಾಗುತ್ತಾರೆ ಅಂತಹ ಸಂಧರ್ಭದಲ್ಲಿ ಹಿತ ಅಥವಾ ಅಹಿತ ಆಹಾರದಿಂದಲೇ ಆರೋಗ್ಯ , ಅನಾರೋಗ್ಯಗಳಾಯಿತು ಎಂದು ಹೇಗೆ ನಾವು ನಿಶ್ಚಯಿಸಿಕೊಳ್ಳಬಹುದು ಎಂಬುದೇ ಆ ಪ್ರಶ್ನೆ.
ಇದಕ್ಕೆ ಉತ್ತರಿಸುತ್ತಾ ಅತ್ರೇಯರು ಹೇಳುತ್ತಾರೆ ಕೇವಲ ಹಿತಾಹಾರ ಸೇವನೆಯಿಂದ ಎಲ್ಲ ರೋಗಗಳ ಆತಂಕ ನಿವಾರಣೆ ಅಸಾಧ್ಯ. ಏಕೆಂದರೆ ಅಹಿತ ಆಹಾರಕ್ಕೂ ಮಿಗಿಲಾಗಿ ರೋಗದ ಉತ್ಪತ್ತಿಗೆ ಇನ್ನು ಅನೇಕ ಕಾರಣಗಳಿರುತ್ತವೆ. ಉದಾಹರಣೆಗೆ-ಕಾಲ ವಿಪರ್ಯಾಯ ಎಂದರೆ ಋತು ಕಾಲಕ್ಕೆ ಅನುಸಾರ ಗುಣಗಳಾದ ಚಳಿ ಸೆಖೆ ಮಳೆಗಳು ತೀವ್ರವಾಗಿ ಏರು ಪೆರು ಆಗುವುದು ,ಇದು ರೋಗಕಾರಕ ಕ್ರಿಮಿಗಳನ್ನು ಬಲಪಡಿಸುವುದು ನಮ್ಮ ಶರೀರ ಬಲವನ್ನು ಕಡಿಮೆ ಮಾಡುವುದು.

ಪ್ರಜ್ಞಾಪರಾಧ – ಆರೋಗ್ಯಕ್ಕೆ ಹಾನಿಕರ ಎಂದು ತಿಳಿದು ತಿಳಿದು ಮಾಡುವಂತಹವು ಅನೇಕ ಗುಟ್ಕಾ ,ತಂಬಾಕು ಸೇವನೆಯಿಂದ ಹಿಡಿದು ಐಸ್ ಕ್ರೀಮ್ , ಅತಿ ಮಾಸಲೆಗಳನ್ನು ತಿಂದು ಅಸಿಡಿಟಿ ಮಾಡಿಕೊಳ್ಳುವುದು, ಹಸಿವಿಲ್ಲದಿದ್ದರು ಕೂಡ ಅತಿಯಾಗಿ ತಿನ್ನುವುದು, ಶುಚಿಯಾಗಿ ಕೈ ಕಾಲು ತೊಳೆಯದೆ ಇರುವುದು ,ಸ್ವಚ್ಛ ಬಟ್ಟೆ ಧರಿಸದಿರುವುದು , ಎಲ್ಲವು ಪ್ರಜ್ಞಾಪರಾಧಗಳೇ ,ನಮ್ಮ ಜ್ಞಾನೇಂದ್ರಿಯಗಳಿಗೆ ಒಗ್ಗದ ಶಬ್ದ ,ಸ್ಪರ್ಶ ,ರೂಪ , ರುಚಿ , ಹಾಗು ವಾಸನೆಗಳನ್ನು ಅನುಭವಿಸುವುದು ಇತ್ಯಾದಿ.
ಪ್ರತಿ ವ್ಯಕ್ತಿಯ ಶರೀರದ ರಕ್ತ ಮಾಂಸಾದಿ ಧಾತುಗಳು ,ವಾಸಿಸುವ ಸ್ಥಳ,ಶರೀರ ಬಲ ,ಕಾಲ- ವಾತಾವರಣ , ಸ್ಥೂಲ ಜೀರ್ಣ ಶಕ್ತಿ ಹಾಗು ಸೂಕ್ಷ್ಮವಾದ ಪ್ರತಿ ಕೋಶಗಳ ಮೈಟೊಕಾಂಡ್ರಿಯ ದಲ್ಲಿ ಆಗುವ ಜೀರ್ಣ ಕ್ರಿಯೆ ,ವಯಸ್ಸು , ಅಹಿತದ ಪ್ರಮಾಣ ಇತ್ಯಾದಿ ಅನೇಕ ಕಾರಣಗಳ ವಿವಿಧ ರೀತಿಯ ಸಂಯೋಗದಿಂದ ವ್ಯಾಧಿ ಉತ್ಪತ್ತಿ ಆಗುತ್ತದೆ ಅದಕ್ಕಾಗಿಯೇ ಅದೇ ರೋಗವು ಕೆಲವರಲ್ಲಿ ಶೀಘ್ರವಾಗಿ ಉತ್ಪತ್ತಿ ಆಗಬಹುದು ಕೆಲವರಲ್ಲಿ ನಿಧಾನವಾಗಿ , ಹಾಗು ಸಣ್ಣದಾಗಿಯೂ ಬರಬಹುದು ಅಥವಾ ಉಗ್ರ ರೂಪ ತಾಳಿ ಸಾವಿಗೂಕಾರಣ ಆಗಬಹುದು. ಇದೇ ಕಾರಣಕ್ಕಾಗಿ ಯಾವುದೇ ಕೊರೊನದಂತಹ ಸಾಂಕ್ರಾಮಿಕ ಕಾಯಿಲೆಗಳು ಕೂಡ ಒಂದೇ ಮನೆಯ, ಒಂದೇ ಕಚೇರಿಯ ಎಲ್ಲರಿಗು ಒಂದೇ ತರಹದಲ್ಲಿ ಭಾದಿಸುತ್ತಿಲ್ಲ.
ಮುಂದುವರಿದು ಅತ್ರೇಯರು ಸಾಂಧರ್ಭಿಕವಾಗಿ ಹೇಳುತ್ತಾರೆ “ನಾನಾವೃತ ಮುಖೋ ಜೃಂಭ ,ಕ್ಷವತು, ಹಾಸ್ಯಾಂ ವಾ ಪ್ರವರ್ತಯೇತ್” ಅಂದರೆ ಬಾಯಿ ಹಾಗು ಮೂಗನ್ನು ಮುಚ್ಚದೆ ಆಕಳಿಸುವುದು ,ಸೀನುವುದು ,ನಗೆಯಾಡುವುದು ಮಾಡಬಾರದು ,ಮೂಗಿನ ಹೊಳ್ಳೆಗಳಿಗೆ ಬೆರಳು ಹಾಕುವುದು ,ಉಗುರು ಕಚ್ಚುವುದು ,ಕಂಡ ಕಂಡಲ್ಲಿ ಉಗುಳುವುದು ,ಮಲಮೂತ್ರಗಳ ವಿಸರ್ಜನೆಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ಮಾಡದಂತೆ ಎಚ್ಚರಿಸಿದ್ದಾರೆ ,.
ವ್ಯಾಧಿಕ್ಷಮತ್ವ- ಆಯುರ್ವೇದದಲ್ಲಿ ವ್ಯಾಧಿಕ್ಷಮತ್ವ ಎಂಬುದು ಬಹುಚರ್ಚಿತ ವಿಷಯವಾಗಿದ್ದು ಅದನ್ನೇ ಶರೀರ ಬಲ ಅಥವಾ ಈ ದಿನಗಳಲ್ಲಿ ಇಮ್ಯೂನಿಟಿ ಎಂದು ಕರೆಯುತ್ತಾರೆ ,ವ್ಯಾಧಿ ಕ್ಷಮತ್ವ ಎಂದರೆ ವ್ಯಾಧಿ ಬಲವನ್ನು ವಿರೋಧಿಸುವ ಶರೀರ ಹಾಗು ಮನಸ್ಸಿನ ಶಕ್ತಿಯಾಗಿದ್ದು ವ್ಯಾಧಿ ಬರದಂತೆ ತಡೆಯುವುದರೊಂದಿಗೆ ,ಬಂದರೋಗದಿಂದ ಬೇಗನೆ ಗುಣಮುಖವಾಗಲು ಪ್ರಧಾನ ಕಾರಣವಾಗಿರುವ ಪ್ರತಿರೋಧಕ ಶಕ್ತಿಯೇ ಆಗಿರುತ್ತದೆ ಅದರ ಕೊರತೆಯಿಂದಾಗಿ ಅನೇಕ ವಯಸ್ಕರು , ಹೃದ್ರೋಗಿಗಳು ಕೊರೋನ ಕ್ಕೆ ಬಲಿಯಾಗುವುದು ಗೋಚರಿಸುತ್ತಿದೆ ,

ಶರೀರ ಬಲ ಚರಕ ಸಂಹಿತೆ ಪ್ರಕಾರ ಮೂರು ತರಹದ್ದಾಗಿರುತ್ತದೆ ,
1) ಸಹಜ ಬಲ- ಇದು ಜನ್ಮದಿಂದ ಪ್ರಾಪ್ತಿ ಆಗುವಂತದ್ದು ,ಅಪ್ಪ ಅಮ್ಮನಿಂದ ಉತ್ಪತ್ತಿ ಆದ ವೀರ್ಯ ಅಂಡಾಣು, ಗರ್ಭಿಣಿಯ ಆಹಾರ ಹಾಗು ಅವರ ಮನಸ್ಸಿಗೆ ಅನುಗುಣವಾಗಿರುತ್ತದೆ , ಸಧೃಡ ದೇಹ ಇದ್ದು ದುರ್ಬಲ ಮನಸ್ಸಿರಬಹುದು ಅಥವಾ ಬಲಹೀನ ಶರೀರದಲ್ಲಿ ಅಪ್ಪ ಅಮ್ಮನಿಗೆ ಅನುಗುಣವಾಗಿ ಸತ್ವಯುತ ಮನಸ್ಸಿರಬಹುದು.
2) ಎರಡನೆಯದು ಕಾಲಜ ಬಲ- ಎಂದರೆ ಋತುವಿಗೆ ಹಾಗು ವಯಸ್ಸಿಗೆ ಅನುಸಾರವಾಗಿ ಉದಾಹರಣೆಗೆ ಹೇಮಂತ ಶಿಶಿರ ಋತುಗಳಲ್ಲಿ ಸಹಜವಾಗಿ ಶರೀರ ಬಲ ಹೆಚ್ಚಿದ್ದು ಕಾಯಿಲೆಗಳು ಕಮ್ಮಿ ಇರುವುದು ಕಂಡು ಬರುತ್ತದೆ ಅಂತೆಯೇ ಬಾಲ್ಯ , ಯೌವನ ಹಾಗು ವೃದ್ಧಾಪ್ಯ ಕಾಲಾನುಸಾರ ಶರೀರ ಬಲ.
3) ಮೂರನೆಯದಾಗಿ ಯುಕ್ತಿ ಕೃತ ಬಲ- ಅಂದರೆ ನಮ್ಮ ಬುದ್ಧಿವಂತಿಕೆಯಿಂದ ಶರೀರ ಬಲವನ್ನು ಪಡೆದುಕೊಳ್ಳುವುದು ಇದರಲ್ಲಿ ವ್ಯಾಯಾಮ, ಹಾಲು , ತುಪ್ಪ, ಹಣ್ಣುಗಳ ಸೇವನೆ , ಒಳ್ಳೆಯ ದಿನಚರಿ ಪಾಲನೆ ,ಲೇಹ್ಯ ರಾಸಾಯನದಂತಹ ಔಷಧಿಗಳು ಇಂದಿನ ಯುಗದ ವ್ಯಾಕ್ಸೀನ್ ಕೂಡ ಒಳಗೊಂಡಂತೆ ಇದೆ.
ವ್ಯಾಧಿಕ್ಷಮತ್ವ ಎಂಬುದು ಆಯುರ್ವೇದದ ಸಿದ್ಧಾಂತ ಪ್ರಕಾರ ಪೋಲಿಯೋ, ದಡಾರ ಅಥವಾ ಇತರೆ ಯಾವುದೇ ವ್ಯಾಕ್ಸೀನ್ ನಂತೆ ಯಾವುದೇ ಒಂದು ನಿರ್ದಿಷ್ಟ ಕ್ರಿಮಿಯ ರೋಗದ ವಿರುದ್ಧವಾಗಿ ಇರುವುದಿಲ್ಲ, ಇದು ಎರಡು ವಿಷಯಗಳ ಆಧಾರಿತವಾಗಿ ಇದೆ.
ಮೊದಲನೆಯದಾಗಿ ಕಾಯಿಲೆ ತರುವ ಕ್ರಿಮಿಗೆ ಅನುಕೂಲಕರವಾಗುವಂತೆ ನಮ್ಮ ದೇಹ ಇದ್ದಾಗ ಕಾಯಿಲೆ ಆಗುತ್ತದೆ ಹಾಗು ಎರಡನೆಯದಾಗಿ ಎಲ್ಲ ವ್ಯಕ್ತಿಗಳು ಕೂಡ ಒಂದೇ ಮಟ್ಟಕ್ಕೆ ಕಾಯಿಲೆಗೆ ಒಳಪಡುವುದಿಲ್ಲ. ,ತಾತ್ಪರ್ಯ ಏನೆಂದರೆ ಹೇಗೆ ಅನುಕೂಲವಾದಂತ ಭೂಮಿ ಸಿಗದಿದ್ದರೆ ಬಿತ್ತಿದ ಬೀಜ ತಾನೇ ನಾಶವಾಗುವುದೋ ,ಇಂಧನ ಇಲ್ಲದ ಅಥವಾ ಗಾಳಿ ಇಲ್ಲದೆ ಬೆಂಕಿ ಹೇಗೆ ಆರುವುದೋ ಅಂತೆಯೇ ವ್ಯಾಧಿಕ್ಷಮತ್ವದಿಂದಾಗಿ ವ್ಯಾಧಿಗೆ ಅನುಕೂಲ ಪರಿಸ್ಥಿತಿ ನಮ್ಮ ದೇಹದಲ್ಲಿ ಇಲ್ಲದಿದ್ದಾಗ ಸಹಜವಾಗಿ ಸಾಂಕ್ರಾಮಿಕ ಹಾಗು ಇತರೆ ಕಾಯಿಲೆಗಳ ವಿರುದ್ಧ ದೇಹ ಗೆಲ್ಲುತ್ತದೆ , ಕ್ರಿಮಿ ಯಾವುದು ಎಂಬುದು ಮುಖ್ಯ ಅಲ್ಲ ನಮ್ಮ ಶರೀರ ಹೇಗಿದೆ ಎಂಬುದೇ ಅತಿ ಮುಖ್ಯ.
ವ್ಯಾಧಿಕ್ಷಮತ್ವ ಎಂಬುದು ಸೂಪರ್ ಮಾರ್ಕೆಟ್ ಗಳಲ್ಲಿ ಮಾರಾಟಕ್ಕಿರುವ ವಸ್ತುವಲ್ಲ ,ಆರೋಗ್ಯವನ್ನು ಕಾಪಾಡಲು ಬೇಕಾದ ಆಹಾರ ,ವಿಹಾರ, ನಿದ್ರೆ , ಒತ್ತಡ ರಹಿತ ಜೀವನ ಹಾಗು ದಿನಚರಿಗಳಲ್ಲಿ ಅಡಗಿದೆ ,ಅಂತೆಯೇ ಮನೆ ಮದ್ದಿಗೆ ಹೇಳುವ ಅರಶಿನ ಇತ್ಯಾದಿ ಮಸಾಲೆಗಳು ಮಾತ್ರ ಆಯುರ್ವೇದ ಅಲ್ಲ ಅವು ಆಯುರ್ವೇದದ ಔಷಧಿ ಸಮುದ್ರದಿಂದ ಒಂದು ಹನಿ ತೆಗೆದಂತೆ ಮಾತ್ರ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…